ನಷ್ಟದಲ್ಲಿ ಏರ್ ಇಂಡಿಯಾ : ನಮ್ಮ ಬಳಿ ಎರಡೇ ಆಯ್ಕೆ ಇವೆ ಎಂದ ಸಚಿವ ಪುರಿ
Team Udayavani, Mar 27, 2021, 6:33 PM IST
ನವದೆಹಲಿ : ನಷ್ಟದಲ್ಲಿರುವ ಏರ್ ಇಂಡಿಯಾ ಮೇಲೆತ್ತಲು ನಾವೇ ಸಂಪೂರ್ಣ ಹೂಡಿಕೆ ಮಾಡುವುದು ಅಥವಾ ಈ ಕಂಪನಿಯ ಬಾಗಿಲು ಮುಚ್ಚುವ ಆಯ್ಕೇಗಳು ಮಾತ್ರ ನಮ್ಮ ಮುಂದೆ ಇವೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.
ಶನಿವಾರ ಮಾಧ್ಯಮಗಳ ಎದುರು ಈ ವಿಷಯ ಹಂಚಿಕೊಂಡಿರುವ ಅವರು, ಏರ್ ಇಂಡಿಯಾದಲ್ಲಿ ಶೇ. 100 ಹೂಡಿಕೆ ಮಾಡಲು ನಾವು ನಿರ್ಧರಿಸಿದ್ದೇವೆ. ಏರ್ ಇಂಡಿಯಾದ ಒಟ್ಟು ಸಾಲ 60,000 ಕೋಟಿ ರೂ. ಇದೆ ಎಂದು ಹೇಳಿದರು.
ಏರ್ ಇಂಡಿಯಾ ಹೂಡಿಕೆಗಾಗಿ ಸರ್ಕಾರವು ಸೂಕ್ತ ಸಮಯ ಎದುರು ನೋಡುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಹರಾಜು ಪ್ರಕ್ರಿಯೆಗೆ ಖಾಸಗಿ ಕಂಪನಿಗಳನ್ನು ಆಹ್ವಾನಿಸಲಾಗುವುದು. “ಕಳೆದ ಸಭೆಯಲ್ಲಿ ಹರಾಜುದಾರರ ಶಾರ್ಟ್ಲಿಸ್ಟ್ ಮಾಡಲಾಗಿದೆ. (ಏರ್ ಇಂಡಿಯಾ ಹೂಡಿಕೆಗಾಗಿ) 64 ದಿನಗಳಲ್ಲಿ ಹರಾಜುದಾರರು ಬರಬೇಕು ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದರು.
ನಷ್ಟದಲ್ಲಿದ್ದ ಏರ್ ಇಂಡಿಯಾಗೆ ಪುನಶ್ಚೇತನ ನೀಡಲು 2018ರಲ್ಲಿ 76% ಪಾಲುದಾರಿಕೆಗೆ ಸರ್ಕಾರ ಮುಂದಾಗಿತ್ತು. ಆದರೆ, ಈ ವೇಳೆ ಯಾವೊಬ್ಬ ಬಿಡ್ಡರ್ ಕೂಡ ಮುಂದೆ ಬರಲಿಲ್ಲ. ಸದ್ಯ ಕೇಂದ್ರ ಸರ್ಕಾರವು ಏರ್ ಇಂಡಿಯಾದ ಶೇ 100 ರಷ್ಟು ಷೇರುಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ