ಛತ್ತೀಸ್ಗಢ: ಸೋಲಿನಿಂದ ಕಲಿತ ಪಾಠ
Team Udayavani, May 24, 2019, 12:03 PM IST
ಛತ್ತೀಸ್ಗಢದಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಅನಭವಿಸಿದ ಸೋಲಿನಿಂದ ಪಾಠ ಕಲಿತಂತಿದೆ. ಕೆಲವೇ ತಿಂಗಳುಗಳ ಹಿಂದೆ ನಡೆದಿದ್ದ ವಿಧಾನಸಬೆ ಚುನಾವಣೆಯಲ್ಲಿ ಸೋಲುತ್ತಿದ್ದಂತೆಯೇ ಎಲ್ಲ 11 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. ಅಷ್ಟೇ ಅಲ್ಲ, ಆಡಳಿತ ವಿರೋಧಿ ಅಲೆಯನ್ನೂ ಸದೆಬಡಿದು ಇಡೀ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಲಾಗಿತ್ತು. ಇತರ ಪರಿಣಾಮವೇ 11 ರಲ್ಲಿ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. 2014 ರಲ್ಲೂ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಈ ಬಾರಿಯೂ ಒಂದು ಕ್ಷೇತ್ರಕ್ಕೆ ತೃಪ್ತಿಪಟ್ಟುಕೊಂಡಿದೆ.
ನಿರೀಕ್ಷೆಯಂತೆಯೇ ಇಲ್ಲಿನ ಹಲವು ಕ್ಷೇತ್ರಗಳು ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಹಣಾಹಣಿಯನ್ನು ದಾಖಲಿಸಿವೆ. ಹಲವು ಕ್ಷೇತ್ರಗಳಲ್ಲಿ 2014ರಂತೆಯೇ ಕಡಿಮೆ ಅಂತರದಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 2014 ರಲ್ಲಿ ಕೊರ್ಬಾದಲ್ಲಿ ಬಿಜೆಪಿಯ ಬನ್ಷಿಲಾಲ್ ಮಹತೋ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ನ ಅಜಿತ್ ಜೋಗಿ ವಿರುದ್ಧ ಕೇವಲ 1217 ಮತಗಳಿಂದ ಮಹಾಸಮುಂದ್ನಲ್ಲಿ ಬಿಜೆಪಿಯ ಚಂದು ಲಾಲ್ ಗೆಲುವು ಸಾಧಿಸಿದ್ದರು.
ಗೆದ್ದ ಪ್ರಮುಖರು
ಅರುಣ್ ಸಾವೋ (ಬಿಜೆಪಿ), ಬಿಲಾಸ್ಪುರ
ದೀಪಕ್ ಬೈಜ್ (ಕಾಂಗ್ರೆಸ್), ಬಸ್ತಾರ್
ಸೋತ ಪ್ರಮುಖರು
ತಾಮ್ರಧ್ವಜ ಸಾಹು (ಕಾಂಗ್ರೆಸ್), ದುರ್ಗ
ವಿಷ್ಣು ದೇವ್ ಸಾಯಿ (ಬಿಜೆಪಿ), ರಾಯಗಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್