ಮನ್ ಕೀ ಬಾತ್ ನಲ್ಲಿ ಚೆನ್ನಪಟ್ಟಣದ ಗೊಂಬೆಗಳ ಕೊಂಡಾಡಿದ ಪ್ರಧಾನಿ ಮೋದಿ
Team Udayavani, Aug 30, 2020, 11:59 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು 68ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಸ್ಥಳೀಯ ಉದ್ದಿಮೆಗಳಿಗಳ ಬೆಳವಣಿಗೆಯ ಬಗ್ಗೆ ಪ್ರಸ್ಥಾಪಿಸಿದ ಅವರು ಕರ್ನಾಟಕದ ಚೆನ್ನಪಟ್ಟಣದ ಗೊಂಬೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶಿಯ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ ಸ್ಥಳೀಯ ಆಟಿಕೆಗಳ ಶ್ರೀಮಂತ ಸಂಪ್ರದಾಯವಿದೆ. ಉತ್ತಮ ಆಟಿಕೆಗಳನ್ನು ತಯಾರಿಸುವಲ್ಲಿ ಪರಿಣತಿಯನ್ನು ಹೊಂದಿರುವ ಅನೇಕ ಪ್ರತಿಭಾವಂತ ಮತ್ತು ನುರಿತ ಕುಶಲಕರ್ಮಿಗಳಿದ್ದಾರೆ. ಭಾರತದ ಕೆಲವು ಭಾಗಗಳಿಂದು ಆಟಿಕೆ ಸಮೂಹಗಳಾಗಿ ಬೆಳೆಯುತ್ತಿವೆ. ಅಂದರೆ ಆಟಿಕೆಗಳ ಕೇಂದ್ರಗಳಾಗಿ ರೂಪುಗೊಳ್ಳುತ್ತಿವೆ. ಉದಾಹರಣೆಗೆ ಕರ್ನಾಟಕದ ಚನ್ನಪಟ್ಟಣ, ಆಂಧ್ರಪ್ರದೇಶದ ಕೊಂಡಪಲ್ಲಿ, ತಮಿಳುನಾಡಿನ ತಂಜಾವೂರು, ಅಸ್ಸಾಂನ ಧುಬ್ರಿ, ಉತ್ತರ ಪ್ರದೇಶದ ವಾರಣಾಸಿ ಆಟಿಕೆಗಳ ಕೇಂದ್ರಗಳಾಗಿವೆ. ಇಷ್ಟೇ ಅಲ್ಲ, ಇನ್ನು ಅನೇಕ ಹೆಸರುಗಳನ್ನು ಭಾರತಲ್ಲಿ ಎಣಿಸಬಹುದಾಗಿದೆ ಎಂದರು.
ಇಂದಿನ ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಯುಗದಲ್ಲಿ ಕಂಪ್ಯೂಟರ್ ಗೇಮ್ಗಳು ಬಹು ದೊಡ್ಡ ಟ್ರೆಂಡ್ ಆಗಿವೆ. ಇಂತಹ ಗೇಮ್ಗನ್ನು ಮಕ್ಕಳು ಆಡುತ್ತಾರೆ ಮತ್ತು ಅದರಂತೆಯೇ ಬೆಳೆಯುತ್ತಾರೆ. ಆದರೆ, ಈ ಗೇಮ್ಗಳಲ್ಲಿ ಇರುವ ವಿಷಯಾಂಶಗಳು ಸಹ ಬಹುತೇಕ ಹೊರಗಿನ ಬಂದವುಗಳಾಗಿವೆ. ವರ್ಚುವಲ್ ಆಟಗಳಾಗಿರಲಿ ಅಥವಾ ಆಟಿಕೆಗಳ ವಲಯವಾಗಿರಲಿ ಆತ್ಮನಿರ್ಭರ ಭಾರತದ ಅಭಿಯಾನ ಬಹಳ ಮುಖ್ಯ ಪಾತ್ರವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ವೈ, ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗು ಉದ್ಯೋಗ ಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ