ಜಮಾತ್ ಎ ಇಸ್ಲಾಮಿ ನಿಷೇಧ ತುರ್ತು ಪುನರ್ ಪರಿಶೀಲನೆಗೆ ಉಮರ್ ಆಗ್ರಹ
Team Udayavani, Mar 4, 2019, 5:41 AM IST
ಶ್ರೀನಗರ : ಜಮಾತೆ ಎ ಇಸ್ಲಾಮಿ ಮೇಲೆ ಹೇರಿರುವ ನಿಷೇಧವನ್ನು ತುರ್ತಾಗಿ ಪುನರ್ ಪರಿಶೀಲಿಸುವಂತೆ ಜಮ್ಮು ಕಾಶ್ಮೀರ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಉಮರ್ ಅಬ್ದುಲ್ಲ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಈಗಾಗಲೇ ಈ ರೀತಿಯ ಆಗ್ರಹವನ್ನು ಕೇಂದ್ರ ಸರಕಾರಕ್ಕೆ ಮಾಡಿದ್ದಾರೆ.
ಜಮಾತ್ ಎ ಇಸ್ಲಾಮೀ ಸಂಘಟನೆಯನ್ನು ನಿಷೇಧಿಸುವುದರಿಂದ ಅದು ನಡೆಸುತ್ತಿರುವ ಹಲವಾರು ಶಾಲೆಗಳು, ಮಸೀದಿಗಳು ಮುಚ್ಚಿ ಹೋಗುವುದರಿಂದ ರಾಜ್ಯದಲ್ಲಿ ವ್ಯತಿರಿಕ್ತ ಸಾಮಾಜಿಕ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಉಮರ್ ಅಬ್ದುಲ್ಲ ಕೇಂದ್ರ ಸರಕಾರಕ್ಕೆ ಟ್ವಿಟರ್ನಲ್ಲಿ ಎಚ್ಚರಿಸಿದ್ದಾರೆ.
ಈ ನಡುವೆ ಜಮಾತ್ ಎ ಇಸ್ಲಾಮೀ ಸಂಘಟನೆಯ ಮೂವರು ಉನ್ನತ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ; ಜತೆಗೆ ಸಂಘಟನೆಗೆ ಸೇರಿದ ರಾಜ್ಯದ ಆರು ಜಿಲ್ಲೆಗಳಲ್ಲಿನ ಭಾರೀ ಪ್ರಮಾಣದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಜಮಾತ್ ಎ ಇಸ್ಲಾಮೀ ಸಂಘಟನೆಯ ನಾಯಕರು ಮತ್ತು ಅದರ ಕಾರ್ಯಕರ್ತ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಿನಪೂರ್ತಿ ನಡೆದಿದ್ದ ದಾಳಿಯಲ್ಲಿ ಅಕ್ರಮ ದಾಖಲೆ ಪತ್ರಗಳನ್ನು ಪರಿಶೀಲನೆಗಾಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ದಾಳಿಗಳು ಕಿಷ್ತ್ವಾರ್, ದೋಡಾ, ರಾಮಬನ, ಪೂಂಚ್, ರಜೌರಿ ಮತ್ತು ಜಮ್ಮು ಜಿಲ್ಲೆಗಳಲ್ಲಿ ನಡೆದಿದ್ದವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ