ಮೇ 19ಕ್ಕೆ ಚಿಂಚೋಳಿ ಉಪಚುನಾವಣೆ
Team Udayavani, Apr 17, 2019, 6:00 AM IST
ನವದೆಹಲಿ: ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 19 ರಂದು ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಈ ಬಗ್ಗೆ ಘೋಷಣೆ ಮಾಡಿದೆ. ಏಪ್ರಿಲ್ 29 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಮೇ 2ರ ವರೆಗೆ ಕಾಲಾವಕಾಶ ನೀಡಲಾಗಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನವಾದ ಮೇ 23 ರಂದೇ ಚಿಂಚೋಳಿಯ ಫಲಿತಾಂಶವೂ ಪ್ರಕಟವಾಗಲಿದೆ. ಅಂದಹಾಗೆ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯೂ ಮೇ 19 ರಂದೇ ನಡೆಯಲಿದ್ದು, ಮೇ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.