ಗಡಿಯಲ್ಲಿ ಚೀನಾ ಕ್ಯಾತೆ: ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶ ಭಾರತೀಯ ಸೇನೆಯ ವಶಕ್ಕೆ?
ಭಾರತೀಯ ಸೇನೆಯ ಉನ್ನತ ಮೂಲಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ
Team Udayavani, Sep 2, 2020, 6:16 PM IST
ನವದೆಹಲಿ/ಜಮ್ಮು-ಕಾಶ್ಮೀರ: ಲಡಾಖ್ ನ ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ಭಾರತದ ಗಡಿಯೊಳಗಿನ ಪ್ರದೇಶವನ್ನು ವಶಕ್ಕೆ ತೆಗೆದುಕೊಳ್ಳಲು ರಾತ್ರಿ ದುಸ್ಸಾಹಸಕ್ಕೆ ಕೈಹಾಕಿ ಚೀನಾ ವಿಫಲವಾಗಿತ್ತು. ಅಲ್ಲದೇ ಸೋಮವಾರವೂ ಕೂಡಾ ಚೀನಾ ಉದ್ಧಟತನ ತೋರಿ ಪ್ರಚೋದನಕಾರಿ ವರ್ತನೆ ತೋರಿಸಿತ್ತು. ಏತನ್ಮಧ್ಯೆ ಭಾರತೀಯ ಪ್ಯಾಂಗಾಂಗ್ ತ್ಸೋ ಪ್ರದೇಶದ ಫಿಂಗರ್ 4 ಅನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ಸೇನೆ ಅತೀ ಎತ್ತರದ ಫಿಂಗರ್ 4 ಪ್ರದೇಶಕ್ಕೆ ತಲುಪುವಲ್ಲಿ ಒಂದು ತಂಡ ಯಶಸ್ವಿಯಾಗಿದೆ ಎಂದು ದ ಪ್ರಿಂಟ್ ವರದಿ ಮಾಡಿದೆ. ಪ್ಯಾಂಗಾಂಗ್ ತ್ಸೋನ ಉತ್ತರ ನದಿ ದಂಡೆ ಪ್ರದೇಶದ ಎದುರು ಭಾಗದಲ್ಲಿ ಪಹರೆ ಕಾಯಲಾಗುತ್ತಿದೆ ಎಂದು ತಿಳಿಸಿದೆ.
ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶವನ್ನು ಚೀನಾ ಪಡೆ ಅಚ್ಚರಿಗೊಳ್ಳುವಂತೆ ಭಾರತೀಯ ಸೇನೆ ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಟೈಮ್ಸ್ ನೌ ವರದಿ ಪ್ರಕಾರ, ಭಾರತೀಯ ಸೇನೆಯ ಉನ್ನತ ಮೂಲಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ ಎಂದು ಹೇಳಿದೆ.
ಸದ್ಯ ಲಡಾಖ್ ನ ಪ್ಯಾಂಗಾಂಗ್ ಪ್ರದೇಶದಲ್ಲಿ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಪ್ಯಾಂಗಾಂಗ್ ತ್ಸೋ ಪ್ರದೇಶದಲ್ಲಿ ಭಾರತೀಯ ಸೇನೆ ಎಲ್ಲ ರೀತಿಯಿಂದಲೂ ಸರ್ವ ಸನ್ನದ್ಧವಾಗಿದೆ. ಅಲ್ಲದೇ ಉಭಯ ದೇಶಗಳ ಕಮಾಂಡರ್ ಮಟ್ಟದ ಮಾತುಕತೆ ಮುಂದುವರಿದಿದೆ ಎಂದು ತಿಳಿಸಿದೆ.
ಫಿಂಗರ್ 4 ಪ್ರದೇಶದಲ್ಲಿ ಚೀನಾ ಸೈನಿಕರು ಬೀಡು ಬಿಟ್ಟಿದ್ದು, ಅವರು ಒಳ ನುಸುಳದಂತೆ ತಡೆಯಲು ಭಾರತೀಯ ಸೇನೆ ಕೂಡಾ ಸಜ್ಜಾಗಿ ನಿಂತಿದೆ ಎಂದು ಮೂಲಗಳು ಹೇಳಿವೆ.
ವಿವಾದಿತ ಸ್ಥಳ ಭಾರತದಲ್ಲಿ ನಿಯಂತ್ರಣದಲ್ಲಿ:
ಪ್ಯಾಂಗಾಂಗ್ ಸರೋವರದ ದಂಡೆ ಪ್ರದೇಶವನ್ನು ಚೀನಾ ಸೈನಿಕರು ವಶಪಡಿಸಿಕೊಳ್ಳಲು ಯತ್ನಿಸಿದ್ದ ಪ್ರದೇಶ ಭಾರತೀಯ ಸೇನೆಯ ವಶದಲ್ಲಿದೆ. ಈ ಪ್ರದೇಶದ ಎತ್ತರದ ಸ್ಥಳಗಳ ಮೇಲೆ ಭಾರತ ತನ್ನ ಹಿಡಿಯ ಸಾಧಿಸಿದ್ದು, ಚೀನಾ ಯಾವುದೇ ರೀತಿಯ ಆಕ್ರಮಣಕ್ಕೆ ಮುಂದಾದರೂ ಕೂಡಾ ಅದನ್ನು ವಿಫಲಗೊಳಿಸಲಾಗುವುದು ಎಂದು ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ