ಛತ್ತೀಸ್ಗಢ: 15 ನಕ್ಸಲರು ಹತ
Team Udayavani, Aug 7, 2018, 6:00 AM IST
ರಾಯ್ಪುರ: ಛತ್ತೀಸ್ಗಢದ ಗ್ರಾಮವೊಂದರಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಸೋಮವಾರ ನಡೆದ ಭಾರೀ ಪ್ರಮಾಣದ ಗುಂಡಿನ ಚಕಮಕಿಯಲ್ಲಿ 15 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಛತ್ತೀಸ್ಗಢದ ಇತಿಹಾಸದಲ್ಲೇ ಅತೀ ದೊಡ್ಡ ನಕ್ಸಲ್ ನಿಗ್ರಹ ಕಾರ್ಯಾಚರಣೆ ಇದಾಗಿದ್ದು, ಒಂದೇ ಘಟನೆಯಲ್ಲಿ 15 ಮಂದಿ ಮಾವೋವಾದಿಗಳನ್ನು ಹೊಡೆದುರುಳಿಸಿದ್ದು ಇದೇ ಮೊದಲು ಎಂದು ರಾಜ್ಯದ ವಿಶೇಷ ಪೊಲೀಸ್ ಮಹಾನಿರ್ದೇಶಕ(ನಕ್ಸಲ್ ನಿಗ್ರಹ ಕಾರ್ಯಾಚರಣೆ) ಡಿ.ಎಂ. ಅವಸ್ಥಿ ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದಷ್ಟೇ ನಕ್ಸಲ್ ದಾಳಿಯಿಂದಾಗಿ ಯೋಧರು ಹುತಾತ್ಮರಾಗಿ ದ್ದರು. ಸೋಮವಾರ ಸುಕ್ಮಾದ ಗೊಲ್ಲಪಳ್ಳಿ ಹಾಗೂ ಕೊಂಟಾ ನಡುವಿನ ಬುಡಕಟ್ಟು ಕುಟುಂಬಗಳೇ ಇರುವ ಗ್ರಾಮದಲ್ಲಿ ಬೆಳಗ್ಗಿನ ಜಾವ ನಕ್ಸಲರು ಭದ್ರತಾ ಪಡೆ ಯೋಧರ ಮೇಲೆ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಕ್ಸಲರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಅರಣ್ಯ ಪ್ರದೇಶದಲ್ಲಿ ನಕ್ಸಲರ ತಂಡವೊಂದು ನೆಲೆಯೂರಿದ್ದಾಗಿ ಗುಪ್ತಚರ ಇಲಾಖೆ ಮೂಲಗಳು ಮೊದಲೇ ತಿಳಿಸಿದ್ದರಿಂದ ಭದ್ರತಾ ಪಡೆ ಅಲರ್ಟ್ ಆಗಿತ್ತು. ಹೀಗಾಗಿ ನಕ್ಸಲರ ದಾಳಿ ಎದುರಿಸಲು ಸಾಧ್ಯವಾಗಿದೆ ಎಂದು ಐಜಿಪಿ ವಿವೇಕಾನಂದ ಸಿನ್ಹಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ