371ನೇ ವಿಧಿ ರದ್ದು ಇಲ್ಲ
ಅಕ್ರಮ ವಲಸಿಗರ ಸುಮ್ಮನೆ ಬಿಡಲ್ಲ: ಸಚಿವ ಅಮಿತ್ ಶಾ ಸ್ಪಷ್ಟನೆ
Team Udayavani, Sep 9, 2019, 5:13 AM IST
ಗುವಾಹಟಿ/ಹೊಸದಿಲ್ಲಿ: ಈಶಾನ್ಯ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಒದಗಿಸಿರುವಂಥ ಸಂವಿಧಾನದ 371ನೇ ವಿಧಿಯನ್ನು ಬದಲಿಸುವ ಅಥವಾ ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಜತೆಗೆ, ಈ ರಾಜ್ಯಗಳಲ್ಲಿ ಒಬ್ಬನೇ ಒಬ್ಬ ಅಕ್ರಮ ವಲಸಿಗನೂ ಪ್ರವೇಶಿಸದಂತೆ ನೋಡಿಕೊಳ್ಳುತ್ತೇವೆ ಎಂಬ ಆಶ್ವಾಸನೆಯನ್ನೂ ನೀಡಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ರವಿವಾರ ನಡೆದ ನಾರ್ತ್ ಈಸ್ಟ್ ಕೌನ್ಸಿಲ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ 370ನೇ ವಿಧಿ ರದ್ದು ಮಾಡಿದ ಬಳಿಕ ಕೇಂದ್ರ ಸರಕಾರವು 371ನೇ ವಿಧಿಯನ್ನೂ ರದ್ದು ಮಾಡಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಇವು ಸಂಪೂರ್ಣ ಸುಳ್ಳು ಹಾಗೂ ಹಾದಿತಪ್ಪಿಸುವ ಮಾಹಿತಿ. 371ನೇ ವಿಧಿ ರದ್ದು ಮಾಡಲ್ಲ ಎಂದು ಸಂಸತ್ನಲ್ಲೂ ನಾನು ಸ್ಪಷ್ಟ ಪಡಿಸಿದ್ದೇನೆ.
ಈಗ ಈಶಾನ್ಯದ 8 ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಈ ಮಾತುಗಳನ್ನು ಪುನರುಚ್ಚರಿಸುತ್ತಿದ್ದೇನೆ. 370 ಮತ್ತು 371ನೇ ವಿಧಿ ಭಿನ್ನವಾಗಿದ್ದು, 371 ಅನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಇದೇ ವೇಳೆ, ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಕುರಿತೂ ಪ್ರಸ್ತಾಪಿಸಿದ ಅಮಿತ್ ಶಾ, ‘ಈಗ ಎನ್ಆರ್ಸಿ ಬಗ್ಗೆ ಅನೇಕರು ಪ್ರಶ್ನಿಸುತ್ತಿದ್ದಾರೆ. ಆದರೆ, ಈ ಪ್ರದೇಶವನ್ನು ಯಾವೊಬ್ಬ ಅಕ್ರಮ ವಲಸಿಗನೂ ಪ್ರವೇಶಿಸದಂತೆ ನೋಡಿಕೊಳ್ಳುವುದಕ್ಕೆ ಬಿಜೆಪಿ ನೇತೃತ್ವದ ಸರಕಾರವು ಬದ್ಧವಾಗಿದೆ’ ಎಂದಿದ್ದಾರೆ. ಎನ್ಆರ್ಸಿ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ಶಾ ಅವರ ಮೊದಲ ಅಸ್ಸಾಂ ಭೇಟಿ ಇದಾಗಿದೆ.
ಸ್ಥಾನಮಾನ ಕುರಿತು ಒಪ್ಪಿಗೆ: ಇದೇ ವೇಳೆ, ಲಡಾಖ್ಗೆ ‘ಬುಡಕಟ್ಟು ಪ್ರದೇಶ’ ಸ್ಥಾನಮಾನ ನೀಡುವಂತೆ ಶಿಫಾರಸು ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಗೃಹ, ಕಾನೂನು, ಬುಡಕಟ್ಟು ವ್ಯವಹಾರಗಳ ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗ ಒಪ್ಪಿಗೆ ಸೂಚಿಸಿದೆ.
ಪಾಕ್-ಚೀನ ಮಾತುಕತೆ: ಈ ನಡುವೆ, ರವಿವಾರ ಪಾಕಿಸ್ಥಾನ ಮತ್ತು ಚೀನ ಕಾಶ್ಮೀರ ವಿಚಾರ ಕುರಿತು ಚರ್ಚಿಸಿದ್ದು, ಪರಸ್ಪರ ಗೌರವ ಮತ್ತು ಸಮಾನತೆಯ ಆಧಾರದಲ್ಲಿ ಮಾತುಕತೆ ಮೂಲಕ ವಿವಾದ ಇತ್ಯರ್ಥಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ರವಿವಾರ ಪಾಕ್ ಸೇನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಕದನ ವಿರಾಮ ಉಲ್ಲಂಘಿಸಿ, ಭಾರತದ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿ ನಡೆಸಿದೆ.
ಕಾಶ್ಮೀರಿ ಪಂಡಿತರ ಪ್ರತಿಭಟನೆ: ಅಮೆರಿಕದ ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯು ಕಾಶ್ಮೀರದ ಬೆಳವಣಿಗೆಗಳ ಕುರಿತಾಗಿ ಪಕ್ಷಪಾತೀಯ ವರದಿ ಪ್ರಕಟಿಸುತ್ತಿದೆ ಎಂದು ಆರೋಪಿಸಿ ಕಾಶ್ಮೀರಿ ಪಂಡಿತರು ರವಿವಾರ ಪತ್ರಿಕೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜತೆಗೆ, ವಿಶೇಷ ಸ್ಥಾನಮಾನ ವಾಪಸ್ ಪಡೆಯುವ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ ಪರ ಘೋಷಣೆಗಳನ್ನೂ ಕೂಗಿದ್ದಾರೆ. ಆದರೆ, ತಮ್ಮ ಸುದ್ದಿಗಳ ಬಗ್ಗೆ ಸಮರ್ಥಿಸಿಕೊಂಡಿರುವ ಪತ್ರಿಕೆ, ನಾವು ನ್ಯಾಯಯುತ, ನಿಖರ ಹಾಗೂ ಸಮಗ್ರ ವರದಿ ನೀಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ