Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

36 ರ ಹರೆಯದ ಟಿಡಿಪಿ ಸಂಸದನಿಗೆ ಕ್ಯಾಬಿನೆಟ್ ದರ್ಜೆ

Team Udayavani, Jun 9, 2024, 9:17 PM IST

1-sadsadasd

ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ದೇಶದ ಗಮನ ಸೆಳೆದಿದ್ದ ತೆಲುಗು ದೇಶಂ ಪಕ್ಷದ ಚಂದ್ರಶೇಖರ್ ಪೆಮ್ಮಸಾನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಟಿಡಿಪಿ ನಾಯಕ ಚಂದ್ರಶೇಖರ್ ಪೆಮ್ಮಸಾನಿ ಅವರು ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ವೈಎಸ್‌ಆರ್‌ಸಿಪಿಯ ಕಿಲಾರಿ ವೆಂಕಟ ರೋಸಯ್ಯ ಅವರನ್ನು 3.4 ಲಕ್ಷ ಮತಗಳಿಂದ ಸೋಲಿಸಿ ಸಂಸತ್ ಪ್ರವೇಶಿಸಿ ಸಚಿವನಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಆಪ್ತರಾಗಿರುವ ಪೆಮ್ಮಸಾನಿ ಅವರು 5,700 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿದ್ದರು.

ಗುಂಟೂರಿನ ಬುರ್ರಿಪಾಲೆಮ್ ಗ್ರಾಮದಲ್ಲಿ ಜನಿಸಿದ ಚಂದ್ರಶೇಖರ್ ಪೆಮ್ಮಸಾನಿ ಅವರು ಒಸ್ಮಾನಿಯಾ ವಿವಿಯಲ್ಲಿ ಎಂಬಿಬಿಎಸ್ ಅನ್ನು ಪೂರ್ಣಗೊಳಿಸಿದರು. ಪೆನ್ಸಿಲ್ವೇನಿಯಾದ ಡ್ಯಾನ್‌ವಿಲ್ಲೆಯಲ್ಲಿರುವ ಗೀಸಿಂಗರ್ ವೈದ್ಯಕೀಯ ಕೇಂದ್ರದಲ್ಲಿ ರೆಸಿಡೆನ್ಸಿ, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ-ಸಿನೈ ಆಸ್ಪತ್ರೆಯಲ್ಲಿ ಸುಮಾರು ಐದು ವರ್ಷಗಳ ವೈದ್ಯರಾಗಿ ಕೆಲಸ ಮಾಡಿದ್ದರು.

ಆನ್‌ಲೈನ್ ಕಲಿಕಾ ವೇದಿಕೆಯಾದ UWorld ನ ಸ್ಥಾಪಕ ಮತ್ತು CEO ಆಗಿರುವ 48 ವರ್ಷದ ರಾಜಕಾರಣಿ, ಟಿಡಿಪಿ ಎನ್‌ಆರ್‌ಐ ಸೆಲ್‌ನಲ್ಲಿ ಸಕ್ರಿಯ ನಾಯಕರಾಗಿದ್ದು, ಯುಎಸ್‌ನಲ್ಲಿದ್ದ ವೇಳೆಯೂ ಪಕ್ಷದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಚಂದ್ರಶೇಖರ್ ಪೆಮ್ಮಸಾನಿ ಅವರು 2020 ರಲ್ಲಿ ಯುಎಸ್‌ನಲ್ಲಿ ಯುವ ಉದ್ಯಮಿಯಾಗಿ ಅರ್ನ್ಸ್ಟ್ ಮತ್ತು ಯಂಗ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು ಪೆಮ್ಮಸಾನಿ ಫೌಂಡೇಶನ್ ಅನ್ನು ಸ್ಥಾಪಿಸಿದ್ದು, ಆರೋಗ್ಯ ಶಿಬಿರಗಳನ್ನು ನಡೆಸುವುದನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಗುಂಟೂರು ಮತ್ತು ನರಸರಾವ್ಪೇಟೆಯ ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ.

ಕಿಂಜರಾಪುಗೆ ಕ್ಯಾಬಿನೆಟ್ ದರ್ಜೆ

36 ರ ಹರೆಯದ ಟಿಡಿಪಿ ಸಂಸದ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರಿಗೆಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಲಾಗಿದೆ. ನಾಯ್ಡು ಶ್ರೀಕಾಕುಳಂ ಲೋಕಸಭಾ ಕ್ಷೇತ್ರದಿಂದ 2014ರಲ್ಲಿ 2019 ರಲ್ಲಿ ಮತ್ತು ಈಗ ಮೂರನೇ ಬಾರಿಗೆ ಜಯ ಸಾಧಿಸಿದ್ದಾರೆ.

ರಾಮ್ ಮೋಹನ್ ಅವರ ಅಜ್ಜ ಕಿಂಜರಾಪು ಯರ್ರಾನ್ ನಾಯ್ಡು ಅವರು ಎಚ್.ಡಿ.ದೇವೇಗೌಡ ಮತ್ತು ಐ.ಕೆ.ಗುಜ್ರಾಲ್ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆಂಧ್ರಪ್ರದೇಶದ ಶಾಸಕರಾಗಿದ್ದ ಅವರು ಹರಿಶ್ಚಂದ್ರಪುರದಿಂದ ನಾಲ್ಕು ಬಾರಿ ಗೆದ್ದಿದ್ದರು. ಇದಲ್ಲದೆ, ಅವರು ನಾಲ್ಕು ಬಾರಿ ಶ್ರೀಕಾಕುಳಂನಿಂದ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು.

Ad

ಟಾಪ್ ನ್ಯೂಸ್

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಘಾತಕ ವೇಗಿ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೊರೆ ಹೋದ ಮಡೆನೂರು ಮನು

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಘಾತಕ ವೇಗಿ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್‌ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.