ಶ್ರೀನಗರ್ ಸೆಕ್ಟರ್ ಸಿಆರ್ ಪಿಎಫ್ ಗೆ ಮೊದಲ ಮಹಿಳಾ ಐಜಿಯಾಗಿ “ಚಾರು ಸಿನ್ಹಾ” ನೇಮಕ
ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಭಾರತೀಯ ಸೇನೆ ಜತೆ ನಿಕಟವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ
Team Udayavani, Sep 1, 2020, 12:35 PM IST
ಶ್ರೀನಗರ್: ಜಮ್ಮು-ಕಾಶ್ಮೀರದ ಭಯೋತ್ಪಾದಕ ಪೀಡಿತ ಪ್ರದೇಶಗಳಲ್ಲಿ ಒಂದಾದ ಶ್ರೀನಗರ್ ಸೆಕ್ಟರ್ ನ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ ಇನ್ಸ್ ಪೆಕ್ಟರ್ ಜನರಲ್ ಪೊಲೀಸ್ ಆಗಿ ಇದೇ ಮೊದಲ ಬಾರಿಗೆ ಐಪಿಎಸ್ ಮಹಿಳಾ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ತೆಲಂಗಾಣ ಕೇಡರ್ ನ 1996ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಚಾರು ಸಿನ್ಹಾ ಅವರನ್ನು ಶ್ರೀನಗರ್ ಸೆಕ್ಟರ್ ನ ಸಿಆರ್ ಪಿಎಫ್ ನ ಇನ್ಸ್ ಪೆಕ್ಟರ್ ಜನರಲ್ ಆಗಿ ನೇಮಕವಾಗಿದ್ದಾರೆ ಎಂದು ವರದಿ ವಿವರಿಸಿದೆ.
ಇಂತಹ ಕಠಿಣ ಪ್ರದೇಶಗಳಲ್ಲಿ ಕಾರ್ಯಾಚರಣೆಗೆ ಸಿನ್ಹಾ ಅವರನ್ನು ನಿಯೋಜಿಸುತ್ತಿರುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಬಿಹಾರ ಸೆಕ್ಟರ್ ನ ಸಿಆರ್ ಪಿಎಫ್ ನ ಐಜಿಯಾಗಿ ನಕ್ಸಲ್ ವಿರುದ್ಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು ಎಂದು ವರದಿ ತಿಳಿಸಿದೆ.
ಚಾರು ಸಿನ್ಹಾ ಅವರ ನೇತೃತ್ವದಲ್ಲಿ ಹಲವಾರು ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಲಾಗಿತ್ತು. ಹೀಗೆ ದೀರ್ಘ ಸವಾಲಿನ ಕಾರ್ಯಾಚರಣೆಯಲ್ಲಿ ಯಶಸ್ವಿ ಪಡೆದ ನಂತರ ಸಿನ್ಹಾ ಅವರನ್ನು ಜಮ್ಮು ಸಿಆರ್ ಪಿಎಫ್ ನ ಐಜಿಯನ್ನಾಗಿ ವರ್ಗಾವಣೆ ಮಾಡಲಾಗಿತ್ತು.
ಸೋಮವಾರ ಹೊಸ ಆದೇಶ ಹೊರಡಿಸಿದ್ದು, ಸಿನ್ಹಾ ಅವರನ್ನು ಶ್ರೀನಗರ್ ಸೆಕ್ಟರ್ ಐಜಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿತ್ತು. ಪ್ರಸ್ತುತ ಸಿಆರ್ ಪಿಎಫ್ ನ ಡೈರೆಕ್ಟರ್ ಜನರಲ್ ಆಗಿರುವ ಎಪಿ(ಆನಂದ್ ಪ್ರಕಾಶ್) ಮಹೇಶ್ವರಿ 2005ರಿಂದಲೂ ಶ್ರೀನಗರ್ ಸೆಕ್ಟರ್ ಐಜಿಯಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಮಹಿಳೆಯೊಬ್ಬರು ಐಜಿಯಾಗಿ ಈವರೆಗೂ ಯಾರೂ ಕಾರ್ಯನಿರ್ವಹಿಸಿಲ್ಲ. ಈ ಸೆಕ್ಟರ್ ನಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಭಾಗಿಯಾಗುತ್ತಿದ್ದು, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಭಾರತೀಯ ಸೇನೆ ಜತೆ ನಿಕಟವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ವರದಿ ತಿಳಿಸಿದೆ.
ಶ್ರೀನಗರ್ ಸೆಕ್ಟರ್ ನಲ್ಲಿ ಮೂರು ಜಿಲ್ಲೆಗಳಿದ್ದು ಬಡ್ಗಾಮ್, ಗಂದೇರ್ಬಾಲ್ ಮತ್ತು ಶ್ರೀನಗರ್ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಇದ್ದಿರುವುದಾಗಿ ಸಿಆರ್ ಪಿಎಫ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ