ನ.15ರೊಳಗೆ ಅಯೋಧ್ಯೆ ತೀರ್ಪು ಪ್ರಕಟ? ಉತ್ತರಪ್ರದೇಶ ಹಿರಿಯ ಅಧಿಕಾರಿಗಳ ಜತೆ ಸಿಜೆಐ ಭೇಟಿ
Team Udayavani, Nov 8, 2019, 11:50 AM IST
ನವದೆಹಲಿ:ಬಹು ನಿರೀಕ್ಷಿತ ಹಾಗೂ ದಶಕಗಳಷ್ಟು ಹಳೆಯದಾದ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂವಿವಾದದ ಪ್ರಕರಣಕ್ಕೆ ಸಂಬಂಧಿಸಿದ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್ ನವೆಂಬರ್ 15ರೊಳಗೆ ಘೋಷಿಸುವ ಸಾಧ್ಯತೆ ಇದ್ದು, ಏತನ್ಮಧ್ಯೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯಿ ಅವರು ಉತ್ತರಪ್ರದೇಶದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆ ಕುರಿತು ಸಿಜೆಐ ಗೋಗೋಯಿ ಅವರು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ತಿವಾರಿ ಮತ್ತು ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ್ ಸಿಂಗ್ ಅವರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ನವೆಂಬರ್ 17ರಂದು ಸಿಜೆಐ ರಂಜನ್ ಗೋಗೋಯಿ ಅವರು ನಿವೃತ್ತಿಯಾಗಲಿದ್ದು, ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ಕುರಿತ ಅಂತಿಮ ತೀರ್ಪನ್ನು ನ.15ರಂದು ಘೋಷಿಸುವ ಸಾಧ್ಯತೆ ಇದೆ ಎಂದು ವರದಿ ವಿವರಿಸಿದೆ.
ಸುಪ್ರೀಂಕೋರ್ಟ್ ನ ಸಿಜೆಐ ರಂಜನ್ ಗೋಗೋಯಿ ಅವರ ನಿವೃತ್ತಿ ನಂತರ ಜಸ್ಟೀಸ್ ಎಸ್ ಎ ಬೋಬ್ಡೆ ನೂತನ ಸಿಜೆಐಯಾಗಲಿದ್ದಾರೆ. ಈಗಾಗಲೇ ತಮ್ಮ ಮುಂದಿನ ನೂತನ ಸಿಜೆಐ ಬೋಬ್ಡೆ ಅವರನ್ನು ನೇಮಕ ಮಾಡಬೇಕೆಂದು ಗೋಗೋಯಿ ಕೇಂದ್ರ ಗೃಹಸಚಿವಾಲಯಕ್ಕೆ ವಾಡಿಕೆಯಂತೆ ಶಿಫಾರಸ್ಸು ಮಾಡಿದ್ದಾರೆ.
ಸುಮಾರು 40 ದಿನಗಳ ಕಾಲ ಸುದೀರ್ಘವಾಗಿ 133 ವರ್ಷಗಳಷ್ಟು ಹಳೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ವಾದ, ಪ್ರತಿವಾದವನ್ನು ಆಲಿಸಿದ್ದ ಸಿಜೆಐ ರಂಜನ್ ಗೋಗೋಯಿ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು