ಈ ಕಲಾವಿದನಿಗೆ ಒಂದು ಸೆಲ್ಯೂಟ್ ಹೇಳಲೇಬೇಕು…ಯಾಕಂತೀರಾ ?
Team Udayavani, Jun 27, 2021, 2:46 PM IST
ಚೆನ್ನೈ : ಇಲ್ಲೊಬ್ಬ ಕಲಾವಿದ ಕೋವಿಡ್ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಕೋವಿಡ್ ಲಸಿಕೆ ಕುರಿತು ಜಾಗೃತಿ ಮೂಡಿಸಿದ್ದಾರೆ. ಇದಕ್ಕಾಗಿ ಆಟೋ ರಿಕ್ಷಾವನ್ನು ವಿಭಿನ್ನವಾಗಿ ಸಿದ್ಧಪಡಿಸಿದ್ದಾರೆ.
ಹೌದು, ಹೀಗೆ ತಿಳಿ ನೀಲಿ ಬಣ್ಣದ ಆಟೋ, ಅದರ ಮೇಲೆ ಸೀರಂಜಿ ಹಾಗೂ ಕೋವಿಡ್ ಲಸಿಕೆಯ ಮಾದರಿ ಹೊತ್ತು ಬರುತ್ತಿರುವ ಆಟೋ ಕೋವಿಡ್ ಕುರಿತು ಜಾಗೃತಿ ಮೂಡಿಸುತ್ತಿದೆ. ಲಸಿಕೆ ಪಡೆಯಲು ಹಿಂದೇಟು ಹಾಕುವ ಜನರಿಗೆ ಧೈರ್ಯ ತುಂಬುತ್ತಿದೆ.
ಕೋವಿಡ್ ಮೊದಲ ಹಾಗೂ ಎರಡನೇ ಅಲೆ ದೇಶದ ಜನತೆಯನ್ನು ನಲುಗಿಸಿತು. ಮಹಾಮಾರಿ ವಿರುದ್ಧ ಯಶಸ್ವಿಯಾಗಿ ಹೋರಾಡಲು ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಲಾವಿದ ಗೌತಮ್ ತಮ್ಮ ಕೈ ಚಳಕದಲ್ಲಿ ಆಟೋವೊಂದನ್ನು ವಿಶೇಷವಾಗಿ ಸಿದ್ಧಪಡಿಸಿದ್ದಾರೆ.
ಚೆನ್ನೈನ ಮಹಾ ನಗರ ಪಾಲಿಕೆ ಜೊತೆ ಕೈ ಜೋಡಿಸಿರುವ ಗೌತಮ್, ಆಟೋ ರೀಕ್ಷಾವನ್ನು ಕೋವಿಡ್ ಜಾಗೃತಿ ವಾಹನವಾಗಿ ಸಿದ್ಧಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಎದುರು ಮಾತಾಡಿರುವ ಗೌತಮ್, ಕೋವಿಡ್ ವಿರುದ್ಧ ಹೋರಾಟಕ್ಕೆ ಲಸಿಕೆ ಹಾಕಿಸಿಕೊಳ್ಳುವುದು ಮೊದಲ ಆದ್ಯತೆಯಾಗಬೇಕು. ಆದ್ದರಿಂದ ಎಲ್ಲರನ್ನೂ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೆಪಿಸಬೇಕು. ಅದಕ್ಕಾಗಿ ಈ ಆಟೋ ಸಿದ್ಧಪಡಿಸಲಾಗಿದೆ.
ಇನ್ನೂ ಕಳೆದ ವರ್ಷ ಕೋವಿಡ್ ಸಮಯದಲ್ಲಿಯೂ ಗೌತಮ್ ಇದೆ ರೀತಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದರು. ಪೊಲೀಸರ ಜೊತೆ ಕೈ ಜೋಡಿಸಿದ್ದ ಅವರು ವಿಶೇಷವಾದ ಹೆಲ್ಮೆಟ್ ವೊಂದನ್ನು ವಿನ್ಯಾಸಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ