ಸಂಧಾನದ ಹಿಂದೆ ಮೋಸದ ಛಾಯೆ; ಲಡಾಖ್ನಲ್ಲಿ ಮಿಲಿಟರಿ ಮೂಲಸೌಕರ್ಯ ಹೆಚ್ಚಿಸುತ್ತಿದೆ ಚೀನ
Team Udayavani, Nov 29, 2021, 6:00 AM IST
ಹೊಸದಿಲ್ಲಿ: ಗಡಿ ವಿವಾದಕ್ಕೆ ಸಂಧಾನವೇ ಪರಿಹಾರ ಎಂದು ಹೇಳುತ್ತಲೇ ಬೆನ್ನಿಗೆ ಚೂರಿಯಿಂದ ಇರಿಯುವ ಕೆಲಸ ಮಾಡುತ್ತಿರುವ ಚೀನವು ಲಡಾಖ್ನ ಪೂರ್ವ ಭಾಗದ ಆಕ್ಸಾಯ್ಚಿನ್ ಭಾಗದಲ್ಲಿ ಮಿಲಿಟರಿ ಬಳಕೆಗಾಗಿ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುತ್ತಿದೆ.
ಅಷ್ಟೇ ಅಲ್ಲ, ಯುದ್ಧದ ಸಮಯದಲ್ಲಿ ಬೇಕಾದ ಎಲ್ಲ ಸಿದ್ಧತೆಗಳನ್ನು ನಡೆಸುತ್ತಿದೆ. ಹೆದ್ದಾರಿಗಳಲ್ಲದೆ ವಿಮಾನ ಇಳಿದಾಣಗಳನ್ನೂ ನಿರ್ಮಾಣ ಮಾಡುತ್ತಿದೆ. ಚೀನವು ಗಾಲ್ವಾನ್ನಲ್ಲಿ ಪೆಟ್ಟುತಿಂದ ಬಳಿಕ ಹಲವು ಬಾರಿ ಪ್ರಚೋದಕ ಕಿಡಿಗೇಡಿತನ ಪ್ರದರ್ಶಿಸಿದೆ. ಹೊಸ ದಾಗಿ ನಡೆಯುತ್ತಿರುವ ನಿರ್ಮಾಣ ಕಾರ್ಯ ಗಳಿಂದಾಗಿ ತನ್ನ ವ್ಯಾಪ್ತಿಯ ಗಾರ್ ಗುನ್ಸಾ, ಹೊಟಾನ್ಗಳಿಂದ ಭಾರತದ ಗಡಿಯತ್ತ ಕ್ಷಿಪ್ರವಾಗಿ ಸೇನೆಯನ್ನು ನುಗ್ಗಿಸಲು ಅನುಕೂಲಕರವಾಗಿರುವ ವಾತಾವರಣವನ್ನು ಚೀನ ಸೃಷ್ಟಿ ಮಾಡಿಕೊಳ್ಳುತ್ತಿದೆ.
ಕ್ಷಿಪಣಿಗಳ ನಿಯೋಜನೆ
ಚೀನವು ತನ್ನ ವಶದಲ್ಲಿ ಇರುವ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಈಗಾಗಲೇ ಕ್ಷಿಪಣಿಗಳನ್ನು ನಿಯೋಜನೆ ಮಾಡಿದೆ. ಇದೇ ಉದ್ದೇಶಕ್ಕಾಗಿ ಹಲವು ಮೂಲಸೌಕರ್ಯಗಳನ್ನು ನಿರ್ಮಾಣ ಮಾಡಿದೆ. ಉದ್ದೇಶಪೂರ್ವಕವಾಗಿ ಡ್ರೋನ್ ಗಸ್ತು ಹೆಚ್ಚಿಸಿದೆ. ಹಿಂದಿನ ಸಿದ್ಧತೆಗಳಿಗೆ ಹೋಲಿಸಿದರೆ ಈ ಬಾರಿಯ ತಯಾರಿ ಹೆಚ್ಚು ಬಿರುಸಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಮುಂಬಯಿ ಟೆಸ್ಟ್ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ
ಭಾರತದಿಂದಲೂ ಸಿದ್ಧತೆ
ಚೀನದ ಯಾವುದೇ ರೀತಿಯ ದುಸ್ಸಾಹಸವನ್ನು ತಡೆಯವುದಕ್ಕಾಗಿ ಭಾರತ ಕೂಡ ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಚೀನದ ಜತೆಗೆ ಹೊಂದಿಕೊಂಡಿರುವ ಗಡಿ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳನ್ನು ಉನ್ನತ ಮಟ್ಟಕ್ಕೇರಿಸುವ ಕಾರ್ಯವನ್ನು ಬಿರುಸುಗೊಳಿಸಿದೆ. ಇದುವರೆಗೆ ಪಾಕಿಸ್ಥಾನವನ್ನು ಕೇಂದ್ರೀಕರಿಸಿದ್ದ ಸೇನಾ ಪಡೆಗಳನ್ನು ಚೀನ ಗಡಿಯತ್ತ ನುಗ್ಗಲು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಫ್ರಾನ್ಸ್ನಿಂದ ಖರೀದಿಸಲಾಗಿರುವ ರಫೇಲ್ ಯುದ್ಧ ವಿಮಾನಗಳ ಪೈಕಿ ಕೆಲವನ್ನು ಚೀನದ ವಿರುದ್ಧ ಅಗತ್ಯಬಿದ್ದರೆ ಬಳಸಿಕೊಳ್ಳುವುದಕ್ಕೆ ಸಿದ್ಧವಾಗಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ