ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಕೇಂದ್ರ ಸರ್ಕಾರದ ಪ್ರಬಲ ಪ್ರತಿಪಾದನೆ

Team Udayavani, Oct 28, 2021, 6:30 AM IST

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ನವದೆಹಲಿ: ಭಾರತದೊಂದಿಗಿನ ಗಡಿ ತಂಟೆಯನ್ನೇ ಕೇಂದ್ರೀಕರಿಸಿ ಲಗುಬಗೆಯಲ್ಲಿ ಚೀನಾ ಸರ್ಕಾರ ಜಾರಿಗೊಳಿಸಿದ ಗಡಿ ಕಾಯ್ದೆಗೆ ಕೇಂದ್ರ ಸರ್ಕಾರ ಆಕ್ಷೇಪ ಮಾಡಿದೆ.

ನವದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗಚಿ, “ಗಡಿಯನ್ನು ರಕ್ಷಿಸಿಕೊಳ್ಳುವ ನೆಪದಲ್ಲಿ ಕಾಯ್ದೆ ಜಾರಿ ಮಾಡುವುದು ಸಮಂಜಸವಲ್ಲ ಮತ್ತು ಇದೊಂದು ಭಾರತಕ್ಕೆ ಆತಂಕ ತರುವ ವಿಚಾರವಾಗಿದೆ’ ಎಂದು ಹೇಳಿದ್ದಾರೆ.

ಹೀಗಾಗಿ, ಭಾರತದ ಜತೆಗೆ ಲಡಾಖ್‌ನ ಪೂರ್ವ ಭಾಗ ಮತ್ತು ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಚೀನಾ ತೆಗೆದಿರುವ ತಕರಾರು ಬಗೆಹರಿಸಲು ಅನಾನುಕೂಲವಾಗಲಿದೆ ಎಂದು ಬಗಚಿ ಹೇಳಿದ್ದಾರೆ. ಜತೆಗೆ ಎರಡೂ ದೇಶಗಳ ನಡುವೆ ಹಾಲಿ ಇರುವ ರಾಜತಾಂತ್ರಿಕ ಬಾಂಧವ್ಯಕ್ಕೂ ಧಕ್ಕೆಯಾಗಲಿದೆ ಎಂದರು. ಕಳೆದ ಶನಿವಾರ ಚೀನಾ ಸರ್ಕಾರ ಹೊಸ ರೀತಿಯ ಗಡಿ ಕಾಯ್ದೆಯನ್ನು ಅಂಗೀಕರಿಸಿದ್ದು ಸರ್ಕಾರದ ಗಮನಕ್ಕೆ ಬಂದಿದೆ ಎಂದಿದ್ದಾರೆ.

ಇದನ್ನೂ ಓದಿ:ಭಿಕ್ಷಾಟನೆ ಜೊತೆಗೆ ದುಷ್ಟಟಗಳಿಗೆ ಒಳಗಾಗಿದ್ದ 15 ಮಂದಿಯನ್ನು ರಕ್ಷಿಸಿದ ನ್ಯಾಯಾಧೀಶರು

ಪೂರ್ವ ಲಡಾಖ್‌ನಲ್ಲಿ 17 ತಿಂಗಳಿಂದ ಭಾರತ ಮತ್ತು ಚೀನಾ ನಡುವೆ ಗಡಿ ತಂಟೆ ಇನ್ನೂ ಪರಿಹಾರವಾಗದೇ ಉಳಿದಿದೆ. ಈ ಬಗ್ಗೆ 20 ಸುತ್ತುಗಳ ಸೇನಾಧಿಕಾರಿಗಳ ಮಾತುಕತೆ ನಡೆದರೂ, ಯಾವುದೇ ರೀತಿಯಲ್ಲಿ ಸುಸೂತ್ರ ಫ‌ಲಿತಾಂಶ ಲಭ್ಯವಾಗಿಲ್ಲ. ಅದಕ್ಕೆ ಪೂರಕವಾಗಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರರು, ಚೀನಾ ಸರ್ಕಾರ ಮುಂದಿನ ವರ್ಷದ ಜನವರಿ 1ರಿಂದ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಗಡಿ ಕಾಯ್ದೆ ಸಮರ್ಥನೀಯವಲ್ಲ ಎಂದಿದ್ದಾರೆ. 1963ರಲ್ಲಿ ಚೀನಾ ಮತ್ತು ಪಾಕಿಸ್ತಾನ ಮಾಡಿಕೊಂಡ ಗಡಿ ಒಪ್ಪಂದವನ್ನು ಕೇಂದ್ರ ಸರ್ಕಾರ ಇದುವರೆಗೆ ಪರಿಗಣಿಸಿಲ್ಲ. ಎರಡೂ ದೇಶಗಳು ಭಾರತದ ನೆಲವನ್ನು ಅತಿಕ್ರಮಿಸಿವೆ ಎಂಬ ನಿಲುವಿಗೆ ಈಗಲೂ ಬದ್ಧವಾಗಿದೆ ಎಂದು ವಕ್ತಾರರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎರಡೂ ದೇಶಗಳ ನಡುವೆ ಅ.10ರಂದು ಮಾತುಕತೆ ನಡೆದಿತ್ತು. ಅದರಲ್ಲಿ ಯಾವುದೇ ಧನಾತ್ಮಕ ಫ‌ಲಿತಾಂಶ ವ್ಯಕ್ತವಾಗಿಲ್ಲ. ಭಾರತ ಮತ್ತು ಚೀನಾ 50ರಿಂದ 60 ಸಾವಿರ ಯೋಧರನ್ನು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಿಯೋಜಿಸಿವೆ.

ಹೊಸ ಗಡಿ ನೀತಿಯಲ್ಲಿ ಏನಿದೆ?
ಚೀನಾ ಅ.23ರಂದು ಅಂಗೀಕರಿಸಿದ ಗಡಿ ಕಾಯ್ದೆಯಲ್ಲಿ ಯುದ್ಧ ಸಹಿತ ಯಾವುದೇ ರೀತಿಯ ಬೆಲೆ ತೆತ್ತಾದರೂ, ದೇಶದ ಸಾರ್ವಭೌಮತೆ, ಏಕತೆ, ಗಡಿಯ ರಕ್ಷಣೆ ಮಾಡುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ತೀರ್ಮಾನ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.