ದಲೈಲಾಮಾ ವಿರುದ್ಧ ಬೇಹುಗಾರಿಕೆ; ತೆರಿಗೆ ಅಧಿಕಾರಿಗಳ ಬಲೆಗೆ ಚೀನಾ ವ್ಯಕ್ತಿ
ಭಾರತದಲ್ಲಿ ವಾಸವಿದ್ದ ಹಲವು ಟಿಬೆಟಿಯನ್ ಬೌದ್ಧರಿಗೆ ಈತ ಲಂಚ ನೀಡಿದ್ದ.
Team Udayavani, Aug 17, 2020, 9:11 AM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ದಂಧೆ ಆರೋಪದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿರುವ ಚೀನಾದ ವ್ಯಕ್ತಿ, ಟಿಬೆಟಿಯನ್ ಬೌದ್ಧಗುರು ದಲಾಯಿ ಲಾಮಾ ವಿರುದ್ಧ ಬೇಹುಗಾರಿಕೆ ನಡೆಸುತ್ತಿದ್ದ ಎಂದು ತಡವಾಗಿ ತಿಳಿದುಬಂದಿದೆ.
ದೆಹಲಿಯಲ್ಲಿ ಇತ್ತೀಚೆಗಷ್ಟೇ ಚೀನೀ ಹವಾಲಾ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಚಾರ್ಲಿ ಪೆಂಗ್ ಎಂಬ ಹೆಸರಿನಿಂದ ಕಾರ್ಯನಿರ್ವಹಿಸುತ್ತಿದ್ದ ಲ್ಯೂಸಾಂಗ್ ಎಂಬಾತನನ್ನೂ ಈ ವೇಳೆ ಬಂಧಿಸಿ, ವಿಚಾರಣೆಗೊಳಪಡಿಸಲಾಗಿತ್ತು.
ಭಾರತದಲ್ಲಿ ವಾಸವಿದ್ದ ಹಲವು ಟಿಬೆಟಿಯನ್ ಬೌದ್ಧರಿಗೆ ಈತ ಲಂಚ ನೀಡಿದ್ದ. ಅಲ್ಲದೆ, ದೆಹಲಿಯ ಮಜುಕಾಟೀಲಾ ಬಳಿ ಹಲವರಿಗೆ 2- 3 ಲಕ್ಷ ರೂ. ಅಕ್ರಮ ಹಣ ನೀಡಿದ್ದ. ಈ ಮೂಲಕ ದಲಾಯಿಲಾಮಾ ಮತ್ತು ಸಹಚರರ ವಿಚಾರಗಳನ್ನು ಕಲೆಹಾಕು ತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಗೂಢಚಾರ ಆರೋಪ: 2014ರಲ್ಲಿ ಭಾರತವನ್ನು ನೇಪಾಳ ಮೂಲಕ ಅಕ್ರಮವಾಗಿ ಪ್ರವೇಶಿಸಿದ್ದ, ಲ್ಯೂ ಸಾಂಗ್ ಮಿಝೋರಾಂನ ಮಹಿಳೆಯನ್ನು ವಿವಾಹವಾಗಿದ್ದ. ನಕಲಿ ಆಧಾರ್ ಕಾರ್ಡ್, ನಕಲಿ ಪಾಸ್ಪೋರ್ಟ್ ಪಡೆದಿದ್ದ. 2018ರಲ್ಲಿ ಗೂಢಚಾರ ನಡೆಸಿದ ಆರೋಪ ಕೂಡ ಈತ ಎದುರಿಸಿದ್ದ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
40 ಬ್ಯಾಂಕ್ ಖಾತೆ: ವೀ ಚ್ಯಾಟ್ ಮೂಲಕ ಸಂವಹನ ನಡೆಸುತ್ತಿದ್ದ ಈತ ಸಿಎ ಮೂಲಕ 40ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಕೊರಿಯರ್ ಮೂಲಕ ಅಕ್ರಮ ಹಣ ಕಳುಹಿಸುತ್ತಿದ್ದ. ಈತನಿಗೆ ನೆರವಾದ ದೆಹಲಿ ಮೂಲದ ಚಾರ್ಟೆಡ್ ಅಕೌಂಟೆಂಟ್ನನ್ನೂ
ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ