ವಿಎಚ್‌ಪಿ, ಬಜರಂಗ ದಳ ಉಗ್ರ ಸಂಘಟನೆ : ಅಮೆರಿಕದ CIAಯಿಂದ ವಿವಾದ


Team Udayavani, Jun 16, 2018, 2:47 AM IST

cia-600.jpg

ಹೊಸದಿಲ್ಲಿ: ಅಮೆರಿಕದ ಗುಪ್ತಚರ ಸಂಸ್ಥೆ (CIA) ವಿಶ್ವಹಿಂದೂ ಪರಿಷತ್‌ (VHP) ಹಾಗೂ ಬಜರಂಗ ದಳವನ್ನು ‘ಧಾರ್ಮಿಕ ಉಗ್ರ ಸಂಘಟನೆ’ಗಳು ಎಂದು  ಹೆಸರಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಅಮೆರಿಕ ಗುಪ್ತಚರ ಇಲಾಖೆ (CIA) ವಾರ್ಷಿಕವಾಗಿ ಬಿಡುಗಡೆ ಮಾಡುವ ‘ವರ್ಲ್ಡ್ ಫ್ಯಾಕ್ಟ್ ಬುಕ್‌’ನಲ್ಲಿ ಈ ಅಂಶ ಪ್ರಸ್ತಾಪಿಸಲಾಗಿದೆ.  ಈ ಎರಡೂ ಸಂಘಟನೆಗಳನ್ನು ‘ರಾಜಕೀಯವಾಗಿ ಒತ್ತಡ ಹೇರುವ’ ಸಂಘಟನೆಗಳೂ ಎಂದೂ ಪ್ರಸ್ತಾವಿಸಲಾಗಿದೆ. RSS, ಹುರ್ರಿಯತ್‌ ಕಾನ್ಫರೆನ್ಸ್‌, ಜಮೀಯತ್‌ ಉಲೇಮಾ-ಇ-ಹಿಂದ್‌ ಸೇರಿದಂತೆ ದೇಶದ ಹಲವು ಸಂಘಟನೆಗಳನ್ನು ಈ ಗುಂಪಿಗೆ ಸೇರಿಸಲಾಗಿದೆ. RSS ಅನ್ನು ರಾಷ್ಟ್ರೀಯವಾದಿ ಸಂಘಟನೆ, ಹುರ್ರಿಯತ್‌ ಕಾನ್ಫರೆನ್ಸ್‌ಗೆ ಪ್ರತ್ಯೇಕತಾವಾದಿ ಸಂಘಟನೆ, ಜಮೀಯತ್‌ ಉಲೇಮಾವನ್ನು ಧಾರ್ಮಿಕ ಸಂಘಟನೆ ಎಂದು ವರ್ಗೀಕರಿಸಲಾಗಿದೆ.

ಕ್ಷಮೆ ಕೇಳಿ- VHP: ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ VHP, ‘ಈ ಕೂಡಲೇ CIA ಭಾರತೀಯರ ಕ್ಷಮೆ ಕೇಳಬೇಕು. ಇಲ್ಲವಾದರೆ, ಜಾಗತಿಕ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದೆ.

ಟ್ವಿಟರ್‌ ನಲ್ಲಿ ಆಕ್ರೋಶ: CIA ಕ್ರಮದ ಬಗ್ಗೆ ಟ್ವಿಟರ್‌ ನಲ್ಲಿ ಟೀಕಾ ಪ್ರಹಾರ ನಡೆಸಲಾಗಿದೆ. ಜಾಗೃತಿ ಶುಕ್ಲಾ ಎಂಬುವರು, ‘VHP, ಬಜರಂಗದಳಗಳು ಯಾಕೆ ಭಯೋತ್ಪಾದಕ ಸಂಘಟನೆಗಳೆನಿಸಿಕೊಂಡವು? ಮೋದಿ ಸರ್ಕಾರದ ಮೇಲೆ ಒತ್ತಡ ಹೇರಲಿಕ್ಕೋ?’ ಎಂದು ಪ್ರಶ್ನಿಸಿದ್ದಾರೆ. ಹಲವಾರು ಮಂದಿ ತಮ್ಮದೇ ಆದ ರೀತಿಯಲ್ಲಿ ಅಮೆರಿಕವನ್ನು ಟೀಕಿಸಿದ್ದಾರೆ.

ಏನಿದು ಫ್ಯಾಕ್ಟ್ ಬುಕ್‌?  
ಅಮೆರಿಕದ ಗುಪ್ತಚರ ಇಲಾಖೆ ತಾನು ಕ್ರೋಡೀಕರಿಸಿದ ಅನೇಕ ಗುಪ್ತ ಮಾಹಿತಿಗಳ ಸಂಗ್ರಹಗಳನ್ನು ‘ವರ್ಲ್ಡ್ ಫ್ಯಾಕ್ಟ್ ಬುಕ್‌’ ಎಂಬ ಹೆಸರಿನಲ್ಲಿ ವಾರ್ಷಿಕವಾಗಿ ಪ್ರಕಟಿಸುತ್ತದೆ. ಇದರಲ್ಲಿ ಜಗತ್ತಿನ 267 ದೇಶಗಳ ಬಗ್ಗೆ ಮಾಹಿತಿ ಇರುತ್ತದೆ. ಈ ಪುಸ್ತಕ ಸಾರ್ವಜನಿಕರ ಬಳಕೆಗಾಗಿ ಅಲ್ಲದೆ, ಅಮೆರಿಕದ ಸಂಸದರ ಅವಗಾಹನೆಗಾಗಿ ಮಾತ್ರವೇ ಮುದ್ರಿಸಲಾಗುತ್ತದೆ. ವಿವಿಧ ತನಿಖಾ ಸಂಸ್ಥೆಗಳು ಹೆಚ್ಚುವರಿ ಮಾಹಿತಿಗಾಗಿ ಈ ಪುಸ್ತಕವನ್ನು ಬಳಸಿಕೊಳ್ಳುತ್ತವೆ.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.