
ಅರುಣಾಚಲ ಪ್ರದೇಶದಲ್ಲಿ ನಡೆದ ಜಿ20 ಗೌಪ್ಯ ಸಭೆಗೆ ಚೀನ ಗೈರು
Team Udayavani, Mar 28, 2023, 7:30 AM IST

ನವದೆಹಲಿ: ಗಡಿ ವಿಚಾರವಾಗಿ ಭಾರತದ ಜತೆಗೆ ಕ್ಯಾತೆ ತೆಗೆಯುತ್ತ, ಜಗತ್ತಿನ ಮುಂದೆ ಸ್ನೇಹಕ್ಕಾಗಿ ಕೈಚಾಚುತ್ತಿರುವಂತೆ ಸದಾ ನಾಟಕವಾಡುವ ಚೀನ, ಭಾನುವಾರ ಅರುಣಾಚಲ ಪ್ರದೇಶದಲ್ಲಿ ನಡೆದ ಜಿ20 ಗೌಪ್ಯ ಸಭೆಗೆ ಗೈರಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾರತದ ಅಧ್ಯಕ್ಷತೆಯಲ್ಲಿ ನವೆಂಬರ್ನಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಅದಕ್ಕೂ ಮುಂಚೆ ಅಧಿಕಾರಿಗಳ ಮಟ್ಟದಲ್ಲಿ ಗೌಪ್ಯ ಸಭೆಗಳನ್ನು ನಡೆಸಲಾಗುತ್ತಿದೆ.
ಅದರಂತೆ ಅರುಣಾಚಲ ಪ್ರದೇಶದಲ್ಲಿಯೂ ಭಾನುವಾರ ಸಭೆ ನಿಯೋಜಿಸಲಾಗಿತ್ತು. 50ಕ್ಕೂ ಅಧಿಕ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಚೀನ ಭಾಗವಹಿಸಿರಲಿಲ್ಲ. ಅಧಿಕೃತವಾಗಿ ಚೀನ ಸಭೆಯನ್ನು ವಿರೋಧಿಸಿತ್ತೇ ಎಂಬುದು ಇನ್ನೂ ಖಾತರಿಯಾಗಿಲ್ಲ.
ಅರುಣಾಚಲ ಪ್ರದೇಶವನ್ನು ಟಿಬೆಟ್ನ ಭಾಗವೆಂದು ಚೀನ ಹೇಳುತ್ತಲೇ ಇದ್ದು, ಭಾರತ ಈ ಪ್ರದೇಶ ತನ್ನ ಅವಿಭಜಿತ ಅಂಗವೆಂದು ಪುನರುಚ್ಚರಿಸುತ್ತಲೇ ಇದೆ. ಅದೇ ಅರುಣಾಚಲದಲ್ಲಿಯೇ, ಚೀನದ ಗೈರುಹಾಜರಿಗೆ ಕಾರಣವಿರಬಹುದೆಂದು ಮೂಲಗಳು ತಿಳಿಸಿವೆ.
ಇಟಾನಗರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಅಲ್ಲಿನ ಬೌದ್ಧ ಮಠಕ್ಕೂ ಭೇಟಿ ನೀಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
