ಚೌಕಿದಾರ್ ಚೋರ್ ಹೈ ಹೇಳಿಕೆ : ರಾಹುಲ್ಗೆ ಮುಖಭಂಗ
Team Udayavani, Apr 23, 2019, 6:06 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣ ರ್ಯಾಲಿಗಳಲ್ಲಿ ಮಾತನಾಡು ವಾಗ ಚೌಕಿ ದಾರ್ ಚೋರ್ ಹೈ (ಕಾವಲುಗಾರ ಕಳ್ಳ) ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎನ್ನುತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಭಾರೀ ಮುಖಭಂಗವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಅಫಿದವಿತ್ ಸಲ್ಲಿಸಿದ ರಾಹುಲ್ ಈ ಹೇಳಿಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಅಷ್ಟೇ ಅಲ್ಲ, ಚುನಾವಣೆ ಭಾಷಣಗಳಲ್ಲಿ ಇಂತಹ ಹೇಳಿಕೆಯನ್ನು ಪುನರಾವರ್ತಿಸುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಈ ಶಬ್ದವನ್ನು ಬಳಸಿಲ್ಲ. ಚುನಾವಣ ಪ್ರಚಾರ ನಡೆಸುವ ಭರದಲ್ಲಿ ಈ ಹೇಳಿಕೆ ಹೊರಬಂದಿದೆ ಎಂದು ರಾಹುಲ್ ತಪ್ಪೊಪ್ಪಿಕೊಂಡಿದ್ದಾರೆ. ಬಿಜೆಪಿ ನಾಯಕಿ ಮೀನಾಕ್ಷಿ ಲೇಖೀ ರಾಹುಲ್ ವಿರುದ್ಧ ದೂರು ಸಲ್ಲಿಸಿದ್ದರು. ಅಲ್ಲದೆ, ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದ ಕೋರ್ಟ್ ತೀರ್ಪಿನಲ್ಲಿ ಚೌಕಿದಾರ ಚೋರ್ ಎಂಬುದಾಗಿ ಉಲ್ಲೇಖೀಸಿಲ್ಲ ಎಂದಿತ್ತು.
ಈ ಬಗ್ಗೆ ಮಾತನಾಡಿದ ಲೇಖೀ, ಇದು ರಾಹುಲ್ರ ತಪ್ಪೊಪ್ಪಿಗೆ. ಅಷ್ಟೇ ಅಲ್ಲ, ನ್ಯಾಯಾಲಯದ ಹಾಗೂ ನ್ಯಾಯಾಧೀಶರ ಘನತೆಯನ್ನು ಕುಗ್ಗಿಸಲು ರಾಹುಲ್ ನಡೆಸಿದ ಕೃತ್ಯ ಇದು. ಈ ಹೇಳಿಕೆ ನ್ಯಾಯಾಂಗ ನಿಂದನೆಯೂ ಆಗಿದೆ ಎಂದು ಹೇಳಿದ್ದಾರೆ.
ಮತ್ತೆ ಚೌಕಿದಾರ್ ಚೋರ್ ಎಂದ ರಾಹುಲ್!
ಒಂದೆಡೆ ಚೌಕಿದಾರ್ ಚೋರ್ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿಲ್ಲ ಎಂಬುದಾಗಿ ಅಫಿದವಿತ್ ಸಲ್ಲಿಸುತ್ತಿದ್ದಂತೆಯೇ ಟ್ವೀಟ್ ಮಾಡಿದ ರಾಹುಲ್, ಕಮಲದ ಬ್ರಾಂಡ್ನ ಚೌಕಿದಾರ ಕಳ್ಳನೇ ಹೌದು ಎಂಬುದನ್ನು ಮೇ 23ರಂದು ಜನರ ನ್ಯಾಯಾಲಯ ನಿರ್ಧರಿಸುತ್ತದೆ. ಅಂದು ನ್ಯಾಯ ಸಿಗುತ್ತದೆ. ಬಡವರಿಂದ ಲೂಟಿ ಮಾಡಿ ತನ್ನ ಶ್ರೀಮಂತ ಸ್ನೇಹಿತರಿಗೆ ಲಾಭ ಮಾಡಿಕೊಟ್ಟ ಚೌಕಿದಾರನಿಗೆ ಶಿಕ್ಷೆ ಕೊಡುತ್ತದೆ ಎಂದಿದ್ದಾರೆ.
ರಾಹುಲ್ ಕ್ಷಮೆ ಕೇಳಲಿ
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ, ರಾಹುಲ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ. ರಾಹುಲ್ ಮೊದಲ ಕ್ರಮಾಂಕದ ಸುಳ್ಳುಗಾರ. ರಫೇಲ್ ಒಪ್ಪಂದದಲ್ಲಿ ಮೋದಿ ವಿರುದ್ಧ ನಾನು ಸುಳ್ಳು ಹೇಳಿದ್ದೇನೆ ಎಂಬುದನ್ನು ರಾಹುಲ್ ಈಗ ಒಪ್ಪಿಕೊಂಡಿದ್ದಾರೆ ಎಂಬುದಾಗಿ ಬಿಜೆಪಿ ವಕ್ತಾರ ನರಸಿಂಹರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…