Chandigarh ಮೇಯರ್ ಚುನಾವಣೆ;ಎಲ್ಲ ಮತಪತ್ರಗಳನ್ನೂ ನಮ್ಮ ಬಳಿ ತನ್ನಿ: ಸುಪ್ರೀಂ
Team Udayavani, Feb 20, 2024, 12:47 AM IST
ಹೊಸದಿಲ್ಲಿ: ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದ ಎಲ್ಲ ಮತಪತ್ರಗಳು ಮತ್ತು ಮತ ಎಣಿಕೆಯ ಸಂಪೂರ್ಣ ವೀಡಿಯೋ ರೆಕಾರ್ಡಿಂಗ್ ಅನ್ನು ನಾಳೆಯೇ ನಮ್ಮ ಮುಂದೆ ಹಾಜರುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.
ಜತೆಗೆ ಈ ಎಲ್ಲ ದಾಖಲೆಗಳನ್ನು ದಿಲ್ಲಿಗೆ ಸುರಕ್ಷಿತವಾಗಿ ತರಲು ನ್ಯಾಯಾಂಗ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ಗೆ ಸುಪ್ರೀಂ ಕೋರ್ಟ್ ನ್ಯಾಯಪೀಠ ಸೂಚಿಸಿದೆ. ಅಲ್ಲದೇ, ಆ ಅಧಿಕಾರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚಂಡೀಗಢ ಆಡಳಿತಕ್ಕೆ ನಿರ್ದೇಶನ ನೀಡಿದೆ. ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಳ್ಳದ ನಿಷ್ಪಕ್ಷ ಚುನಾವಣಾ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದೂ ಹೇಳಿದೆ.
ಇದೇ ವೇಳೆ, ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರದ ಬದಲು ಬೇರೆ ದಿನ ನಡೆಸಬೇಕು ಎಂಬ ಕೋರಿಕೆಯನ್ನು ತಿರಸ್ಕರಿಸಿದ ಸಿಜೆಐ ಡಿ.ವೈ. ಚಂದ್ರಚೂಡ್, “ಕುದುರೆ ವ್ಯಾಪಾರ ನಡೆಯುತ್ತಿರುವ’ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.
ಚುನಾವಣಾಧಿಕಾರಿ ಬೆವರಿಳಿಸಿದ ಪೀಠ!
ಮತಪತ್ರಗಳಿಗೆ ಮಾರ್ಕ್ ಮಾಡಿದ್ದೇಕೆ ಎಂದು ಸಿಜೆಐ ಪ್ರಶ್ನಿಸಿದಾಗ, ಮಾಸಿಹ್ “ಮತಪತ್ರಗಳು ಮಿಕ್ಸ್ ಆಗದಿರಲೆಂದು ಹಾಗೆ ಮಾಡಿದೆ’ ಎಂದರು. ಇದರಿಂದ ಸಿಡಿಮಿಡಿಗೊಂಡ ಪೀಠ, “ಹಾಗಾದರೆ ನೀವು ಮಾರ್ಕ್ ಮಾಡಿದ್ದು ಸತ್ಯವೇ? ನಿಮ್ಮ ವಿರುದ್ಧ ವಿಚಾರಣೆ ನಡೆಯ
ಲೇಬೇಕು’ ಎಂದು ಹೇಳಿತು.
ಏನಿದು ಪ್ರಕರಣ?
ಜ. 30ರಂದು ಮೇಯರ್ ಚುನಾವಣೆ ನಡೆದಿತ್ತು
ಆಪ್ನ 8 ಮತಗಳನ್ನು ಅಸಿಂಧು ಎಂದು ಚುನಾವಣಾಧಿಕಾರಿ ಘೋಷಿಸಿದ್ದರು
ಇದರಿಂದ ಆಪ್ ಅಭ್ಯರ್ಥಿಗೆ 12, ಬಿಜೆಪಿ ಅಭ್ಯರ್ಥಿಗೆ 16 ಮತಗಳು ಬಂದವು
ಅಧಿಕಾರಿಯೇ ಮತಪತ್ರ ವಿರೂಪಗೊಳಿಸಿದ್ದಾಗಿ ಆರೋಪಿಸಿ ಆಪ್ ಕೋರ್ಟ್ ಮೆಟ್ಟಿಲೇರಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ