ಚೋರನಿಗೆ ಮಾತ್ರ ಚೌಕೀದಾರನ ಭಯ: ರಾಹುಲ್‌ಗೆ ಪ್ರಧಾನಿ ಮೋದಿ ಟಾಂಗ್‌


Team Udayavani, Jan 5, 2019, 2:00 PM IST

modi-chowkidar-700.jpg

ಬಾರಿಪಾಡ : ”ಚೋರನಿಗೆ ಮಾತ್ರವೇ ಚೌಕೀದಾರನ ಭಯ; ಚೌಕೀದಾರ ಇಲ್ಲದಿರುವುದನ್ನು ಚೋರ ಮಾತ್ರವೇ ಬಯಸುತ್ತಾನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪದೇ ಪದೇ ತನ್ನನ್ನು ‘ಚೌಕೀದಾರ್‌’ ಎಂದು ಲೇವಡಿ ಮಾಡುವುದಕ್ಕೆ ಪ್ರತಿಯಾಗಿ ಸರಿಯಾದ ರೀತಿಯಲ್ಲಿ  ಟಾಂಗ್‌ ನೀಡಿದ್ದಾರೆ. 

“ಚೋರನು ಯಾವತ್ತೂ ಚೌಕೀದಾರನನ್ನು ಹೊರಗಟ್ಟುವುದನ್ನು ಬಯಸುತ್ತಾನೆ. ಸಮಾಜವೇ ಇರಲಿ, ಕಾರ್ಖಾನೆಯೇ ಇರಲಿ – ಕಳ್ಳರು ಯಾವತ್ತೂ ಮೊದಲು ಚೌಕೀದಾರನನ್ನು ತೆಗೆಯಲು ಯತ್ನಿಸುತ್ತಾರೆ; ಏಕೆಂದರೆ ಚೌಕೀದಾರ ಇಲ್ಲದಿದ್ದರೆ ಅವರ ಕೆಲಸ ಸುಲಭವಾಗುತ್ತದೆ ! ಚೌಕೀದಾರ ಇರುವಷ್ಟು ಕಾಲ ಚೋರನಿಗೆ ಕಳ್ಳತನ ಮಾಡುವುದು ಅಸಾಧ್ಯವಾಗುತ್ತದೆ” ಎಂದು ಪ್ರಧಾನಿ ಮೋದಿ ಅವರು ಒಡಿಶಾದ ಬಾರಿಪಾಡದಲ್ಲಿ ಬಿಜೆಪಿ ಏರ್ಪಡಿಸಿದ್ದ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು. 

ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಹಗರಣವನ್ನು ಕೆದಕಿದ ಪ್ರಧಾನಿ ಮೊದಿ, “ಯುಪಿಯ ಕಾಲದಲ್ಲಿ ಕಾಂಗ್ರೆಸ್‌ ಪಕ್ಷ ಸರಕಾರವನ್ನು ನಡೆಸುತ್ತಿತ್ತೇ ಅಥವಾ ಮಿಶೆಲ್‌ ಮಾಮಾ ಸರಕಾರವನ್ನು ನಡೆಸುತ್ತಿದ್ದರೇ ಎಂಬುದು ಅರ್ಥವಾಗುವುದಿಲ್ಲ. ಆದರೆ ಕಾನೂನು ಮಾತ್ರ ಯಾರನ್ನೂ ಎಸ್ಕೇಪ್‌ ಆಗಲು ಬಿಡುವುದಿಲ್ಲ” ಎಂದು ಖಡಕ್‌ ಆಗಿ ನುಡಿದರು.

“2004ರಿಂದ 2014ರ ವರೆಗೆ ದೇಶದ ಸೇನೆಯನ್ನು ದುರ್ಬಲಗೊಳಿಸುವ ಒಂದು ಪಿತೂರಿಯೇ ನಡೆದಿತ್ತು. ಈಗ ದೇಶ ಗಮನಿಸುತ್ತಿದೆ ಮತ್ತು ಅರ್ಥ ಮಾಡಿಕೊಳ್ಳುತ್ತಿದೆ. ಈಗ ನಮ್ಮ ಸರಕಾರ ಸೇನೆಗೆ ಖೆಡ್ಡಾದಿಂದ ಮೇಲೆ ಬರಲು ನೆರವಾಗುತ್ತಿದೆ’ ಎಂದು ಮೋದಿ ಹೇಳಿದರು. 

ಅಗಸ್ಟಾ ಹಗರಣದಲ್ಲಿನ ಮಧ್ಯವರ್ತಿ ಕ್ರಿಸ್ಟಿಯನ್‌ ಮಿಶೆಲ್‌ ನ ಪತ್ರಗಳ ಕುರಿತಾದ ವರದಿಯನ್ನು ಉಲ್ಲೇಖೀಸಿ ಮಾತನಾಡಿದ ಮೋದಿ, ‘ಮಿಶೆಲ್‌ ಗೆ ಕಾಂಗ್ರೆಸ್‌ ನಾಯಕರು ಮತ್ತು ಸಚಿವರ ನಿಕಟ ಸಂಬಂಧ, ಸಂಪರ್ಕ ಇತ್ತು’ ಎಂದು ಹೇಳಿದರು. ‘ಅಂದಿನ ಪ್ರಧಾನಿಗಿಂತಲೂ ಹೆಚ್ಚಿನ ಮಾಹಿತಿ ಮಿಶೆಲ್‌ಗೆ ಇದ್ದಿರಬೇಕು’ ಎಂದವರು ಹೇಳಿದರು. 

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.