ಬೇನಾಮಿ ವಹಿವಾಟು,ಕಾಳ ಚಿನ್ನದ ವಿರುದ್ಧ ಕಠಿನ ಕ್ರಮ: ವೆಂಕಯ್ಯ ನಾಯ್ಡು
Team Udayavani, Jan 18, 2017, 7:40 PM IST
ಕೋಟ್ಟಯಂ : ಬೇನಾಮಿ ವ್ಯವಹಾರಗಳನ್ನು ತಡೆಯಲು ಹಾಗೂ ಚಿನ್ನದ ರೂಪದಲ್ಲಿ ಸಂಗ್ರಹಿಸಿಡಲಾಗಿರುವ ಕಾಳ ಸಂಪತ್ತನ್ನು ಬಯಲಿಗೆಳೆಯಲು ಸರಕಾರ ಕಠಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಇಂದಿಲ್ಲಿ ಹೇಳಿದರು.
ನೋಟು ಅಪನಗದೀಕರಣದ ಬಳಿಕ ಭ್ರಷ್ಟಾಚಾರ ಮತ್ತು ಕಪ್ಪು ಹಣ ವಿರುದ್ಧದ ಸಮರವನ್ನು ಸರಕಾರ ಮುಂದುವರಿಸಲಿದ್ದು ಶೀಘ್ರವೇ ಸರಕಾರ ಬೇನಾಮಿ ಆಸ್ತಿ ವಹಿವಾಟನ್ನು ತಡೆಯಲು ಕಠಿನ ಕಾನೂನನ್ನು ಅನುಷ್ಠಾನಿಸಲಿದೆ ಎಂದು ವೆಂಕಯ್ಯ ನಾಯ್ಡು ಎಚ್ಚರಿಸಿದರು.
ಈ ಸಂಬಂಧವಾಗಿ ಸರಕಾರವು 1988ರ ಬೇನಾಮಿ ವ್ಯವಹಾರಗಳ (ನಿಷೇಧ) ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲಿದೆ ಎಂದು ಸಚಿವ ನಾಯ್ಡು ಅವರು ಪಕ್ಷದ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡುತ್ತಾ ಹೇಳಿದರು.
ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ಈ ಕಾನೂನನ್ನು ಅನುಷ್ಠಾನಿಸಿರಲಿಲ್ಲ ಎಂದು ನಾಯ್ಡು ಹೇಳಿದರು. ಕಪ್ಪು ಹಣದ ವಿರುದ್ಧ ಸರಕಾರ ಕೈಗೊಂಡ ನೋಟು ಅಪನಗದೀಕರಣ ಕ್ರಮವು ವಿಫಲವಾಗಿದೆ ಎಂಬ ವಾದವನ್ನು ಅವರು ತಿರಸ್ಕರಿಸಿದರು.
ನೋಟು ಅಪನಗದೀಕರಣದ ಬಳಿಕ ಬ್ಯಾಂಕಿಗೆ ಮರಳಿರುವ ನಿಷೇಧಿತ ಹಣವು ಸಾಚಾ ಆಗಿದೆ ಎಂಬ ವಾದಕ್ಕೆ ಉತ್ತರಿಸಿದ ಸಚಿವ ನಾಯ್ಡು, ಕೂಲಂಕಷ ಪರಿಶೀಲನೆಯ ಬಳಿಕವೇ ಅದು ಶ್ರುತಪಡಲಿದೆ ಎಂದು ಹೇಳಿದರು. ನೋಟು ಅಪನಗದೀಕರಣ ಕ್ರಮದಿಂದ ದೇಶದ ಜನರಿಗೆ ಹಾಗೂ ಆರ್ಥಿಕತೆಗೆ ದೀರ್ಘ ಕಾಲದಲ್ಲಿ ಲಾಭವಾಗಲಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ