ಭಾರತೀಯರ ಅಣಕವಾಡಿ ಕೀಳುಮಟ್ಟಕ್ಕಿಳಿದ ಚೀನ


Team Udayavani, Aug 18, 2017, 7:30 AM IST

c.jpg

ಬೀಜಿಂಗ್‌: ಡೊಕ್ಲಾಮ್ ಗಡಿವಿವಾದ ಉದ್ಭವವಾದ ಬಳಿಕ ಭಾರತದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚೀನದ ಸರಕಾರಿ ಸ್ವಾಮ್ಯದ ಮಾಧ್ಯಮಗಳು ಇದೀಗ ಸಭ್ಯತೆಯ ಎಲ್ಲೆ ಮೀರಿವೆ. 

ಸುದ್ದಿಗಳಲ್ಲಿ, ಲೇಖನಗಳಲ್ಲಿ ಭಾರತದ ವಿರುದ್ಧ ಸಮರ ಸಾರಿರುವ ಅಲ್ಲಿನ ಮಾಧ್ಯಮಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಾರತೀಯರನ್ನು ಅಣಕಿಸುವ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಸರಕಾರಿ ಸ್ವಾಮ್ಯದ ಕ್ಸಿನ್‌ಹುವಾ ಸುದ್ದಿ ಸಂಸ್ಥೆ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಬಿಡುಗಡೆ ಮಾಡಿದೆ. 

ಸಿಕ್ಖ್  ರೀತಿ ದಾಡಿ ಮತ್ತು ಪೇಟದ ವೇಷ ಧರಿಸಿದ ಚೀನೀ ನಿರೂಪಕಿಯೊಬ್ಬಳು ಭಾರತವನ್ನು ಹಳಿಯುವ ರೀತಿಯ, ಚೀನೀಯನೊಬ್ಬನೊಂದಿಗೆ ಸಂಭಾಷಿಸುತ್ತಿರುವ ವಿಡಿಯೋ ಬಿಡುಗಡೆ ಮಾಡಲಾಗಿದೆ. ಭಾರತದ “ಏಳು ಪಾಪಗಳು’ (ಸೆವೆನ್‌ ಸಿನ್ಸ್‌) ಹೆಸರಿನಲ್ಲಿ ಇದನ್ನು ಪ್ರದರ್ಶಿಸಲಾಗಿದ್ದು, ಜನಾಂಗೀಯ, ಪೂರ್ವಗ್ರಹ ಪೀಡಿತ ಮಾತುಗಳನ್ನು ಹೊಂದಿದೆ. 7 ಪಾಪಗಳನ್ನು ವಿಡಿಯೋದಲ್ಲಿ ಪಟ್ಟಿ ಮಾಡಿದ್ದು, ಗಡಿಯೊಳಗೆ ನುಗ್ಗಿರುವುದು, ತಪ್ಪೋ ಸರಿಯೋ ಗೊತ್ತಿಲ್ಲದಿರುವುದು, ಆರೋಪ ಹೊರಿಸಿ ತಾನೇ ಸಂತ್ರಸ್ತನಂತೆ ಬಿಂಬಿಸುವುದು, ಸಣ್ಣ ನೆರೆಯ ದೇಶವನ್ನು ಹೈಜಾಕ್‌ ಮಾಡಿರುವುದು ಮತ್ತು ತಪ್ಪು ಎಂದು ಗೊತ್ತಿದ್ದರೂ ಅದನ್ನೇ ಸಮರ್ಥಿ ಸಿಕೊಳ್ಳುತ್ತಿರುವುದು ಇತ್ಯಾದಿಗಳನ್ನು ಹೇಳಲಾಗಿದೆ. ಇಂಗ್ಲಿಷ್‌ ವಿಡಂಬನೆಗಳೂ ಇದರಲ್ಲಿದ್ದು, ಜನರು ನಗುತ್ತಿರುವ ಆಡಿಯೋವನ್ನೂ ಇದಕ್ಕೆ ಹಾಕಲಾಗಿದೆ.

ಚೀನದಿಂದ ಮತ್ತಷ್ಟು ಗಡಿ ಚಿತಾವಣೆ:  ಡೋಕ್ಲಾಂ ವಿವಾದ ಜೀವಂತವಾಗಿರುವ ಹಿನ್ನೆಲೆಯಲ್ಲಿ ಚೀನ ಭಾರತದ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಡಿಯ ವಿವಿಧ ಭಾಗಗಳಲ್ಲಿ ಒಳನುಗ್ಗುವ, ಪ್ರದೇಶಗಳನ್ನು ವಶಪಡಿಸಿಕೊಳ್ಳುವ ಯತ್ನಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ. ಇತ್ತೀಚೆಗೆ ಲಡಾಖ್‌ನ ಪೆನುಗಾಂಗ್‌ ಸರೋವರ ಪ್ರದೇಶ ದಲ್ಲೂ ಚೀನ ಇಂತಹುದೇ ಯತ್ನ ನಡೆಸಿದ್ದು, ಇದಕ್ಕೆ ಉದಾಹರಣೆ ಎನ್ನಲಾಗಿದೆ.

ಮುಂದಿನ ದಿನಗಳಲ್ಲಿ ಗಡಿ ಸಮಸ್ಯೆ ಇರುವ ಭಾಗಗಳಾದ ಹಿಮಾಚಲ ಪ್ರದೇಶ, ಸಿಕ್ಕಿಂ, ಅರುನಚಲ ಪ್ರದೇಶ, ಉತ್ತರಾಖಂಡ ಮುಂತಾದೆಡೆ ಚೀನ ಸೇನೆ ಒಳನುಗ್ಗುವ ಯತ್ನ ಮಾಡಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಕಟ್ಟೆಚ್ಚರದಲ್ಲಿರುವಂತೆ ಯೋಧರಿಗೆ ಸೂಚಿಸಲಾಗಿದೆ. ಅಲ್ಲದೇ ಚೀನ ಸೇನೆಯ ಚಿತಾವಣೆಯನ್ನು ಶಾಂತವಾಗಿ ಎದುರಿಸುವಂತೆ ಹೇಳಲಾಗಿದೆ. 

ಭಾರತ ಪಾಕಿಸ್ಥಾನವನ್ನಾಗಲಿ, ಚೀನವನ್ನಾಗಲಿ ಎದುರಿಸಬಹುದು. ಆದರೆ ಅಪಾಯ ಒಳಗಿನಿಂದಲೇ ಇದೆ. ಕಳ್ಳ ಒಳಗೆ ಕೂತಿದ್ದು, ಎಲ್ಲವನ್ನೂ ಕೊಳ್ಳೆ ಹೊಡೆಯಲು ಯೋಜಿಸಿದ್ದಾನೆ.
– ಫಾರೂಕ್‌ ಅಬ್ದುಲ್ಲಾ, ನ್ಯಾಷನಲ್‌ ಕಾನ್ಫರೆನ್ಸ್‌ ಮುಖಂಡ 

ಭಾರತ ಮತ್ತು ಚೀನಗಳು ತಮ್ಮ ನಡುವಿನ ಭೇದಗಳನ್ನು ವಿವಾದಗಳನ್ನಾಗಿ ಬೆಳೆಸದೇ ಅವುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸ ಬೇಕು. ಸಹೋದರರು ಒಂದಾಗಿ ಜೀವಿಸಿದರೆ, ಹಲವು ಸಮಸ್ಯೆಗಳನ್ನು ಪರಿಹರಿಸಬಹುದು. 
– ತರುಣ್‌ ವಿಜಯ್‌, ಬಿಜೆಪಿ ಸಂಸದ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.