ವರ್ಗಕ್ಕೆ ಶಿಫಾರಸು ತಂದರೆ ಎಚ್ಚರಿಕೆ! ಕೇಂದ್ರ ಸರಕಾರದಿಂದ ಸುತ್ತೋಲೆ ಜಾರಿ
Team Udayavani, Dec 6, 2021, 7:10 AM IST
ಹೊಸದಿಲ್ಲಿ: ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ ವೇಳೆ ರಾಜಕೀಯ ಪ್ರಭಾವ ಬಳಕೆ ಮಾಡಲಾಗುತ್ತದೆ ಎನ್ನುವ ಆರೋಪ ಸಾಮಾನ್ಯ. ಇಂಥ “ಶಿಫಾರಸು ಸಂಸ್ಕೃತಿ’ಗೆ ತೆರೆ ಎಳೆಯಲು ಕೇಂದ್ರ ಸರಕಾರ ಮುಂದಾಗಿದೆ.
ಕೇಂದ್ರ ಸರಕಾರದ ಸಿಬಂದಿ ಮತ್ತು ತರಬೇತಿ ಸಚಿವಾಲಯವು ಡಿ. 3ರಂದು ಈ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ. ಕೇಂದ್ರ ಸರಕಾರದ ಉದ್ಯೋಗಿಗಳು ವರ್ಗಾವಣೆ ವಿಚಾರದಲ್ಲಿ “ರಾಜಕೀಯ ನೆರವು’ ಪಡೆದಿರುವುದು ಕಂಡುಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅಂಥವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
ವಿವಿಧ ಕೇಡರ್ಗಳ ನಡುವೆ ವರ್ಗಾವಣೆ ಬಯಸುವ ಅಧಿಕಾರಿಗಳು “ಬೇಕಾದ ಕೇಡರ್ಗೆ ವರ್ಗಾವಣೆ’ ಯಾಗಲು ರಾಜಕೀಯ ಪ್ರಭಾವ ಹೇರುತ್ತಿದ್ದಾರೆ. ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳಲ್ಲಿ ಇಂಥ ಬೆಳವಣಿಗೆ ಕಂಡುಬಂದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸಚಿವಾಲಯ ಈ ಸುತ್ತೋಲೆ ಹೊರಡಿಸಿದೆ.
ಇದನ್ನೂ ಓದಿ:ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್ ಬ್ರಿಡ್ಜ್?
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ದರ್ಜೆಯ ಅಧಿಕಾರಿಗಳು ಲೋಕಸಭೆ ಅಥವಾ ರಾಜ್ಯಸಭೆಯ ಸದಸ್ಯರ ಮೂಲಕ, ಕೇಂದ್ರ ಸಚಿವರ ಮೂಲಕ ಬೇಕಾದಲ್ಲಿಗೆ ವರ್ಗ ಬಯಸಿ ಕೋರಿಕೆ ಸಲ್ಲಿಸುತ್ತಿದ್ದಾರೆ. ಇಂಥ ಕ್ರಮ 1964ರ ಸೇವಾ ನಿಯಮಗಳ ಕಾಯ್ದೆಯ ನಿಯಮ 20ರ ಉಲ್ಲಂಘನೆ ಎಂದು ಸರಕಾರ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ