ರೂಪಾಯಿ ಆಗಲಿದೆ ಕಿಂಗ್‌; ವಿದೇಶಿ ವಹಿವಾಟಿಗೆ ದೇಶಿ ಟಚ್‌ ನೀಡಲು ಯತ್ನ

ಹೊಸ ವಿದೇಶಿ ವ್ಯಾಪಾರ ನೀತಿ ಅನಾವರಣ

Team Udayavani, Apr 1, 2023, 7:25 AM IST

ರೂಪಾಯಿ ಆಗಲಿದೆ ಕಿಂಗ್‌; ವಿದೇಶಿ ವಹಿವಾಟಿಗೆ ದೇಶಿ ಟಚ್‌ ನೀಡಲು ಯತ್ನ

ನವದೆಹಲಿ: ಮುಂದಿನ ದಿನಗಳಲ್ಲಿ ದೇಶದ ರೂಪಾಯಿಯೇ ವಿದೇಶಗಳ ರಾಷ್ಟ್ರಗಳ ಜತೆಗಿನ ವಹಿವಾಟಿನಲ್ಲಿ ಪ್ರಧಾನ ಪಾತ್ರ ವಹಿಸಲಿದೆ. ಅದಕ್ಕಾಗಿ ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಶುಕ್ರವಾರ ಪ್ರಕಟಿಸಲಾಗಿರುವ ಹೊಸ ವಿದೇಶ ವ್ಯಾಪಾರ ನೀತಿಯಲ್ಲಿ ಈ ಘೋಷಣೆ ಮಾಡಲಾಗಿದೆ.

ವಿಶೇಷವಾಗಿ ಡಾಲರ್‌ ಕೊರತೆ ಇರುವ ರಾಷ್ಟ್ರಗಳ ಜತೆಗೆ ಅಥವಾ ಕರೆನ್ಸಿ ಕೊರತೆ ಇರುವ ದೇಶಗಳ ಜತೆಗೆ ಇಂಥ ವಹಿವಾಟಿಗೆ ಆದ್ಯತೆ ನೀಡಲಾಗುತ್ತದೆ. ಈ ಮೂಲಕ ಅಮೆರಿಕದ ಡಾಲರ್‌ಗೆ ಸಮನಾಗಿ ಜಗತ್ತಿನ ವ್ಯಾಪಾರ ಕ್ಷೇತ್ರದಲ್ಲಿ ದೇಶದ ಕರೆನ್ಸಿಯನ್ನು ಬಿಂಬಿಸುವ ಪ್ರಯತ್ನ ಮಾಡಲಾಗಿದೆ ಎಂದು ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಹೊಸ ವಿದೇಶ ವ್ಯಾಪಾರ ನೀತಿ ಬಿಡುಗಡೆಗೊಳಿಸಿದ ಬಳಿಕ ಅವರು ಮಾತಾಡಿದರು. 2030ರ ವೇಳೆಗೆ ದೇಶದ ರಫ್ತು ಪ್ರಮಾಣವನ್ನು 2 ಲಕ್ಷಕೋಟಿ ಡಾಲರ್‌ಗೆ ವೃದ್ಧಿಸಲು ಪ್ರಧಾನ ಆದ್ಯತೆ ನೀಡಲಾಗಿದೆ. ಈ ಬಾರಿಯ ವಿಶೇಷವೆಂದರೆ, ಐದು ವರ್ಷಗಳಿಗೆ ಅನ್ವಯವಾಗುವಂತೆ ಪ್ರಕಟಿಸಲಾಗುತ್ತಿದ್ದ ನಿಯಮವನ್ನು ಮುರಿಯಲಾಗಿದೆ. ಜಗತ್ತಿನ ಔದ್ಯಮಿಕ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕಂತೆ ನೀತಿಯನ್ನು ಉನ್ನತೀಕರಿಸುವಂತೆಯೂ ಸರಳೀಕರಿಸಲಾಗಿದೆ.

ಇಂದಿನಿಂದಲೇ ಜಾರಿ:
ಏ.1ರಿಂದಲೇ ಹೊಸ ನೀತಿ ಜಾರಿಯಾಗಲಿದೆ. ಅದರಂತೆ, ಮುಂದಿನ 4-5 ತಿಂಗಳ ಅವಧಿಯಲ್ಲಿ ವಿವಿಧ ವಿಭಾಗಗಳ ಅನ್ವಯ, ದೇಶಗಳಿಗೆ ಅನುಸಾರವಾಗಿ ಸರ್ಕಾರದ ಪ್ರತಿನಿಧಿಗಳು ಪ್ರವಾಸ ಕೈಗೊಂಡು, ದೇಶದಲ್ಲಿ ಹೂಡಿಕೆಯ ಪ್ರಾಮುಖ್ಯತೆಯ ಬಗ್ಗೆ ವಿವರಿಸಲಿದ್ದಾರೆ ಎಂದೂ ಸಚಿವ ಗೋಯಲ್‌ ತಿಳಿಸಿದರು.

ಕೇಂದ್ರ ಸರ್ಕಾರ ಮಾ.14ರಂದು ಸಂಸತ್‌ಗೆ ನೀಡಿದ ಉತ್ತರದಲ್ಲಿ ಜಗತ್ತಿನ 18 ರಾಷ್ಟ್ರಗಳಲ್ಲಿ ಈಗಾಗಲೇ ರೂಪಾಯಿ ಮೂಲಕ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿತ್ತು.

ಪ್ರಸಕ್ತ ವಿತ್ತೀಯ ವರ್ಷದಲ್ಲಿ 765 ಬಿಲಿಯನ್‌ ಅಮೆರಿಕನ್‌ ಡಾಲರ್‌ ಮೌಲ್ಯದ ಸರಕು ಮತ್ತು ಸೇವೆಗಳು ರಫ್ತಾಗಿರುವ ಸಾಧ್ಯತೆ ಇದೆ. 2021-22ನೇ ಸಾಲಿನಲ್ಲಿ ಅದರ ಮೌಲ್ಯ 676 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿತ್ತು.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

1-sdddasdas

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

train tragedy

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು