ಮೋದಿ ಪ್ರಮಾಣ ವಚನಕ್ಕೆ ತೆರಳುವುದಿಲ್ಲ; ಮಮತಾ ಮನಸ್ಸು ಬದಲು
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದುಕೊಂಡಿದ್ದೆ.ಆದರೆ...
Team Udayavani, May 29, 2019, 2:51 PM IST
ಕೋಲ್ಕತಾ : ಮೇ 30 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಸಿದ್ದವಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನಸ್ಸು ಬದಲಾಯಿಸಿ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಬುಧವಾರ ಟ್ವೀಟ್ ಮಾಡಿರುವ ಮಮತಾ , ಅಭಿನಂದನೆಗಳು ಪ್ರಧಾನಿ ನರೇಂದ್ರ ಮೋದಿ ಅವರೇ, ನಾನು ಸಾಂವಿಧಾನಿಕ ಆಮಂತ್ರಣವನ್ನುಸ್ವೀಕರಿಸಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದುಕೊಂಡಿದ್ದೆ. ಆದರೆ, ಕಳೆದ1 ಗಂಟೆಗಳಿಂದ ಮಾಧ್ಯಮಗಳ ವರದಿ ನೋಡುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ 54 ರಾಜಕೀಯ ಹತ್ಯೆಗಳು ನಡೆದಿವೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇದು ಸಂಪೂರ್ಣ ತಪ್ಪುವರದಿ. ಬಂಗಾಳದಲ್ಲಿ ಯಾವುದೇ ರಾಜಕೀಯ ಹತ್ಯೆಗಳು ನಡೆದಿಲ್ಲ. ವೈಯಕ್ತಿಕ ವೈರತ್ವ, ಕುಟುಂಬ ಕಲಹ ಮತ್ತು ಇತರ ವಿವಾದಗಳಿಂದ ಹತ್ಯೆಗಳು ನಡೆದಿವೆ. ಯಾವುದೂ ರಾಜಕೀಯ ಹತ್ಯೆಗಳಲ್ಲ.ನಮ್ಮ ಬಳಿ ಆ ರೀತಿಯ ದಾಖಲೆಗಳು ಇಲ್ಲ.
ಕ್ಷಮಿಸಿ ನರೇಂದ್ರ ಮೋದಿ ಜಿ, ಈ ವಿಚಾರಗಳು ನನ್ನನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಡೆದಿವೆ ಎಂದು ಬರೆದಿದ್ದಾರೆ.
ಸಮಾರಂಭವು ಪ್ರಜಾಪ್ರಭುತ್ವ ಉತ್ಸವವನ್ನು ಆಚರಿಸಲು ಒಂದು ಸಂದರ್ಭವಾಗಿದೆ, ಯಾವುದೇ ರಾಜಕೀಯ ಪಕ್ಷ ರಾಜಕೀಯ ಲಾಭ ಗಳಿಸಲು ಅವಕಾಶವನ್ನು ಬಳಸಿಕೊಳ್ಳುವಂತಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ