ನೆನಪಿರಲಿ, ಕೇಂದ್ರ ಸರ್ಕಾರ ಕೃಷಿ ಮಸೂದೆಯನ್ನು ಹಿಂಪಡೆಯಲೇಬೇಕಾಗುತ್ತದೆ: ರಾಹುಲ್ ಗಾಂಧಿ
Team Udayavani, Jan 14, 2021, 5:55 PM IST
ನವದೆಹಲಿ: ನನ್ನ ಮಾತನ್ನು ಸರಿಯಾಗಿ ನೆನಪಿನಲ್ಲಿಟ್ಟುಕೊಳ್ಳಿ. ಕೇಂದ್ರ ಸರ್ಕಾರ ತನ್ನ ನೂತನ ಕೃಷಿ ಮಸೂದೆಯನ್ನು ಹಿಂಪಡೆಯಲೇಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.
ತಮಿಳುನಾಡಿನ ಅವನಿಯಪುರಂ ನಲ್ಲಿ ನಡೆದ ‘ಜಲ್ಲಿಕಟ್ಟು’ ಕ್ರೀಡೆಯನ್ನು ವೀಕ್ಷಿಸಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಇವರು “ನನ್ನ ಮಾತನ್ನು ಸರಿಯಾಗಿ ನೆನಪಿನಲ್ಲಿಟ್ಟುಕೊಳ್ಳಿ, ಕೇಂದ್ರ ಸರ್ಕಾರವು ರೈತ ವಿರೋಧಿಯಾಗಿ ರೂಪಿಸಲು ಹೊರಟಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕಾದ ಅನಿವಾರ್ಯತೆ ಇದೆ. ಈ ಮಾತನ್ನು ಸರಿಯಾಗಿ ಗಮನದಲ್ಲಿಟ್ಟುಕೊಳ್ಳಿ ಎಂದಿದ್ದಾರೆ.
ಕೋವಿಡ್ ಸೋಂಕಿನ ಸಮಯದಲ್ಲಿ ಸರ್ಕಾರ ಜನರ ಪರ ನಿಲ್ಲಲಿಲ್ಲ. ಇದೀಗ ತನ್ನ 2-3 ಜನ ಉದ್ಯಮಿಗಳ ಒಳಿತಿಗಾಗಿ ದೇಶದ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಕೇವಲ ಮಲ್ಟಿ ನ್ಯಾಷನಲ್ ಕಂಪನಿಗಳ ಹಿತದೃಷ್ಟಿಯಿಂದ ಈ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಸಿಡಿ ರಾಜಕಾರಣ ಬಿಜೆಪಿ ಮುಕ್ತ ಕರ್ನಾಟಕಕ್ಕೆ ಮುನ್ನುಡಿ : ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್
ಈ ನಡುವೆ ನೀವು ದೇಶದ ಪ್ರಧಾನಿಯೇ ಅಥವಾ 2-3 ಜನ ಉದ್ಯಮ ಸ್ನೇಹಿತರ ಪ್ರಧಾನಿಯೇ ಎಂದು ನರೆಂದ್ರ ಮೋದಿಯವರನ್ನು ಪ್ರಶ್ನಿಸಿರುವ ರಾಹುಲ್ ಗಾಂಧಿ, ರೈತರ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ತಮ್ಮ ಉದ್ಯಮ ಸ್ನೇಹಿತರ ಹಿತಕ್ಕಾಗಿ ರೈತ ಚಳುವಳಿಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ನುಡಿದರು.
ಇದನ್ನೂ ಓದಿ:ಕೋವಿಡ್ ಗೆ ರಾಮಬಾಣ: ಮಂಡ್ಯ ಜಿಲ್ಲೆಗೆ ಬಂದಿಳಿದ ಕೋವಿಶೀಲ್ಡ್ ಲಸಿಕೆ
ರೈತರು ದೇಶದ ಬೆನ್ನೆಲುಬು. ಅವರ ಮೇಲೆ ದಬ್ಬಾಳಿಕೆ ನಡೆಸಿ ದೇಶವನ್ನು ಮುನ್ನಡೆಸಬಹುದು ಎಂಬ ಭಾವನೆ ಇದ್ದರೆ ಇತಿಹಾಸವನ್ನು ಒಮ್ಮೆ ಗಮನಿಸಿ ಎಂದಿರುವ ಇವರು, ಇತಿಹಾಸದಲ್ಲಿ ರೈತರು ದುರ್ಬಲವಾದಾಗಲೆಲ್ಲಾ ದೇಶ ದುರ್ಬಲಗೊಂಡಿದೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು