ಎನ್ಐಎ ಕಾಯ್ದೆ ವಿರುದ್ಧ ಛತ್ತೀಸ್ಗಢ ತಗಾದೆ
Team Udayavani, Jan 16, 2020, 2:27 AM IST
ಹೊಸದಿಲ್ಲಿ: ಕೇರಳ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ಛತ್ತೀಸ್ಗಢದ ಕಾಂಗ್ರೆಸ್ ಸರಕಾರ 2008ರ ರಾಷ್ಟ್ರೀಯ ತನಿಖಾ ಕಾಯ್ದೆಯನ್ನು (ಎನ್ಐಎ) ವಿರೋಧಿಸಿ ಸುಪ್ರೀಂಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದೆ.
ವಿಶೇಷವೆಂದರೆ ಈ ಕಾಯ್ದೆ ರಚನೆಯಾಗಿದ್ದು ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರಸರಕಾರದ ಅವಧಿಯಲ್ಲಿ.
ಸಂವಿಧಾನದ ವಿಧಿ 131 ನೀಡುವ ಅಧಿಕಾರ ಬಳಸಿ, ಛತ್ತೀಸ್ಗಢ ರಾಷ್ಟ್ರೀಯ ತನಿಖಾ ಕಾಯ್ದೆಯನ್ನು ವಿರೋಧಿಸಿದೆ. ಈ ಕಾಯ್ದೆ ಕೇಂದ್ರ ಸರಕಾರದ ವಿರುದ್ಧ ಯಾವುದೇ ತಕರಾರುಗಳಿದ್ದಲ್ಲಿ, ನೇರವಾಗಿ ಅರ್ಜಿ ಸಲ್ಲಿಸುವ ಅಧಿಕಾರಗಳನ್ನು ರಾಜ್ಯ ಸರಕಾರಗಳಿಗೆ ನೀಡಿದೆ.
ತಕರಾರು ಏನು?: ಎನ್ಐಎ ಕಾಯ್ದೆ ಕೇಂದ್ರ ಸರಕಾರದ ಅಧಿಕಾರವ್ಯಾಪ್ತಿಯನ್ನು ಮೀರಿದೆ. ಮಾತ್ರವಲ್ಲ ರಾಜ್ಯಸರಕಾರದ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತದೆ. ಪ್ರಕರಣವೊಂದನ್ನು ರಾಜ್ಯಸರಕಾರ ಪೊಲೀಸರ ಮೂಲಕ ತನಿಖೆ ನಡೆಸುತ್ತಿದ್ದರೂ, ಕೇಂದ್ರ ಸರಕಾರ ಸ್ವತಂತ್ರ ತನಿಖಾ ಸಂಸ್ಥೆ ರಚಿಸಲು ಅವಕಾಶ ನೀಡುತ್ತದೆ.
ಇಲ್ಲಿ ಎಲ್ಲ ಅಧಿಕಾರವೂ ಕೇಂದ್ರದ ಬಳಿಯೇ ಇರುತ್ತದೆ. ರಾಜ್ಯಕ್ಕೆ ಪೂರ್ವಭಾವಿಯಾಗಿ ಮಾಹಿತಿ ನೀಡಬೇಕು, ಅನುಮತಿ ಪಡೆಯಬೇಕು, ಮಾತುಕತೆ ನಡೆಯಬೇಕು ಎನ್ನುವ ಯಾವುದೇ ಔಪಚಾರಿಕತೆಗಳೂ ಅಲ್ಲಿರುವುದಿಲ್ಲ ಎಂದು ಚತ್ತೀಸ್ಗಢ ವಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ