ರವಿದಾಸ್ ದೇವಸ್ಥಾನ ಪ್ರಕರಣ: ಭೀಮ್ ಆರ್ಮಿಯ ಚಂದ್ರಶೇಖರ್, ಬೆಂಬಲಿಗರು ಪೊಲೀಸ್ ವಶಕ್ಕೆ
Team Udayavani, Aug 22, 2019, 9:46 AM IST
ಹೊಸದಿಲ್ಲಿ: ಸಂತ ರವಿದಾಸ ದೇವಸ್ಥಾನ ನೆಲಸಮ ಪ್ರಕರಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಭೀಮ್ ಆರ್ಮಿ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನಲೆಯಲ್ಲಿ ಇವರ ಬಂಧನವಾಗಿದೆ.
ಬುಧವಾರ ರಾತ್ರಿ ಕೆಲವು ಪ್ರತಿಭಟನಾಕಾರರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು ನಂತರ ಹಿಂಸಾಚಾರಕ್ಕೆ ತಿರುಗಿದೆ. ಇದರಿಂದಾಗಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ಚಿನ್ಮಯ್ ಬೈಸ್ವಾಲ್ ಹೇಳಿಕೆ ನೀಡಿದ್ದಾರೆ.
ಪ್ರತಿಭಟನಾಕಾರರು ವಾಹನಗಳನ್ನು ಧ್ವಂಸಗೊಳಿಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ ಎಂದು ವರದಿಯಾಗಿದೆ.