ಶಸ್ತ್ರಾಸ್ತ್ರ ಸ್ವಾವಲಂಬನೆಗೆ ಸಿದ್ಧರಾಗಿ; ವಿದೇಶಿ ಆಯುಧಗಳ ಮೇಲಿನ ಅತಿಯಾದ ಅವಲಂಬನೆ ಸರಿಯಲ್ಲ
Team Udayavani, May 11, 2020, 5:48 AM IST
ಹೊಸದಿಲ್ಲಿ: ವಿದೇಶಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ತರಿಸಿಕೊಳ್ಳಲು ನಾವೇನು ಪ್ರಪಂಚದಾದ್ಯಂತ ದಂಡ ಯಾತ್ರೆ ಕೈಗೊಳ್ಳುತ್ತಿಲ್ಲ, ಯಾರ ಮೇಲೂ ಯುದ್ಧ ಮಾಡುತ್ತಿಲ್ಲ.
ಹೀಗಾಗಿ ಶಸ್ತ್ರಾಸ್ತ್ರಗಳ ವಿಚಾರದಲ್ಲಿ ‘ಮೇಕ್ ಇನ್ ಇಂಡಿಯ’ ಕಾರ್ಯಕ್ರಮವನ್ನು ಮುನ್ನೆಲೆಗೆ ತರುವ ಅಗತ್ಯವಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಅಭಿಪ್ರಾಯಪಟ್ಟಿದ್ದಾರೆ.
‘ದ ಟೈಮ್ಸ್ ಆಫ್ ಇಂಡಿಯಾ’ಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸಶಸ್ತ್ರ ಪಡೆಗಳು ವಿದೇಶಿ ಶಸ್ತ್ರಾಸ್ತ್ರ ಗಳ ಮೇಲಿನ ಅತಿಯಾದ ಅವಲಂಬ ನೆಯಿಂದ ಹೊರಬಂದು, ದೇಶಿ ನಿರ್ಮಿತ ಆಯುಧಗಳನ್ನು ಬಳಸುವ ಮೂಲಕ ‘ಮೇಕ್ ಇನ್ ಇಂಡಿಯಾ’ ಕೇವಲ ಘೋಷಣೆಯಲ್ಲ ಎಂಬುದನ್ನು ಸಾಬೀತು ಪಡಿಸಬೇಕು.
ಕೋವಿಡ್ ವೈರಸ್ ಎಲ್ಲರನ್ನೂ ಬಾಧಿಸುತ್ತಿರುವ ಈ ಸಂದರ್ಭದಲ್ಲಿ ವಾಸ್ತವ ಅರಿತು, ಪರಿಸ್ಥಿತಿಗೆ ಹೊಂದಿಕೊಂಡು ಹೋಗುವುದನ್ನು ರೂಢಿಸಿಕೊಳ್ಳಬೇಕು. ನಮ್ಮ ಅಗತ್ಯ ಮೀರಿ ಆಯುಧ ಆಮದು ಮಾಡಿಕೊಳ್ಳುವ ಬದಲು ದೇಶದಲ್ಲೇ ಕಡಿಮೆ ವೆಚ್ಚದಲ್ಲಿ ಆಯುಧಗಳ ನಿರ್ಮಾಣ, ಅಭಿವೃದ್ಧಿ ಮತ್ತು ತಯಾರಿಕೆಗೆ ಒತ್ತು ನೀಡಬೇಕು ಎಂದಿದ್ದಾರೆ.
ಬಾಕಿ ಇರುವ ಯೋಜನೆಗಳು
– ಹೊಸ ಪೀಳಿಗೆಯ ಸ್ಟೆಲ್ತ್ ಜಲಾಂತರ್ಗಾಮಿಗಳು
– ಮೈನ್ಸ್ವೀಪರ್ಗಳು
– ಭೂ ಸೇನೆ ಯುದ್ಧ ವಾಹನಗಳು
– ಯುದ್ಧ ಸಾಮಗ್ರಿ ಸರಬರಾಜು ವಿಮಾನಗಳು
– ಯುದ್ಧ ವಿಮಾನಗಳು (ಫೈಟರ್ ಜೆಟ್)
– ಲಘು ಉಪಯೋಗದ ಹೆಲಿಕಾಪ್ಟರ್ಗಳು
ಮಾರುತಿ 800 ಕಾರನ್ನು ನಮ್ಮ ನೆಲದಲ್ಲೇ ನಿರ್ಮಿಸುವ ಮೂಲಕ ದೇಶಿ ಉತ್ಪಾದನೆ ಆರಂಭಿಸಿದ ಭಾರತ ಇಂದು ವಾಹನ ಉತ್ಪಾದನೆಯಲ್ಲಿ ವಿಶ್ವದ ಗಮನಸೆಳೆದಿದೆ. ಹಾಗೇ ಆಯುಧಗಳ ಉತ್ಪಾದನೆ, ನಿರ್ಮಾಣದಲ್ಲೂ ಸ್ವಾವಲಂಬನೆ ಸಾಧಿಸಬೇಕಿದೆ.
– ಜ. ಬಿಪಿನ್ ರಾವತ್, ರಕ್ಷಣಾ ಪಡೆಗಳ ಮುಖ್ಯಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ