ಗಾಲ್ವಾನ್ ಸಂಘರ್ಷ: ಚೀನಾ ಪಡೆಗೆ ‘ಭಾರತಕ್ಕಿಂತ ಕಡಿಮೆ’ ಹಾನಿ, ಚೀನಿ ಮಾಧ್ಯಮ ವರದಿ
Team Udayavani, Sep 18, 2020, 9:41 AM IST
ಹೊಸದಿಲ್ಲಿ: ಕಳೆದ ಜೂನ್ ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಭಾರತದ ಸೇನೆಗಾದ ಹಾನಿಗಿಂತ ಕಡಿಮೆ ಪ್ರಮಾಣದ ಹಾನಿ ಚೀನಿ ಸೇನೆಗಾಗಿದೆ ಎಂದು ಚೀನಾದ ಮಾಧ್ಯಮ ವರದಿ ಮಾಡಿದೆ.
ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಈ ಬಗ್ಗೆ ವರದಿ ಮಾಡಿದೆ. ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ಚೀನಾಗೆ ಹೆಚ್ಚಿನ ಹಾನಿಯಾಗಿದೆ ಎಂಬ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಯನ್ನು ಅದು ತಿರಸ್ಕರಿಸಿದೆ.
ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗ್ಲೋಬಲ್ ಟೈಮ್ಸ್ ಮುಖ್ಯ ಸಂಪಾದಕ , ”ನನಗೆ ತಿಳಿದಿರುವಂತೆ ಗಾಲ್ವಾನ್ ಸಂಘರ್ಷದಲ್ಲಿ ಭಾರತಕ್ಕಿಂತ ಕಡಿಮೆ ಹಾನಿ ಚೀನಾ ಪಡೆಗಾಗಿದೆ. ಭಾರತೀಯ ಸೇನೆಯು ಚೀನಾದ ಯಾವುದೇ ಸೈನಿಕರನ್ನು ಬಂಧಿಸಿಲ್ಲ. ಆದರೆ ಚೀನಾ ಪಡೆ ಕೆಲವು ಭಾರತೀಯ ಸೈನಿಕರನ್ನು ಅಂದು ವಶಕ್ಕೆ ಪಡೆದಿತ್ತು” ಎಂದಿದ್ದಾರೆ.
ಇದನ್ನೂ ಓದಿ: ಅಭಿಮತ: ಈಗ ಪಾಕಿಸ್ಥಾನದ ನಂಬರ್ 1 ಶತ್ರುರಾಷ್ಟ್ರ ಇಸ್ರೇಲ್!
ಜೂನ್ 15ರಂದು ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಚೀನಾ ಪಡೆಯಲ್ಲೂ ಸಾವು ನೋವುಗಳಾಗಿದೆ. ಆದರೆ ಆ ದೇಶದ ಕಡೆಯಿಂದ ಇದುವರೆಗೆ ಸಾವು ನೋವಿನ ನಿಖರ ಅಂಕಿ ಅಂಶ ನೀಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ