ಡಿನ್ನರ್ಗೆ ಹೋದರೂ ಕ್ಯಾತೆ; ರಾಜತಾಂತ್ರಿಕ ನಡೆ ಉಲ್ಲಂಘಿ ಸಿದ ಕಪಟಿ ಚೀನ
ದಿಲ್ಲಿಯಲ್ಲಿರುವ ಚೀನೀ ರಾಯಭಾರ ಕಚೇರಿಯ ಕಿರಿಯ ಅಧಿಕಾರಿ ಪ್ರಶ್ನೆ
Team Udayavani, Jan 1, 2022, 6:30 AM IST
ಹೊಸದಿಲ್ಲಿ: ಭಾರತದ ಜತೆಗೆ ಚೀನ ಹೊಸತೊಂದು ಕ್ಯಾತೆ ತೆಗೆದಿದೆ. ಟೆಬೆಟಿಯನ್ ಸಂಸದರು ಆಯೋಜಿಸಿದ್ದ ಔತಣಕೂಟಕ್ಕೆ ದೇಶದ ಸಂಸದರು ತೆರಳಿದ್ದು, ಚೀನ ಸಿಟ್ಟಾಗಿದೆ.
ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಔತಣ ಕೂಟದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಬಿಜೆಪಿ ನಾಯಕಿ ಮನೇಕಾ ಗಾಂಧಿ, ಕಾಂಗ್ರೆಸ್ ಸಂಸದರಾದ ಜೈರಾಮ್ ರಮೇಶ್, ಮನೀಷ್ ತಿವಾರಿ, ಬಿಜೆಡಿಯ ಸುಜೀತ್ ಕುಮಾರ್ ಭಾಗವಹಿಸಿದ್ದರು.
ಅದಕ್ಕೆ ಹೊಸದಿಲ್ಲಿಯಲ್ಲಿರುವ ಚೀನ ರಾಯಭಾರ ಕಚೇರಿಯ ಕಿರಿಯ ಅಧಿಕಾರಿ ಆರೂ ಮಂದಿ ಸಂಸದರಿಗೆ ಪತ್ರ ಬರೆದು ಆಕ್ಷೇಪಿಸಿದ್ದಾರೆ.
ಸಂಸದರ ಭೇಟಿಯಿಂದಾಗಿ ಭಾರತ ಮತ್ತು ಚೀನ ನಡುವಿನ ರಾಜತಾಂತ್ರಿಕ ಬಾಂಧವ್ಯಕ್ಕೆ ಧಕ್ಕೆ ಬರಲಿದೆ ಎಂದಿದ್ದಾರೆ. ಇಂಥ ಪತ್ರ ಬರೆ ಯುವ ಮೂಲಕ ಚೀನ ರಾಜತಾಂತ್ರಿಕ ನಡೆಯನ್ನೇ ಉಲ್ಲಂ ಸಿದೆ. ಈ ಬಗ್ಗೆ “ದ ಇಂಡಿಯನ್ ಎಕ್ಸ್ಪ್ರೆಸ್’ ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ “ಇಂಡೋ- ಟೆಬೆಟಿ ಯನ್ ಸಂಸದೀಯ ವೇದಿಕೆಯ ಸದಸ್ಯ ನಾ ಗಿದ್ದೇನೆ. ನಾನು ಔತಣ ಕೂಟದಲ್ಲಿ ಭಾಗವಹಿಸಿದ್ದೆ’ ಎಂದರು. ಕಾಂಗ್ರೆಸ್ನ ಜೈರಾಮ್ ರಮೇಶ್ ಕೂಡ ಪತ್ರ ಬಂದಿರುವುದನ್ನು ಖಚಿತಪಡಿಸಿದ್ದಾರೆ.
ಇದನ್ನೂ ಓದಿ:ಪ್ರವಾಹ ಪರಿಹಾರ ತಕ್ಷಣ ಬಿಡುಗಡೆ: ಕಾರಜೋಳ
ಕೇಂದ್ರ ಟೀಕೆ: ಅರುಣಾಚಲ ಪ್ರದೇಶದ ಕೆಲವು ಪ್ರದೇಶಗಳ ಹೆಸರು ಬದಲಾಯಿಸಿದ್ದಕ್ಕೆ ವಿದೇಶಾಂಗ ಸಚಿವಾಲಯ ಆಕ್ಷೇಪಿಸಿದೆ. ಅರುಣಾಚಲ ಪ್ರದೇಶ ಯಾವತ್ತೂ ಭಾರತದ್ದೇ. ಹೆಸರು ಬದಲಿಸುವುದರಿಂದ ಯಥಾಸ್ಥಿತಿ ಬದಲಾ ಗುವುದಿಲ್ಲ ಎಂದು ವಕ್ತಾರ ಅರಿಂದಂ ಬಗಚಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು