ಭಾರತೀಯ ಸೇನೆ ಪ್ರತೀಕಾರಕ್ಕೆ ಎಷ್ಟು ಮಂದಿ ಚೀನಾ ಸೈನಿಕರು ಸಾವನ್ನಪ್ಪಿದ್ದಾರೆ ಗೊತ್ತಾ?
ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಸಂಘರ್ಷ ಸ್ಥಿತಿಯನ್ನು ತಿಳಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆಯಲ್ಲಿ ತಿಳಿಸಿದೆ.
Team Udayavani, Jun 16, 2020, 4:18 PM IST
ಬೀಜಿಂಗ್/ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದ ಎಲ್ ಎಸಿ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಭಾರತೀಯ ಸೈನಿಕರು ಹುತಾತ್ಮರಾಗಿರುವ ವರದಿ ಬಂದಿದೆ. ಏತನ್ಮಧ್ಯೆ ಭಾರತದ ಸೈನಿಕರ ದಿಟ್ಟ ಪ್ರತ್ಯುತ್ತರಕ್ಕೆ ಚೀನಾ ಸೈನಿಕರು ಕೂಡಾ ಸಾವನ್ನಪ್ಪಿರುವುದಾಗಿ ಚೀನಾದ ಗ್ಲೋಬಲ್ ಟೈಮ್ಸ್ ದೈನಿಕ ವರದಿ ಮಾಡಿದೆ.
ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಸಂಘರ್ಷ ಸ್ಥಿತಿಯನ್ನು ತಿಳಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ ನಿನ್ನೆ ನಡೆದ ಸಂಘರ್ಷದಲ್ಲಿ ಉಭಯ ದೇಶಗಳ ಸೈನಿಕರು ಸಾವನ್ನಪ್ಪಿರುವುದಾಗಿ ತಿಳಿಸಿದೆ. ಒಬ್ಬರು ಅಧಿಕಾರಿ ಹಾಗೂ ಇಬ್ಬರು ಸೈನಿಕರು ಸೇರಿ ಮೂವರು ಭಾರತೀಯರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಚೀನಾ ಸೈನಿಕರು ಕೂಡಾ ಸಾವನ್ನಪ್ಪಿರುವುದಾಗಿ ತಿಳಿಸಿದೆ. ಉದ್ವಿಗ್ನ ಸ್ಥಿತಿ ಬಗೆಹರಿಸಲು ಪ್ರಸ್ತುತ ಸೇನೆಯ ಹಿರಿಯ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತದ ಪ್ರತಿದಾಳಿಗೆ ಐವರು ಚೀನಾ ಸೈನಿಕರು ಬಲಿ:
ಭಾರತೀಯ ಸೇನೆಯ ಪ್ರತಿದಾಳಿಗೆ ಲಡಾಖ್ ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ಐವರು ಸೈನಿಕರು ಸಾವಿಗೀಡಾಗಿದ್ದು, 11 ಸೈನಿಕರು ಗಾಯಗೊಂಡಿರುವುದಾಗಿ ಗ್ಲೋಬಲ್ ಟೈಮ್ಸ್ ವರದಿಗಾರ ವಾಂಗ್ ವೆನ್ ವೆನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನನಗೆ ತಿಳಿದು ಬಂದಿರುವ ಮಾಹಿತಿ ಪ್ರಕಾರ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಕಾಳಗದಲ್ಲಿ ಚೀನಾ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಗ್ಲೋಬಲ್ ಟೈಮ್ಸ್ ನ ಹೂ ಕ್ಸಿಜಿನ್ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ವಿವರ ಬಿಟ್ಟುಕೊಟ್ಟಿಲ್ಲ.
ಚೀನಾ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ನೀಡಿದ್ದು, ಭಾರತೀಯ ಸೈನಿಕರು ಗಡಿ ದಾಟಿ ಬಂದು ಚೀನಾ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ ಎಂದು ಎಎಫ್ ಪಿ ವರದಿ ಮಾಡಿದೆ. ಭಾರತ ದಿಢೀರ್ ಆಗಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಾರದು ಅಥವಾ ಪ್ರಚೋದನೆಯಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ ಎಂದು ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್