ಚೆನ್ನೈ ಮಳೆಗೆ ಜನರು ತತ್ತರ
Team Udayavani, Nov 4, 2017, 10:10 AM IST
ಚೆನ್ನೈ: ತಮಿಳುನಾಡಿನ ಚೆನ್ನೈಯಲ್ಲಿ 2015ರಲ್ಲಿ ಉಂಟಾದ ಪ್ರವಾಹ ಸನ್ನಿವೇಶ ಮತ್ತೂಮ್ಮೆ ತಲೆದೋರುವ ಆತಂಕ ವ್ಯಕ್ತವಾಗಿದೆ. ಗುರುವಾರ ಹಾಗೂ ಶುಕ್ರವಾರ ಒಟ್ಟು 183 ಮಿ.ಮೀ ಮಳೆಯಾಗಿದೆ. ಚೆನ್ನೈನ ಹಲವು ಭಾಗಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಸುಮಾರು 100ಕ್ಕೂ ಹೆಚ್ಚು ನಿರಾಶ್ರಿತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಖಾಸಗಿ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಮಳೆ ತೀವ್ರತೆ ಹೆಚ್ಚಾದರೆ ರಜೆ ಘೋಷಿ ಸುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ ಶನಿವಾರ ಕೂಡ ತೀವ್ರ ಮಳೆಯಾಗುವ ಸಾಧ್ಯತೆಯಿದೆ.
ತಾಂಬರಂ ಆಸ್ಪತ್ರೆಯ ನೆಲಮಾಳಿಗೆಗೆ ನೀರು ನುಗ್ಗಿದ್ದು, ಸುಮಾರು 60ಕ್ಕೂ ಹೆಚ್ಚು ರೋಗಿಗಳನ್ನು ನೆಲಮಾಳಿಗೆ ಯಿಂದ ಮೊದಲ ಮಹಡಿಗೆ ಸ್ಥಳಾಂತರಿ ಸಲಾಗಿದೆ. ರೈಲು, ಬಸ್ ಹಾಗೂ ಮೆಟ್ರೋ ಸೇವೆಗಳು ಸ್ಥಗಿತಗೊಂಡಿ ತ್ತಾದರೂ, ಈಗ ಚಾಲ್ತಿಗೆ ಬಂದಿದೆ.
ಇನ್ನು ತಮಿಳುನಾಡಿನ ಇತರ ಭಾಗಗಳಲ್ಲೂ ಮಳೆ ಭಾರೀ ಅನಾಹುತ ಉಂಟು ಮಾಡಿದ್ದು, ನಾಗಪಟ್ಟಿಣಂನಲ್ಲಿ ಸತತ ಐದು ದಿನಗಳಿಂದ ಮಳೆ ಸುರಿಯುತ್ತಿದೆ. ನೂರಕ್ಕೂ ಹೆಚ್ಚು ಮನೆಗಳು ಮುಳುಗಿದ್ದು, ಸಾವಿರಾರು ಎಕರೆ ಭತ್ತದ ಬೆಳೆ ನಾಶವಾಗಿದೆ. ರಾಜೇಂದ್ರನ್ ನಾಲೆ ಒಡೆದು ತಲಚಂಕಾಡುವಿನಲ್ಲಿ ಶುಕ್ರವಾರ ಬೆಳಗ್ಗೆ 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿತ್ತು. ತರಂಗಂಬಾಡಿಯಲ್ಲಿ 400 ವರ್ಷಗಳಷ್ಟು ಹಳೆಯದಾದ ಕೋಟೆ ನೀರಿನಲ್ಲಿ ಮುಳುಗಿದೆ. ತಲೈನಯಿರು ಮತ್ತು ವೇದಾರಣ್ಯಂ ಜಿಲ್ಲೆಯಲ್ಲೂ ಭಾರಿ ಮಳೆಯಾಗಿದೆ. ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಏಳುತ್ತಿವೆ. ತಿರುವಳ್ಳೂರು ಮತ್ತು ಕಾಂಚೀಪುರಂನಲ್ಲಿ ಶನಿವಾರ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ