ದಿನದ ಧರಣಿಗೆ 10 ಕೋಟಿ! : ಚಂದ್ರಬಾಬು ನಾಯ್ಡು ಉಪವಾಸಕ್ಕೆ ಖರ್ಚಾದ ಹಣ
Team Udayavani, Feb 13, 2019, 9:40 AM IST
ಅಮರಾವತಿ/ಹೊಸದಿಲ್ಲಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಸಿಎಂ ಚಂದ್ರಬಾಬು ನಾಯ್ಡು ಸೋಮವಾರ ದಿಲ್ಲಿಯಲ್ಲಿ ನಡೆಸಿದ 12 ಗಂಟೆಯ ಉಪವಾಸ ಸತ್ಯಾಗ್ರಹಕ್ಕೆ ಮಾಡಿದ ವೆಚ್ಚವೆಷ್ಟು ಗೊತ್ತಾ? ಬರೋಬ್ಬರಿ 10 ಕೋಟಿ ರೂ.! ಅಚ್ಚರಿಯಾದರೂ ಸತ್ಯ. ರೈಲು, ಆಹಾರ, ವಿಐಪಿಗಳ ಕೊಠಡಿ ಮತ್ತಿತರ ಸೌಲಭ್ಯಕ್ಕಾಗಿ ಇಷ್ಟೊಂದು ವೆಚ್ಚ ಮಾಡಲಾಗಿದೆ ಎಂದು ರಾಜ್ಯ ಸರಕಾರವೇ ಮಾಹಿತಿ ನೀಡಿದೆ.
ಧರಣಿಯಲ್ಲಿ ಪಾಲ್ಗೊಳ್ಳಲು ತೆರಳುವ ಜನರಿಗಾಗಿ ಶ್ರೀಕಾಕುಲಂ ಮತ್ತು ಅನಂತಪುರದಿಂದ 2 ವಿಶೇಷ ರೈಲುಗಳನ್ನು ಬುಕ್ ಮಾಡಲಾಗಿತ್ತು. ಇದಕ್ಕೆ 1.12 ಕೋಟಿ ರೂ. ತಗುಲಿತ್ತು. ಇದಲ್ಲದೆ, ಅಲ್ಲಿಗೆ ಬಂದ ಸಾರ್ವಜನಿಕರು ಹಾಗೂ ವಿಐಪಿಗಳಿಗೆ ಆಹಾರ ಮತ್ತು ವಸತಿ ವ್ಯವಸ್ಥೆಯನ್ನೂ ಸರಕಾರವೇ ಕಲ್ಪಿಸಿತ್ತು. ವಸತಿಗಾಗಿ 1,100 ಕೊಠಡಿಗಳನ್ನು ಬುಕ್ ಮಾಡಲಾಗಿತ್ತು. ಈ ಎಲ್ಲ ವೆಚ್ಚಗಳನ್ನು ಭರಿಸಲು ಒಟ್ಟಾರೆ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು ಎಂದು ಸರಕಾರ ತಿಳಿಸಿದೆ.
ರಾಷ್ಟ್ರಪತಿಗೆ ಮನವಿ
ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಿಎಂ ಚಂದ್ರಬಾಬು ನಾಯ್ಡು ಮಂಗಳವಾರ ರಾಷ್ಟ್ರಪತಿಭವನದತ್ತ ಪಾದಯಾತ್ರೆ ನಡೆಸಿದ್ದಾರೆ. ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಆಂಧ್ರ ಭವನದಿಂದ ಟಿಡಿಪಿಯ ಹಿರಿಯ ನಾಯಕರ ಜತೆಗೂಡಿ ಯಾತ್ರೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ಆಂಧ್ರ ವಿಭಜನೆ ಕಾಯ್ದೆಯ ಅಂಶಗಳನ್ನು ಕೇಂದ್ರ ಸರಕಾರ ಮರೆತಿದೆ. ಮೋದಿ ಸರಕಾರ ಹಣ ಬಿಡುಗಡೆ ಮಾಡದೆ ವಿಳಂಬ ಮಾಡುತ್ತಿದೆ’ ಎಂದು ದೂರಿದ್ದಾರೆ. ವಿಶೇಷ ಸ್ಥಾನಮಾನ ನೀಡದೇ ಇರುವ ಕಾರಣದಿಂದ ಹಲವರಿಗೆ ಖಿನ್ನತೆ ಉಂಟಾಗಿದೆ. ಅದೇ ಕಾರಣದಿಂದ ಸೋಮವಾರ ದಿವ್ಯಾಂಗ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ