ಉನ್ನತ ಸಮಿತಿಯ ತನಿಖೆ


Team Udayavani, Dec 10, 2021, 7:30 AM IST

ಉನ್ನತ ಸಮಿತಿಯ ತನಿಖೆ

ಹೊಸದಿಲ್ಲಿ/ಕೂನೂರು: ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥ ಜ| ಬಿಪಿನ್‌ ರಾವತ್‌, ಅವರ ಪತ್ನಿ ಮತ್ತು 11 ಅಧಿಕಾರಿಗಳು ದುರ್ಮ ರಣಕ್ಕೀಡಾಗಿರುವ ಹೆಲಿಕಾಪ್ಟರ್‌ ದುರಂತದ ಬಗ್ಗೆ ಮೂರು ಪಡೆಗಳನ್ನು ಒಳಗೊಂಡ ತಂಡ ತನಿಖೆ ಆರಂ ಭಿಸಿದೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್‌ ದುರಂತದ ಬಗ್ಗೆ ಸಂಸತ್ತಿನ ಉಭಯ ಸದನಗಳಿಗೆ ರಾಜನಾಥ್‌ ಸಿಂಗ್‌ ಮಾಹಿತಿ ನೀಡಿದರು. ಈ ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ಏರ್‌ ಮಾರ್ಷಲ್‌ ಮಾನವೇಂದ್ರ ಸಿಂಗ್‌ ಅವರ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ಅವಘಡಕ್ಕೀಡಾದ ಹೆಲಿಕಾಪ್ಟರ್‌ನಲ್ಲಿ ಒಟ್ಟು 14 ಮಂದಿ ಇದ್ದು, 13 ಮಂದಿ ಮೃತಪಟ್ಟಿದ್ದಾರೆ. ಐಎಎಫ್ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಮಾತ್ರ ಬದುಕುಳಿದಿದ್ದಾರೆ. ವಾಯುಪಡೆಯೇ ತನಿಖೆಗೆ ಆದೇಶಿಸಿದ್ದು, ಏ|ಮಾ| ಮಾನವೇಂದ್ರ ಸಿಂಗ್‌ ನೇತೃತ್ವದ ತಂಡ ಬುಧವಾರವೇ ಸ್ಥಳಕ್ಕೆ  ತೆರಳಿದೆ ಎಂದರು.

ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರಾಗಿದ್ದ ಜ| ಬಿಪಿನ್‌ ರಾವತ್‌ ಅವರ ಅಂತ್ಯಕ್ರಿಯೆಯನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಮೃತಪಟ್ಟಿರುವ ಇತರ ಅಧಿಕಾರಿಗಳ ಅಂತ್ಯಸಂಸ್ಕಾರವನ್ನು ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುತ್ತದೆ ಎಂದರು.

ರಾಷ್ಟ್ರಪತಿಗೆ ಮಾಹಿತಿ:

ಉಭಯ ಸದನಗಳಿಗೆ ಮಾಹಿತಿ ನೀಡಿದ ಬಳಿಕ ರಾಜನಾಥ್‌ ಸಿಂಗ್‌ ರಾಷ್ಟ್ರಪತಿ ಭವನಕ್ಕೆ ತೆರಳಿ, ರಾಷ್ಟ್ರಪತಿ ಮತ್ತು ಸೇನೆಯ ಮಹಾದಂಡ ನಾಯಕ ರಾಮನಾಥ ಕೋವಿಂದ್‌ ಅವರಿಗೆ ದುರ್ಘ‌ಟನೆಯ ಬಗ್ಗೆ ವಿವರಣೆ ನೀಡಿದರು.

ತನಿಖೆಗೆ ಆದೇಶ ನೀಡಿರುವ ವಿವರ, ಜ| ರಾವತ್‌ ಮತ್ತಿತರರು ವೆಲ್ಲಿಂಗ್ಟನ್‌ಗೆ ಯಾಕೆ ತೆರಳುತ್ತಿದ್ದರು ಎಂಬ ಬಗ್ಗೆಯೂ ಸ್ಪಷ್ಟನೆ ನೀಡಿದರಲ್ಲದೆ,  ತೆರವಾಗಿರುವ ಸಿಡಿಎಸ್‌ ಹುದ್ದೆ ಬಗ್ಗೆ ಮಾಹಿತಿ ನೀಡಿದರು.

ಬ್ಲ್ಯಾಕ್‌ ಬಾಕ್ಸ್‌ ವಶಕ್ಕೆ :

ಈಗಾಗಲೇ ತನಿಖೆ ಆರಂಭಿಸಿರುವ ವಾಯುಪಡೆಯ ಅಧಿಕಾರಿಗಳು ಘಟನ ಸ್ಥಳದಿಂದ ಬ್ಲ್ಯಾಕ್‌ ಬಾಕ್ಸ್‌ ಅನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಇದನ್ನು ತನಿಖೆಗಾಗಿ ಕಳುಹಿಸಲಾಗಿದ್ದು, ಪೈಲಟ್‌ಗಳ ಕೊನೆಯ ಕ್ಷಣದ ಮಾತುಕತೆಗಳು, ರವಾನೆಯಾಗಿರುವ ಸಂದೇಶಗಳು ಮತ್ತಿತರ ಮಾಹಿತಿಗಳು ತಿಳಿದುಬರಲಿದ್ದು, ದುರಂತ ಹೇಗಾ ಯಿತು ಎಂಬುದು ತಿಳಿಯಲಿದೆ.

ಪ್ರಧಾನಿ, ರಕ್ಷಣ ಸಚಿವರ ನಮನ :

ಜ| ಬಿಪಿನ್‌ ರಾವತ್‌, ಅವರ ಪತ್ನಿ ಮಧುಲಿಕಾ ರಾವತ್‌ ಮತ್ತು 11 ಸಿಬಂದಿಯ ಪಾರ್ಥಿವ ಶರೀರಗಳನ್ನು ತಮಿಳುನಾಡಿನಿಂದ ಹೊಸದಿಲ್ಲಿಗೆ ಗುರುವಾರ ರಾತ್ರಿ 8ರ ವೇಳೆಗೆ ತರಲಾಯಿತು. ಪಾಲಂ ವಿಮಾನ ನಿಲ್ದಾಣಕ್ಕೆ  ಆಗಮಿಸಿದ ಪಾರ್ಥಿವ ಶರೀರಗಳನ್ನು ಮೂರು ಸೇನಾ ಪಡೆಗಳ  ಮುಖ್ಯಸ್ಥರು ಬರಮಾಡಿಕೊಂಡರು. ಬಳಿಕ ರಾತ್ರಿ 9ರ ವೇಳೆಗೆ ಪ್ರಧಾನಿ  ಮೋದಿ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ರಾಷ್ಟ್ರೀಯ ಭದ್ರತ ಸಲಹೆಗಾರ ಅಜಿತ್‌ ದೋವಲ್‌ ಮತ್ತಿತರ ಗಣ್ಯರು ಜ| ರಾವತ್‌ ಸಹಿತ ಎಲ್ಲರ ಪಾರ್ಥಿವ ಶರೀರಗಳಿಗೆ ಗೌರವ ಅರ್ಪಿಸಿದರು.

ಬೆಂಗಳೂರಿನ ಆಸ್ಪತ್ರೆಗೆ ಕ್ಯಾ| ವರುಣ್‌ ಸಿಂಗ್‌ :

ತಮಿಳುನಾಡಿನ ಕೂನೂರಿನಲ್ಲಿ ಘಟಿಸಿದ ಹೆಲಿಕಾಪ್ಟರ್‌ ಅಪಘಾತದಲ್ಲಿ ಬದುಕಿ ಉಳಿದಿರುವ ಏಕಮಾತ್ರ ಅಧಿಕಾರಿ, ಐಎಎಫ್ನ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರನ್ನು ಬೆಂಗಳೂರಿನಲ್ಲಿರುವ ಐಎಎಫ್ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವೆಲ್ಲಿಂಗ್ಟನ್‌ನಲ್ಲಿ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಸಿಂಗ್‌ ಅವರನ್ನು ಜೀವರಕ್ಷಕ ವ್ಯವಸ್ಥೆಯಡಿ ಇರಿಸಲಾಗಿತ್ತು. ಅದೇ ಸ್ಥಿತಿಯಲ್ಲಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

ಜ| ನರವಾಣೆ ಹೊಸ ಸಿಡಿಎಸ್‌? :

ಜ| ಬಿಪಿನ್‌ ರಾವತ್‌ ಅವರ ಅಕಾಲಿಕ ನಿಧನದಿಂದಾಗಿ ರಕ್ಷಣ ಪಡೆಗಳ ಮುಖ್ಯಸ್ಥರ ಸ್ಥಾನ ತೆರವಾಗಿದ್ದು, ಈ ಹುದ್ದೆಗೆ ಹಾಲಿ ಭೂಸೇನಾ ಮುಖ್ಯಸ್ಥ ಜ| ನರವಾಣೆ ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಇನ್ನು 5 ತಿಂಗಳುಗಳಲ್ಲಿ ಜ| ನರವಾಣೆ ನಿವೃತ್ತರಾಗಲಿದ್ದಾರೆ. 3 ಪಡೆಗಳ ಮುಖ್ಯಸ್ಥರ ಪೈಕಿ ಇವರೇ ಹಿರಿಯರು. ಸದ್ಯದಲ್ಲೇ 3 ಪಡೆಗಳ ಉನ್ನತ ಅಧಿಕಾರಿಗಳನ್ನು ಒಳಗೊಂಡ ಸಮಿತಿಯೊಂದನ್ನು ಕೇಂದ್ರ ಸರಕಾರ ರಚಿಸಲಿದೆ. ಇದು ಎರಡು-ಮೂರು ದಿನಗಳಲ್ಲಿ ರಕ್ಷಣ ಸಚಿವರಿಗೆ ಶಿಫಾರಸು ಮಾಡಲಿದೆ. ಅವರು ಅದನ್ನು ಅಂಗೀಕರಿಸಿ, ಸಂಪುಟದ ಆಯ್ಕೆ ಸಮಿತಿಗೆ ಕಳುಹಿಸಲಿದ್ದಾರೆ. ಅಲ್ಲಿ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಜ| ನರವಾಣೆ ಅವರೇ ಮುಂದಿನ ಸಿಡಿಎಸ್‌ ಆಗಬಹುದು ಎಂದು ಸರಕಾರದ ಮೂಲಗಳು ಹೇಳಿವೆ. ಇವರು ಪೂರ್ವ ಲಡಾಖ್‌ ಘರ್ಷಣೆಯನ್ನು ಎದುರಿಸಿದ ರೀತಿಯ ಬಗ್ಗೆ ಉತ್ತಮ ಅಭಿಪ್ರಾಯಗಳಿವೆ.  ಸಿಡಿಎಸ್‌ ಹುದ್ದೆಯ ನಿವೃತ್ತಿ ವಯಸ್ಸು 65. ಮೂರು ರಕ್ಷಣ ಪಡೆಗಳ ಮುಖ್ಯಸ್ಥರ ನಿವೃತ್ತಿ ವಯಸ್ಸು 62. ಇವರಲ್ಲಿ ಸೀನಿಯರ್‌ ಸಿಡಿಎಸ್‌ ಹುದ್ದೆಗೆ ಆಯ್ಕೆಯಾಗಲಿದ್ದು, ಅವರ ನಿವೃತ್ತಿ ವಯಸ್ಸು 3 ವರ್ಷ ವಿಸ್ತರಣೆಯಾಗುತ್ತದೆ.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.