Hyderabad: ಖಾಸಗಿ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಅವಘಡ; ಸಿಇಒ ಮೃತ್ಯು
Team Udayavani, Jan 20, 2024, 12:49 PM IST
ಹೈದರಾಬಾದ್: ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಸಂಸ್ಥೆಯೊಂದರ ಸಿಇಒ ಸಾವನ್ನಪ್ಪಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ(ಜ.19 ರಂದು) ಹೇಳಿದ್ದಾರೆ.
ಗುರುವಾರ ಸಂಜೆ(ಜ.18 ರಂದು) ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ಇತ್ತು. ಈ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು. ಅದ್ಧೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಕಂಪನಿಯ ಸಿಇಒ ಸಂಜಯ್ ಶಾ ಮತ್ತು ಅವರ ಸಹೋದ್ಯೋಗಿ ಕಬ್ಬಿಣದ ಪಂಜರದೊಳಗೆ (ಐರನ್ ಕೇಜ್) ಪ್ರವೇಶ ಮಾಡಿದ್ದಾರೆ. ಪಂಜರದಿಂದ ಕೆಳಗಿಳಿಸುವ ಭರದಲ್ಲಿ ಪಂಜರಕ್ಕೆ ಬೆಂಬಲವಾಗಿ ನಿಂತಿದ್ದ ಸರಪಳಿಯೊಂದು ಒಂದು ಬದಿಯಿಂದ ಮುರಿದು ಬಿದ್ದಿದೆ. ಪರಿಣಾಮ ಇಬ್ಬರು ಕೂಡ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ಇದನ್ನೂ ಓದಿ: Sania Mirza ಜತೆಗಿನ ಸಂಬಂಧಕ್ಕೆ ಅಂತ್ಯವಾಡಿ ಎರಡನೇ ಮದುವೆಯಾದ ಶೋಯೆಬ್ ಮಲಿಕ್
ಕೂಡಲೇ ಸಿಇಒ ಸಂಜಯ್ ಶಾ ಹಾಗೂ ಸಹದ್ಯೋಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸಂಜಯ್ ಶಾ ಕೊನೆಯುಸಿರೆಳೆದಿದ್ದಾರೆ. ಸಹದ್ಯೋಗಿ ಗಂಭೀರವಾಗಿದ್ದಾರೆ. ಕಂಪನಿಯ ಇನ್ನೊಬ್ಬ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಫಿಲ್ಮ್ ಸಿಟಿ ಈವೆಂಟ್ ಮ್ಯಾನೇಜ್ಮೆಂಟ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ