ವಿಕ್ರಮ ಸಾಧಿಸಲಿ ಇಸ್ರೋ


Team Udayavani, Sep 6, 2019, 6:30 AM IST

chandra-pic-3new

ಹೊಸದಿಲ್ಲಿ/ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇಡಿಯ ದೇಶ ಮತ್ತು ಜನತೆ ಕಾತರದಿಂದ ಕಾಯುತ್ತಿರುವ ಘಳಿಗೆ ಹತ್ತಿರವಾಗುತ್ತಿದ್ದು, ಶುಕ್ರವಾರ ನಡು ಇರುಳು ಕಳೆದ ಬಳಿಕ ಚಂದಿರನ ನಮಗೆ ಕಾಣಿಸದ ನೆಲದಲ್ಲಿ ಇಳಿಯುವ ಸಾಹಸವನ್ನು ವಿಕ್ರಮ್‌ ನಡೆಸಲಿದೆ. ಅತ್ತ ಇಸ್ರೋದ ನೂರಾರು ವಿಜ್ಞಾನಿಗಳು ಕಂಪ್ಯೂಟರ್‌ಗಳ ಎದುರು ಕುಳಿತು ವಿಕ್ರಮನ ಸುಗಮ ಲ್ಯಾಂಡಿಂಗ್‌ ಕಸರತ್ತಿಗಾಗಿ ಸಂದೇಶಗಳನ್ನು ಕಳುಹಿಸುತ್ತ ಶ್ರಮಿಸುತ್ತಿದ್ದರೆ ದೇಶಕ್ಕೆ ದೇಶವೇ ಇದರ ಯಶಸ್ಸಿಗಾಗಿ ಪ್ರಾರ್ಥಿಸುತ್ತಿದೆ.

ಶುಕ್ರವಾರ ಮಧ್ಯರಾತ್ರಿ 1.30ರಿಂದ 2.30ರ ನಡುವೆ ಚಂದ್ರಯಾನ-2 ಪ್ರಮುಖ ಪರಿಕರವಾದ ವಿಕ್ರಮ್‌, ಚಂದ್ರನ ಮೇಲೆ ‘ಸಾಫ್ಟ್ ಲ್ಯಾಂಡಿಂಗ್‌’ ಮಾಡಲಿದೆ. ಇದು ಈಗ ಇಸ್ರೋ ವಿಜ್ಞಾನಿಗಳ ಎದುರು ಇರುವ ಅಂತಿಮ ಅಗ್ನಿಪರೀಕ್ಷೆ.

ಯಾಕೆ ಈ ಒತ್ತಡ?
ಇಸ್ರೋ ಪಾಲಿಗೆ ಈ ‘ಸಾಫ್ಟ್ ಲ್ಯಾಂಡಿಂಗ್‌’ ‘ಹಾರ್ಡ್‌ ಚಾಲೆಂಜ್‌’ ಆಗಿದೆ. ಇಸ್ರೋದ ಪಾಲಿಗೆ ಇದು ಚೊಚ್ಚಲ ಅನ್ಯ ಗ್ರಹ ಯಾನ. ಇದೇ ಮೊದಲ ಬಾರಿಗೆ ಅಂಥ ಸಾಹಸಕ್ಕೆ ಕೈ ಹಾಕಿದ್ದು, ಸಾವಿರಾರು ವಿಜ್ಞಾನಿಗಳು, ತಂತ್ರಜ್ಞರು ಕಂಪ್ಯೂಟರ್‌ಗಳಲ್ಲಿ ದೃಷ್ಟಿ ನೆಟ್ಟು ಕ್ಷಣಕ್ಷಣಕ್ಕೂ ರೇಡಿಯೋ ಸಂದೇಶಗಳನ್ನು ಕಳುಹಿಸುತ್ತ ವಿಕ್ರಮ್‌ ಅನ್ನು ಯಶಸ್ವಿಯಾಗಿ ಚಂದ್ರನ ನಮಗೆ ಕಾಣದ ದಕ್ಷಿಣ ಧ್ರುವದ ಬಳಿ ಇಳಿಸಬೇಕಿದೆ. ಹಾಗಾಗಿಯೇ ನಮ್ಮ ದೇನಿದ್ದರೂ ಮನುಷ್ಯ ಪ್ರಯತ್ನವಷ್ಟೇ; ಅದಕ್ಕೆ ದೈವಬಲವೂ ಇರಬೇಕು ಎನ್ನುತ್ತಾರೆ ಇಸ್ರೋದ ಆಸ್ತಿಕ ವಿಜ್ಞಾನಿಗಳು.

ಮಾಜಿಗಳ ವಿಶ್ವಾಸ
ವಿಜ್ಞಾನಿಗಳು ಒತ್ತಡದಲ್ಲಿದ್ದರೂ ವಿಕ್ರಮ್‌ ಲ್ಯಾಂಡಿಂಗ್‌ನಲ್ಲಿ ಭಾರತ ಯಶಸ್ಸು ಗಳಿಸಿ, ಹೊಸ ಇತಿಹಾಸ ನಿರ್ಮಿಸುತ್ತದೆ ಎಂದು ಇಸ್ರೋದ ಮಾಜಿ ಅಧ್ಯಕ್ಷ ಮಾಧವನ್‌ ನಾಯರ್‌, ಎ.ಎಸ್‌. ಕಿರಣ್‌ ಕುಮಾರ್‌ ಮುಂತಾದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೊದಲು ವಿಕ್ರಮ್‌, ಬಳಿಕ ರೋವರ್‌
ಶುಕ್ರವಾರ ಮಧ್ಯರಾತ್ರಿ 1.30ರಿಂದ 2.30ರ ನಡುವೆ ವಿಕ್ರಮ್‌ ಚಂದ್ರನ ನೆಲದಲ್ಲಿ ಇಳಿದ ಅನಂತರ, ಶನಿವಾರ ಬೆಳಗ್ಗೆ 5.30ರಿಂದ 6.30ರ ನಡುವೆ ವಿಕ್ರಮ್‌ನ ಒಳಗೆ ಹುದುಗಿರುವ ರೋವರ್‌ ಚಂದ್ರನ ಮೇಲೆ ಇಳಿದು ನಡೆದಾಡಲಿದೆ.

ಪ್ರಧಾನಿ ಉಪಸ್ಥಿತಿ: ಪ್ರಧಾನಿ ನರೇಂದ್ರ ಮೋದಿ ಇಸ್ರೋದ ಕಚೇರಿಯಲ್ಲಿ ಉಪಸ್ಥಿತರಿದ್ದು, ಚಂದ್ರನ ಮೇಲೆ ಲ್ಯಾಂಡರ್‌ ವಿಕ್ರಮ್‌ ಇಳಿಯುವುದನ್ನು ಕಣ್ತುಂಬಿಕೊಳ್ಳಲಿದ್ದಾರೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಇಸ್ರೋದ ಟೆಲಿಮೆಟ್ರಿ, ಟ್ರಾಕಿಂಗ್‌ ಮತ್ತು ಕಮಾಂಡ್‌ ನೆಟ್ವರ್ಕ್‌ (ಐಎಸ್‌ಟಿಆರ್‌ಎಸಿ) ಕೇಂದ್ರದಲ್ಲಿ ಮೋದಿ ಇದನ್ನು ವೀಕ್ಷಿಸಲಿದ್ದಾರೆ. ಅವರೊಂದಿಗೆ ದೇಶದ ನಾನಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 60ರಿಂದ 70 ವಿದ್ಯಾರ್ಥಿಗಳು ಇರುತ್ತಾರೆ. ರೋವರ್‌ ಕಾರ್ಯವೇನು?

ಇಡೀ ಚಂದ್ರಯಾನ-2ರ ಮೂಲ ಉದ್ದೇಶ ಚಂದ್ರನ ದಕ್ಷಿಣ ಧ್ರುವವನ್ನು ಪರೀಕ್ಷಿಸಿ ಅಧ್ಯಯನ ಮಾಡುವುದು. ಘನೀಕೃತ ನೀರು ಇರಬಹುದು ಎಂಬ ಊಹೆ ವಿಜ್ಞಾನಿಗಳದು. ಅದು ನಿಜವೇ ಎಂಬುದನ್ನು ಪತ್ತೆ ಮಾಡುವುದು ರೋವರ್‌ಗೆ ವಹಿಸಿರುವ ಮುಖ್ಯ ಜವಾಬ್ದಾರಿ. ಜತೆಗೆ ಅಲ್ಲಿನ ವಾತಾವರಣ, ಮಣ್ಣು ಇತ್ಯಾದಿಗಳ ಬಗ್ಗೆ ಮಾಹಿತಿಗಳನ್ನು ಅದು ಕಲೆಹಾಕಲಿದೆ.

4 ಪ್ರಮುಖ ವಿಶೇಷಗಳು

1. ಅನ್ಯ ಆಕಾಶಕಾಯವೊಂದರ ಮೇಲೆ ತನ್ನ ಯಂತ್ರವನ್ನು ಇಳಿಸಿ ಅಧ್ಯಯನ ನಡೆಸುವಲ್ಲಿ ಭಾರತದ ಮೊದಲ ಪ್ರಯತ್ನ.

2. ಇದೇ ಮೊದಲ ಬಾರಿಗೆ ಚಂದ್ರನ ಅಧ್ಯಯನ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದೊಂದಿಗೆ.

3. ಅನ್ಯಗ್ರಹದ ಮೇಲೆ ಸಾಫ್ಟ್ ಲ್ಯಾಂಡಿಂಗ್‌ ಆಗುತ್ತಿರುವ ಇಸ್ರೋದ ಮೊದಲ ಸ್ವದೇಶಿ ತಂತ್ರಜ್ಞಾನದ ಪರಿಕರ.

4. ಅಮೆರಿಕ, ರಷ್ಯಾ, ಚೀನ ಅನಂತರ ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ರಾಷ್ಟ್ರವೆಂಬ ಹೆಗ್ಗಳಿಕೆ ಭಾರತಕ್ಕೆ.

ಸಾಫ್ಟ್ ಲ್ಯಾಂಡಿಂಗ್‌ ನೇರಪ್ರಸಾರ

(https://www.youtube.com/watch?v=7iqNTeZAq-c)

•ಇಸ್ರೋದ ಅಧಿಕೃತ ಫೇಸ್‌ಬುಕ್‌ ಪುಟ

•ಇಸ್ರೋದ ಅಧಿಕೃತ ಟ್ವಿಟರ್‌ ಖಾತೆ

•ಇಸ್ರೋದ ಅಧಿಕೃತ ವೆಬ್‌ಸೈಟ್ (www.isro.gov.in)

•ದೂರದರ್ಶನ

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.