“ಅಮ್ಮನ ಚೇರ್‌’ನಲ್ಲಿ ಕುಳಿತ ಸಿಎಂ ಎಡಪ್ಪಾಡಿ ಪಳನಿಸ್ವಾಮಿ


Team Udayavani, Feb 21, 2017, 3:45 AM IST

Chief-Minister-E-Palaniswam.jpg

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಎಡಪ್ಪಾಡಿ ಪಳನಿಸ್ವಾಮಿ ಅವರು ಇದೇ ಮೊದಲ ಬಾರಿಗೆ “ಅಮ್ಮ’ನ ಕುರ್ಚಿಯಲ್ಲಿ ಆಸೀನರಾಗಿದ್ದಾರೆ. ಅಷ್ಟೇ ಅಲ್ಲ, ಜಯಲಲಿತಾರ ಆಸೆಯಂತೆ ಹಂತಹಂತವಾಗಿ ಪಾನ ನಿಷೇಧ ಮಾಡುವ ಅಂಗವಾಗಿ ಮೊದಲ ದಿನವೇ 500 ಸರ್ಕಾರಿ ಚಿಲ್ಲರೆ ಸಾರಾಯಿ ಅಂಗಡಿಗಳಿಗೆ ಬೀಗ ಹಾಕುವ ಕೆಲಸಕ್ಕೆ ಸಹಿ ಹಾಕಿದ್ದಾರೆ.

ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದಂದಿನಿಂದ ಅಂದರೆ ಸುಮಾರು 5 ತಿಂಗಳಿಂದ ಅವರ ಕುರ್ಚಿ ಖಾಲಿಬಿದ್ದಿತ್ತು. ಪನ್ನೀರ್‌ಸೆಲ್ವಂ ಅವರು ಹಂಗಾಮಿ ಸಿಎಂ ಆಗಿದ್ದರೂ, ಒಂದು ಬಾರಿಯೂ ಅಮ್ಮನ ಕುರ್ಚಿಯಲ್ಲಿ ಕುಳಿತುಕೊಳ್ಳುವ “ಸಾಹಸ’ ಮಾಡಿರಲಿಲ್ಲ. ಆ ಕುರ್ಚಿಯ ಮೇಲೆ ಜಯಲಲಿತಾರ ಫೋಟೋವನ್ನಿಟ್ಟು, ಪಕ್ಕದ ಸೀಟಿನಲ್ಲಿ ಕುಳಿತೇ ಪನ್ನೀರ್‌ಸೆಲ್ವಂ ಆಡಳಿತ ನಡೆಸಿದ್ದರು. ಇದೀಗ, ಪಳನಿಸ್ವಾಮಿ ಅವರು ಅಮ್ಮ ಬಳಕೆ ಮಾಡುತ್ತಿದ್ದ ಸಿಎಂ ಕುರ್ಚಿಯಲ್ಲಿ ಕುಳಿತು ಅಧಿಕೃತವಾಗಿ ಕೆಲಸ ಆರಂಭಿಸಿದ್ದಾರೆ.

ಮೊದಲ ದಿನವೇ 5 ಆದೇಶಗಳಿಗೆ ಅವರು ಸಹಿ ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 500 ಮದ್ಯದಂಗಡಿಗಳನ್ನು ಮುಚ್ಚುವುದು, ಒಂದು ಲಕ್ಷ ಮಹಿಳೆಯರಿಗೆ ಸಬ್ಸಿಡಿದರದಲ್ಲಿ ಮೊಪೆಡ್‌, ಹೆರಿಗೆಭತ್ಯೆಯನ್ನು 18 ಸಾವಿರಕ್ಕೆ ಹೆಚ್ಚಳ, ಮೀನುಗಾರರಿಗೆ ಮನೆ ಸೇರಿದಂತೆ ಚುನಾವಣಾ  ಸಮಯದಲ್ಲಿ ಕೊಟ್ಟಿದ್ದ ಹಲವು ಭರವಸೆಗಳ ಪೈಕಿ ಪ್ರಮಖವಾದದ್ದನ್ನು ಅನುಷ್ಠಾನಕ್ಕೆ ತರಲು ಸರ್ಕಾರಿ ಆದೇಶ ಹೊರಡಿಸಿದ್ದಾರೆ. ಜತೆಗೆ, ಎಲ್ಲರಿಗೂ ಶುದ್ಧ ಕುಡಿಯುವ ನೀರು ಮತ್ತು ಬರದಲ್ಲಿ ಸಂಕಷ್ಟ ಎದುರಿಸುತ್ತಿರುವ  ರೈತರ ನೆರವಿಗೆ ನಿಧಿ ಸ್ಥಾಪಿಸುವ ಭರವಸೆಕೊಟ್ಟಿದ್ದಾರೆ. 

ಸೀರೆ ಕೊಡಲು ಯತ್ನಿಸಿದವರ ಬಂಧನ: ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಪ್ರತಿಭಟನೆಗೆ ಯತ್ನಿಸಿದ 100 ಮಂದಿ ಡಿಎಂಕೆ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಇತ್ತೀಚೆಗೆ ನಡೆದ ವಿಶ್ವಾಸಮತದ ವೇಳೆ ಪಳನಿಸ್ವಾಮಿ ಪರ ಮತ ಚಲಾಯಿಸಿದ್ದ ತಮಿಳುನಾಡು ವಿಧಾನಸಭೆಯ ಉಪಸಭಾಧ್ಯಕ್ಷ, ಎಐಎಡಿಎಂಕೆ ಶಾಸಕ ಪೊಲ್ಲಾಚಿ ವಿ. ಜಯರಾಮನ್‌ ಅವರಿಗೆ ಸೀರೆ, ಬಳೆಗಳನ್ನು ನೀಡಲು ಡಿಎಂಕೆ ಕಾರ್ಯಕರ್ತರು ಮುಂದಾಗಿದ್ದರು. ಇದನ್ನೆಲ್ಲ ಹೊತ್ತುಕೊಂಡು ಮೆರವಣಿಗೆಯಲ್ಲಿ ಬರುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಶ್ವಾಸಮತದ ಸಿಂಧುತ್ವ; ಇಂದು ವಿಚಾರಣೆ
ಈ ಮಧ್ಯೆ, ವಿಧಾನಸಭೆಯಲ್ಲಿ ರಾಜ್ಯಪಾಲರ ಆದೇಶದಂತೆ ಅಂಗೀಕರಿಸಲಾದ ವಿಶ್ವಾಸಮತದ ವಿರುದ್ಧ ಡಿಎಂಕೆ ಹೈಕೋರ್ಟ್‌ ಮೆಟ್ಟಿಲೇರಿದೆ. ಬಹುಮತ ಸಾಬೀತು ಪ್ರಕ್ರಿಯೆಯ ಸಿಂಧುತ್ವ ಪ್ರಶ್ನೆ ಮಾಡಿರುವ ಡಿಎಂಕೆ, ಕಾನೂನು ಪ್ರಕಾರ ವಿಶ್ವಾಸಮತಯಾಚನೆ ಮಾಡಿಲ್ಲ. ಡಿಎಂಕೆ ಸದಸ್ಯರನ್ನು ಬಲವಂತವಾಗಿ ಹೊರಕ್ಕೆ ಹಾಕಲಾಗಿದೆ. ಆದ್ದರಿಂದ ಇದನ್ನು ಅನೂರ್ಜಿತಗೊಳಿಸಬೇಕು ಎಂದು ಮನವಿ ಮಾಡಿದೆ. ಮಂಗಳವಾರ ಈ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ ನಡೆಯಲಿದೆ. ಇದೇ ವಿಚಾರವಾಗಿ ಪಕ್ಷ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯನ್ನೂ ಹಮ್ಮಿಕೊಂಡಿದೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.