ಚಬಹಾರ್ ಬಂದರಿನಲ್ಲಿ ವಾಣಿಜ್ಯಿಕ ಚಟುವಟಿಕೆಗಳ ಹೆಚ್ಚಳ
ನಿರಾತಂಕವಾಗಿ ಸಾಗುತ್ತಿದೆ ಹಡಗು ಆಧಾರಿತ ಸರಕು ಸಾಗಣೆ
Team Udayavani, Nov 21, 2021, 9:45 PM IST
ನವದೆಹಲಿ: ಇರಾನ್ನ ಚಬಹಾರ್ನಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಬಂದರಿನಲ್ಲಿ ಮತ್ತೆ ಚಟುವಟಿಕೆಗಳು ಶುರುವಾಗಿವೆ.
ಅಫ್ಘಾನಿಸ್ತಾನದಲ್ಲಿ ಸದ್ಯ ಆಡಳಿತದ ಚುಕ್ಕಾಣಿ ಹಿಡಿದಿರುವ ತಾಲಿಬಾನ್ ಆಡಳಿತ ಬಂದರು ಮೂಲಕ ವ್ಯಾಪಾರ-ವಹಿವಾಟು ನಡೆಸುವ ನಿಟ್ಟಿನಲ್ಲಿ ಅಭ್ಯಂತರವಿಲ್ಲ ಎಂದು ವಾಗ್ಧಾನ ಮಾಡಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
ತಾಲಿಬಾನ್ ಆಡಳಿತ, ಭಾರತ ಸರ್ಕಾರದ ಜತೆಗೆ ಉತ್ತಮ ರೀತಿಯ ರಾಜತಾಂತ್ರಿಕ ಮತ್ತು ವ್ಯಾವಹಾರಿಕ ಬಾಂಧವ್ಯ ಹೊಂದುವ ಬಗ್ಗೆ ಈಗಾಗಲೇ ಆಸಕ್ತಿ ವ್ಯಕ್ತಪಡಿಸಿದೆ. ಇದರಿಂದಾಗಿ ಅಫ್ಘಾನಿಸ್ತಾನಕ್ಕೆ ನೇರವಾಗಿ ಮತ್ತು ಪ್ರಾದೇಶಿಕವಾಗಿ ನೆರವಾಗಲಿರುವ ಹಿನ್ನೆಲೆಯಲ್ಲಿ ಚಬಹಾರ್ ಬಂದರಿನಲ್ಲಿ ವಾಣಿಜ್ಯಿಕ ಚಟುವಟಿಕೆಗಳಿಗೆ ಅಭ್ಯಂತರವಿಲ್ಲ ಎಂದು ಈಗಾಗಲೇ ತಿಳಿಸಿದೆ.
ಇದೇ ಬಂದರು ಮೂಲಕ ಕೇಂದ್ರ ಏಷ್ಯಾ ರಾಷ್ಟ್ರಗಳಿಗೆ ಸಂಪರ್ಕ ಸ್ಥಾಪಿಸಲು ಕೂಡ ಆರ್ಥಿಕವಾಗಿ, ಸ್ಥಿರವಾಗಿರುವ ಮತ್ತು ದೃಢವಾಗಿರುವ ದಾರಿ ಎಂಬ ಅಂಶವನ್ನೂ ಅಫ್ಘಾನಿಸ್ತಾನದ ಈಗಿನ ಆಡಳಿತ ಅರಿತುಕೊಂಡಿದೆ.
ಇದನ್ನೂ ಓದಿ:ಶ್ವಾನದ ಹೆಸರಲ್ಲಿದೆ 3 ಸಾವಿರ ಕೋಟಿ ರೂ. ಬಂಗಲೆ
ತಾಲಿಬಾನ್ ಮುಖಂಡ ಶೇರ್ ಅಬ್ಟಾಸ್ ಸ್ಟಾನಿಕ್ಜೈ ಬಂದರಿನಲ್ಲಿ ವ್ಯಾಪಾರ ಮತ್ತು ವಾಣಿಜ್ಯ ವಹಿವಾಟಿಗೆ ಯಾವುದೇ ಅಡ್ಡಿ ಇಲ್ಲ ಎಂದು ಭರವಸೆ ನೀಡಿದ ಬಳಿಕ ಅಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ