ಗಡಿ ಕ್ಯಾತೆ: ಕೆಲವು ದಿನಗಳ ಬಳಿಕ ಬಂಧಿತ ಚೀನಾ ಸೈನಿಕನ ಬಿಡುಗಡೆ ಸಾಧ್ಯತೆ: ವರದಿ
ಚೀನೀ ಸೈನಿಕನಿಗೆ ವೈದ್ಯಕೀಯ ಸಹಾಯವಾದ ಆಮ್ಲಜನಕ, ಆಹಾರ, ಬೆಚ್ಚಗಿಡುವಂಥ ಬಟ್ಟೆ ನೀಡಲಾಗಿದೆ.
Team Udayavani, Oct 20, 2020, 5:17 PM IST
ನವದೆಹಲಿ: ವಾಸ್ತವಿಕ ನಿಯಂತ್ರಣ ರೇಖೆ ದಾಟಿ ಬಂದಿದ್ದ ಚೀನಾದ ಸೈನಿಕನನ್ನು ಭಾರತೀಯ ಸೇನಾ ಪಡೆ ಪೂರ್ವ ಲಡಾಖ್ ಪ್ರದೇಶದಲ್ಲಿ ಬಂಧಿಸಿದ್ದು ಇನ್ನು ಕೆಲವು ದಿನಗಳ ಕಾಲ ಬಿಡುಗಡೆ ಮಾಡುವುದಿಲ್ಲ ಎಂದು ಮೂಲಗಳು ಮಂಗಳವಾರ (ಅಕ್ಟೋಬರ್ 20, 2020) ತಿಳಿಸಿದೆ.
ಸೋಮವಾರ (ಅ.19, 2020) ಬೆಳಗ್ಗೆ ಭಾರತೀಯ ಸೇನೆ ಚೀನಾದ ಕಾರ್ಪೊರಲ್ ವಾಂಗ್ ಯಾ ಲಾಂಗ್ ನನ್ನು ಲಡಾಖ್ ನ ಡೆಮ್ಟುಕ್ ನಲ್ಲಿ ಬಂಧಿಸಿತ್ತು. ಬಂಧಿತ ಚೀನಾ ಸೈನಿಕನ ವಿಚಾರಣೆ ಪೂರ್ಣಗೊಂಡ ಬಳಿಕ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ ಎ)ಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದೆ.
ಸದ್ಯ ಇರುವ ಔಪಚಾರಿಕ ಪ್ರಕ್ರಿಯೆಗಳು ಮುಗಿದ ನಂತರ, ಆತನನ್ನು ಚೀನಾದ ಸೇನೆಗೆ ವಾಪಸ್ ಮಾಡಲಾಗುತ್ತದೆ. ಚುಶುಲ್ ಮೋಲ್ಡೋ ಮೀಟಿಂಗ್ ಸ್ಥಳದಲ್ಲಿ ಚೀನಾಕ್ಕೆ ಹಸ್ತಾಂತರಿಸಲಾಗುತ್ತದೆ.
ಇದನ್ನೂ ಓದಿ:ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ
ಉತ್ತಮ ಉಪಚಾರ: ಗಡಿ ದಾಟಿದ್ದರೂ, ಚೀನೀ ಸೈನಿಕನಿಗೆ ವೈದ್ಯಕೀಯ ಸಹಾಯವಾದ ಆಮ್ಲಜನಕ, ಆಹಾರ, ಬೆಚ್ಚಗಿಡುವಂಥ ಬಟ್ಟೆ ನೀಡಲಾಗಿದೆ. ಲಡಾಖ್ನ ವಾತಾವರಣದಲ್ಲಿ ಲಾಂಗ್ನನ್ನು ಬಂಧಿಸಲಾಗಿರುವುದರಿಂದ ಈ ಎಲ್ಲಾ ಸೌಲಭ್ಯ ನೀಡಲಾಗಿದೆ ಎಂದು ಸೇನೆ ಹೇಳಿದೆ.
ಕಳೆದ ಮೇ ತಿಂಗಳಿನಿಂದ ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ ರೇಖೆಯ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಜೂನ್ ನಲ್ಲಿ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಪ್ಯಾಂಗಾಂಗ್ ತ್ಸೋ ಪ್ರದೇಶದಲ್ಲಿ ಕಳೆದ ತಿಂಗಳು ಉಭಯ ಸೇನೆ ಗಾಳಿಯಲ್ಲಿ ಗುಂಡಿನ ದಾಳಿ ನಡೆಸಿದ್ದ ಘಟನೆಯೂ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ