ಪಿಎಂ ಜನ್ಮದಿನದಂದೇ ಭಾರತಕ್ಕೆ ಬರಲಿವೆ “ಚೀತಾ’ಗಳು! ದೇಶದಲ್ಲಿ 1947ರಲ್ಲೇ ಅಳಿದಿದ್ದ ತಳಿ

ಕುನೋ ಉದ್ಯಾನವನಕ್ಕೆ ಪ್ರಧಾನಿಯಿಂದಲೇ ಚೀತಾಗಳ ಬಿಡುಗಡೆ

Team Udayavani, Sep 11, 2022, 7:05 AM IST

ಪಿಎಂ ಜನ್ಮದಿನದಂದೇ ಭಾರತಕ್ಕೆ ಬರಲಿವೆ “ಚೀತಾ’ಗಳು! ದೇಶದಲ್ಲಿ 1947ರಲ್ಲೇ ಅಳಿದಿದ್ದ ತಳಿ

ಭಾರತಕ್ಕೆ ಚೀತಾಗಳನ್ನು ಕಳುಹಿಸುವ ಮುನ್ನ ಅವುಗಳಿಗೆ ನಮೀಬಿಯಾದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು.

ಭೋಪಾಲ್‌/ಜೊಹಾನ್ಸ್‌ಬರ್ಗ್‌: ದೇಶದಲ್ಲಿ ಮತ್ತೆ ಚೀತಾ ಸಂತತಿಯನ್ನು ಬೆಳೆಸುವ ಮಹ ದು ದ್ದೇಶ ದೊಂದಿಗೆ ನಮೀಬಿಯಾದಿಂದ ಚೀತಾಗಳನ್ನು ತರುವ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಇವುಗಳು ಭಾರತ ಪ್ರವೇಶಿಸಲಿವೆ.

ಸೆ.17ರಂದು ಮೋದಿ ಅವರೇ 8 ಚೀತಾಗಳನ್ನು ಮಧ್ಯ ಪ್ರದೇಶದ ಶಿಯೋಪುರ್‌ ಜಿಲ್ಲೆಯಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಿದ್ದಾರೆ.

ಸೆ. 17ರೊಳಗಾಗಿ 5 ಗಂಡು ಮತ್ತು 3 ಹೆಣ್ಣು ಚೀತಾಗಳು ನಮೀಬಿಯಾದಿಂದ ಕೆಎನ್‌ಪಿಗೆ ಬಂದು ತಲುಪುವ ನಿರೀಕ್ಷೆಯಿದೆ. ಎಲ್ಲವೂ ಅಂದು ಕೊಂಡಂತೆ ನಡೆದರೆ ತಮ್ಮ ಹುಟ್ಟುಹಬ್ಬದಂದೇ ಮೋದಿ ಅವರು “ಚೀತಾ ಮರುಪರಿಚಯ ಯೋಜನೆ’ಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳನ್ನು ಭಾರತಕ್ಕೆ ತರಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಸಿದ್ಧತೆಗಳ ಪರಿಶೀಲನೆ: ಗುರುವಾರವಷ್ಟೇ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಅನಂತರ ಮಾತನಾಡಿದ ಅವರು, ನಮೀಬಿಯಾದಿಂದ ಚೀತಾ ಗಳನ್ನು ಕೆಎನ್‌ಪಿಗೆ ಸಾಗಿಸುವಂಥದ್ದು ರಾಷ್ಟ್ರೀಯ ವಾಗಿ ಮಹತ್ವ ಪಡೆದಿರುವ ಕಾರ್ಯಕ್ರಮ ಎಂದಿದ್ದಾರೆ. ಮೊದಲಿಗೆ ಚೀತಾಗಳನ್ನು ನಮೀಬಿಯಾದಿಂದ ರಾಜಸ್ಥಾನದ ಜೈಪುರಕ್ಕೆ ತರಲಾಗುತ್ತದೆ. ಅಲ್ಲಿಂದ ಅವುಗಳನ್ನು ಕುನೋದ ಪಾಲ್ಪುರಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಭಾರತಕ್ಕೆ ತರಲಾಗುವ ಚೀತಾಗಳನ್ನು ಹೇಗೆ ನಿಭಾಯಿಸಬೇಕು ಎಂದು ನಮೀಬಿಯಾದಲ್ಲೇ ಅರಣ್ಯ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. 2009ರಲ್ಲಿ ಮ.ಪ್ರ.ದ ಪನ್ನಾ ರಕ್ಷಿತಾ  ರಣ್ಯದಲ್ಲಿ ಹುಲಿ ಗಳನ್ನು ಮರುಪರಿಚಯಿಸುವ ಕಾರ್ಯಕ್ರಮ ಯಶಸ್ವಿಯಾಗಿತ್ತು.

ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಅಸುನೀಗಿತ್ತು. 1952ರಲ್ಲಿ ಚೀತಾ ಸಂತತಿಯನ್ನು “ನಾಮಾವಶೇಷಗೊಂಡ ಪ್ರಾಣಿ ಸಂತತಿ’ ಎಂದು ಘೋಷಿಸಲಾಯಿತು. ಅನಂತರ 2009ರಲ್ಲಿ “ಆಫ್ರಿಕಾ ಚೀತಾವನ್ನು ಭಾರತಕ್ಕೆ ತರುವ ಯೋಜನೆ’ಯನ್ನು ಸರಕಾರ ಹಾಕಿಕೊಂಡಿತು. ಕಳೆದ ವರ್ಷದ ನವೆಂಬರ್‌ನಲ್ಲೇ ಚೀತಾಗಳು ಬರಬೇಕಿತ್ತಾದರೂ ಕೊರೊನಾ ಹಿನ್ನೆಲೆಯಲ್ಲಿ ಯೋಜನೆ ನನೆಗುದಿಗೆ ಬಿದ್ದಿತ್ತು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.