- Friday 13 Dec 2019
“ಅಕ್ರಮದಲ್ಲಿ ಚಿದಂಬರಂ ಪಾತ್ರ ಪ್ರಧಾನ; ಜಾಮೀನು ಅಸಾಧ್ಯ’
Team Udayavani, Nov 16, 2019, 5:37 AM IST
ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಜಾಮೀನು ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ. ಮಹತ್ವದ ಅಂಶವೆಂದರೆ ಐಎನ್ಎಕ್ಸ್ ಪ್ರಕರಣದಲ್ಲಿ ಅವರೇ ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನುವುದನ್ನು ನ್ಯಾಯಪೀಠ ಸ್ಪಷ್ಟವಾಗಿ ಹೇಳಿದೆ.
ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. ನ್ಯಾ.ಸುರೇಶ್ಕೈಟ್ ಅವರನ್ನೊಳಗೊಂಡ ನ್ಯಾಯಪೀಠ “ಈ ಹಂತದಲ್ಲಿ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹೀಗಾಗಿ ಜಾಮೀನು ಅರ್ಜಿಯನ್ನು ಪರಿಗಣಿಸಲು ಬಯಸುವುದಿಲ್ಲ’ ಎಂದರು.
ಜಾರಿ ನಿರ್ದೇಶನಾಲಯ ದಾಖಲಿಸಿದ ಪ್ರಕರಣದಲ್ಲಿ ತನಿಖಾ ಸಂಸ್ಥೆ ಅಕ್ರಮವಾಗಿ ಹಣ ವರ್ಗಾಯಿಸಿದ ಪ್ರಕರಣ, ಭ್ರಷ್ಟಾಚಾರ ಎಸಗಿರುವ ಆರೋಪದಲ್ಲಿ ಸಿಬಿಐ ದಾಖಲಿಸಿರುವ ಪ್ರಕರಣ ಮತ್ತು ಸಂಗ್ರಹಿಸಲಾಗಿರುವ ಸಾಕ್ಷ್ಯ ಪ್ರತ್ಯೇಕವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅ.16ರಂದು ಚಿದು ಅವರನ್ನು ಬಂಧಿಸಿತ್ತು. ಸದ್ಯ, ಅವರು ನ.27ರ ವರೆಗೆ ನ್ಯಾಯಾಂಗ ವಶದಲ್ಲಿ ಇದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ರೇಪ್ ಇನ್ ಇಂಡಿಯಾ...
-
ನವದೆಹಲಿ:ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ...
-
ನವದೆಹಲಿ: ಅಸ್ಸಾಂನ ಗುವಾಹಟಿ ಮತ್ತು ದಿಬ್ರುಗಢದಲ್ಲಿ ಅನಿರ್ದಿಷ್ಟಾವಧಿವರೆಗೆ ಜಾರಿಗೊಳಿಸಿದ್ದ ಕರ್ಫ್ಯೂವನ್ನು ಶುಕ್ರವಾರ ಬೆಳಗ್ಗೆ 8ರಿಂದ 1ಗಂಟೆವರೆಗೆ ಸಡಿಸಲಿಸಲಾಗಿದೆ...
-
ಹೊಸದಿಲ್ಲಿ: ಕೇಂದ್ರ ಸರಕಾರ ಹೊಸ ಪಾಸ್ ಪೋರ್ಟ್ ಗಳಲ್ಲಿ ಕಮಲದ ಚಿಹ್ನೆಯನ್ನು ಮುದ್ರಿಸುತ್ತಿದ್ದು, ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಇದೀಗ ವಿದೇಶಾಂಗ ಇಲಾಖೆ...
-
ಕೋಲ್ಕತಾ: ಬಾಡಿಗೆ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ 60 ವರ್ಷದ ಮಹಿಳೆಯ ತಲೆಕತ್ತರಿಸಿ, ಹೊಟ್ಟೆಯನ್ನು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕೋಲ್ಕತಾದಲ್ಲಿ...
ಹೊಸ ಸೇರ್ಪಡೆ
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ರೇಪ್ ಇನ್ ಇಂಡಿಯಾ...
-
ಮೈಸೂರು: ರಾಜ್ಯ ಸರ್ಕಾರ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಚಿತ್ರನಗರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡದೆ ಮೈಸೂರಿನಲ್ಲೇ ಸ್ಥಾಪಿಸಬೇಕೆಂದು ಒತ್ತಾಯಿಸಿ...
-
ಬೆಂಗಳೂರು: ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿ ಜನರು ಸಂಕಷ್ಟ ಅನುಭವಿಸಿದ್ದು ಗೊತ್ತೇ ಇದೆ. ಉಳ್ಳಾಗಡ್ಡಿ ಬೆಲೆ ದ್ವಿಶತಕ ಸಮೀಪಿಸುತ್ತಿದ್ದಂತೆ ದೇಶದಾದ್ಯಂತ...
-
ಪಿರಿಯಾಪಟ್ಟಣ: ಪಟ್ಟಣದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಾಗ ಮತ್ತು ರಾಜಕಾಲುವೆಗಳ ಸರ್ವೆ ನಡೆಸಿ, ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪುರ ಸಭಾ ಮುಖ್ಯಾಧಿಕಾರಿ...
-
ಮಳವಳ್ಳಿ: ಪಟ್ಟಣದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ ಕಾರ್ಯಕ್ರಮ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಿತು. ಪ್ರಾಂತ...