Chhattisgarh: ಎನ್ಕೌಂಟರ್ನಲ್ಲಿ ಮೂವರು ನಕ್ಸಲರು ಹತ
Team Udayavani, Apr 7, 2024, 1:34 AM IST
ರಾಯು³ರ: ಛತ್ತೀಸ್ಗಢ ಜಿಲ್ಲೆಯ ಬಿಜಾಪುರ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಭದ್ರತಾ ಪಡೆಗಳು ಶನಿವಾರ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.
ತೆಲಂಗಾಣ-ಛತ್ತೀಸ್ಗಢ ಗಡಿಯ ಕಾಂಕೇರ್ ಅರಣ್ಯದಲ್ಲಿ ನಕ್ಸಲರು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಛತ್ತೀಸ್ಗಢ ಪೊಲೀಸ್ ಮತ್ತು ತೆಲಂಗಾಣದ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿತ್ತು. ಶನಿವಾರ ಮುಂಜಾನೆ 5.30ರ ವೇಳೆಗೆ ನಕ್ಸಲರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ನಕ್ಸಲರು ಹತರಾಗಿದ್ದು, ಅವರಿಂದ 1 ಎಕೆ-47 ರೈಫಲ್, ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಕಳೆದ ವಾರ ಛತ್ತೀಸ್ಗಢ ಜಿಲ್ಲೆಯ ಬಿಜಾಪುರ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆ ವೇಳೆ 3 ಮಹಿಳೆಯರು ಸೇರಿ 13 ನಕ್ಸಲರು ಹತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ