G20 ಪ್ರಧಾನಿ ಮೋದಿ ಎಚ್ಚರಿಕೆ ಭೀತಿಯಿಂದ ಚೀನ ಅಧ್ಯಕ್ಷ ಜಿನ್‌ಪಿಂಗ್‌ ಗೈರು?

ಜಿ20: ಭಾರತದ ಕಠಿಣ ನಿಲುವಿನಿಂದ ಚೀನಾ ಅಧ್ಯಕ್ಷರಿಗೆ ಹೆದರಿಕೆ

Team Udayavani, Sep 2, 2023, 6:50 AM IST

G20 ಪ್ರಧಾನಿ ಮೋದಿ ಎಚ್ಚರಿಕೆ ಭೀತಿಯಿಂದ ಚೀನ ಅಧ್ಯಕ್ಷ ಜಿನ್‌ಪಿಂಗ್‌ ಗೈರು?

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಚೀನ ಅಧ್ಯಕ್ಷ ಕ್ಷಿ ಜಿನ್‌ಪಿಂಗ್‌ ಗೈರಾಗುವ ಸಾಧ್ಯತೆಯೇ ಹೆಚ್ಚಿದೆ.

ಬ್ರಿಕ್ಸ್‌ ಸಮ್ಮೇಳನದಲ್ಲಿ ಭಾರತ-ಚೀನಾ ಗಡಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ, ಕ್ಷಿ ಅವರಿಗೆ ನೇರಾನೇರ ತಾಕೀತು ಮಾಡಿದ್ದೇ ಇದಕ್ಕೆ ಪ್ರಮುಖ ಕಾರಣವೆಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಗಾಲ್ವಾನ್‌ ಸಂಘರ್ಷದ ಬಳಿಕ ಭಾರತ-ಚೀನಾ ನಡುವಿನ ಸಂಬಂಧ ಹದಗೆಟ್ಟಿದ್ದು, ಗಡಿ ವಿಚಾರವಾಗಿ ಮನಸ್ತಾಪವೂ ಇದೆ. ಚೀನಾ ಪದೇಪದೆ ಕುತಂತ್ರ ರೂಪಿಸಿ ಭಾರತವನ್ನು ಕೆಣಕುತ್ತಿರುವುದು ಕೂಡ ಹೊಸತೇನಲ್ಲ. ಈ ನಡುವೆ ಕಳೆದ ತಿಂಗಳಷ್ಟೇ ದಕ್ಷಣ ಆಫ್ರಿಕಾದಲ್ಲಿ ನಡೆದಿದ್ದ ಬ್ರಿಕ್ಸ್‌ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಹಾಗೂ ಕ್ಷಿ ಜಿನ್‌ಪಿಂಗ್‌ ಮುಖಾಮುಖಿಯಾಗಿದ್ದರು. ಈ ವೇಳೆ ಗಡಿ ವಿವಾದಗಳ ಕುರಿತು ಮೋದಿ ಕಠಿಣವಾಗಿಯೇ ಧ್ವನಿ ಎತ್ತಿದ್ದರು.

ಈಗ ಜಿ20 ರಾಷ್ಟ್ರಗಳು ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲೇಬೇಕಿದ್ದು, ಕ್ಷಿ ಆಗಮಿಸಿದರೆ ಅವರೂ ಕೂಡ ಭಾಗಿಯಾಗಬೇಕಿರುತ್ತದೆ. ಈ ವೇಳೆ ವ್ಯಾಪಾರ-ವ್ಯವಹಾರ-ಸಹಕಾರಗಳ ಪ್ರಸ್ತಾಪಕ್ಕೂ ಮುಂಚೆ ಚೀನಾ ಗಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಂಡರೆ ಮಾತ್ರ ಭಾರತದ ಜತೆಗೆ ದ್ವಿಪಕ್ಷೀಯ ಸಭೆ ಮುಂದುವರಿಸಲು ಸಾಧ್ಯವೆಂದು ಭಾರತ ಈಗಾಗಲೇ ಸ್ಪಷ್ಟ ಪಡಿಸಿದೆ. ಈ ಹಿನ್ನೆಲೆಯಲ್ಲಿ ಮಾತುಕತೆಯಿಂದ ನುಣುಚಿಕೊಳ್ಳಲು ಶೃಂಗದಿಂದಲೇ ಕ್ಷಿ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಸೇಫ್ಹೌಸ್‌, ಹೆಲಿಪ್ಯಾಡ್‌, ಕಮಾಂಡೋಸ್‌: ಭಾರೀ ಭದ್ರತೆ
ಜಿ20 ರಾಷ್ಟ್ರಗಳ ಮುಖ್ಯಸ್ಥರ ರಕ್ಷಣೆಗೆ ಭಾರತೀಯ ಭದ್ರತಾಪಡೆಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ರೀತಿಯ ಕಠಿಣ ಸವಾಲುಗಳನ್ನು ಎದುರಿಸಲು ಸಜ್ಜುಗೊಂಡಿವೆ. ಅಹಿತಕರ ಘಟನೆಗಳು ವರದಿಯಾದರೆ ತಕ್ಷಣವೇ ಅತಿಥಿಗಳನ್ನು ಪಾರುಮಾಡಲು ಹೆಲಿಪ್ಯಾಡ್‌ಗಳನ್ನು ಗುರುತಿಸಲಾಗಿದೆ. ಅಲ್ಲದೇ, ಅತಿಥಿಗಳು ಉಳಿದಿರುವ ಹೋಟೆಲ್‌ಗ‌ಳ ಸಮೀಪದಲ್ಲೇ ಅವರನ್ನು ಸುರಕ್ಷಿತವಾಗಿ ಇರಿಸಬಲ್ಲ ರಹಸ್ಯ ಮನೆಗಳನ್ನೂ ಸ್ಥಾಪಿಸಲಾಗಿದ್ದು, ರಾಸಾಯನಿಕ, ಜೈವಿಕ, ವಿಕಿರಣ ಯಾವುದೇ ದಾಳಿಯನ್ನೂ ಸಮರ್ಥವಾಗಿ ಎದುರಿಸಬಲ್ಲ ಪಡೆ ಮತ್ತು ಕಮಾಂಡೊಗಳನ್ನೂ ನಿಯೋಜಿಸಲಾಗಿದೆ.

ಲೆಫ್ಟ್ ಸ್ಟೇರಿಂಗ್‌ ಕಾರು, 450 ಚಾಲಕರು
ವಿದೇಶಿ ಅತಿಥಿಗಳನ್ನು ಸ್ವಾಗತಿಸಲು ಕೇಂದ್ರ ಸರ್ಕಾರ ಬಿಎಂಡಬ್ಲೂé, ಆಡಿ ಸೇರಿದಂತೆ ಹಲವು ಬುಲೆಟ್‌ ರೆಸಿಸ್ಟೆಂಟ್‌ ಹಾಗೂ ಲೆಫ್ಟ್ ಸ್ಟೇರಿಂಗ್‌ ಕಾರುಗಳನ್ನು ಬಾಡಿಗೆ/ಖರೀದಿ ಪಡೆದಿದೆ. ಅಲ್ಲದೇ, ಅವುಗಳನ್ನು ಚಲಾಯಿಸಲು ವಿಶೇಷ ತರಬೇತಿ ಪಡೆದಿರುವ ಸಿಆರ್‌ಪಿಎಫ್ನ ವಿಶೇಷ ಭದ್ರತಾ ವಿಭಾಗದ 450 ಚಾಲಕರನ್ನು ನಿಯೋಜಿಸಿದೆ.

ನೀಟ್‌ ಸೂಪರ್‌ ಸ್ಪೆಷಾಲಿಟಿ ಪರೀಕ್ಷೆ ಮುಂದೂಡಿಕೆ
ವೈದ್ಯಕೀಯ ವಿಜ್ಞಾನ ರಾಷ್ಟ್ರೀಯ ಪರೀಕ್ಷಾ ಮಂಡಳಿ, ನವದೆಹಲಿಯು ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ನೀಟ್‌ ಸೂಪರ್‌ ಸ್ಪೆಷಾಲಿಟಿ (ಎಸ್‌ಎಸ್‌) 2023 ಪರೀಕ್ಷೆಯನ್ನು ಮುಂದೂಡುವುದಾಗಿ ತಿಳಿಸಿದೆ. ಸೆ.9 ಮತ್ತು 10ರಂದು ಪರೀಕ್ಷೆ ನಡೆಸಲು ಯೋಜಿಸಲಾಗಿತ್ತು. ಅದೇ ದಿನ ಜಿ20 ಸಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗುತ್ತಿದ್ದು, ಮುಂದಿನ ದಿನಾಂಕಗಳನ್ನು ಶೀಘ್ರವೇ ತಿಳಿಸುವುದಾಗಿಯೂ ಘೋಷಿಸಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.