ಸಹೋದ್ಯೋಗಿಗಳಿಗೆ ಗುಂಡೆಸೆದ ಸಿಐಎಸ್ಎಫ್ ಜವಾನ; 3 ಸಾವು
Team Udayavani, Jan 12, 2017, 3:18 PM IST
ಪಟ್ನಾ : ಬಿಹಾರದ ಔರಂಗಾಬಾದ್ ಜಿಲ್ಲೆಯ ನಬೀನಗರ್ ಪವರ್ ಜನರೇಶನ್ ಕಂಪೆನಿ ಲಿಮಿಟೆಡ್ (ಎನ್ಪಿಜಿಸಿಎಲ್)ನ ಘಟಕದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್ಎಫ್ ಜವಾನನೋರ್ವ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಾಟ ನಡೆಸಿ ಮೂವರನ್ನು ಕೊಂದು ಇನ್ನೋರ್ವನನ್ನು ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ವರದಿಯಾಗಿದೆ.
ಆರೋಪಿ ಜವನಾನನ್ನು ಕಾನ್ಸ್ಟೆಬಲ್ ಬಲವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಆಲಿಗಢದವನು. ಈತನು ಹಾರಿಸಿದ ಗುಂಡಿಗೆ ಮೃತಪಟ್ಟವರು ಓರ್ವ ಹೆಡ್ ಕಾನ್ಸ್ಟೆಬಲ್, ಓರ್ವ ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ಓರ್ವ ಕಾನ್ಸ್ಟೆಬಲ್. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವರು ಹೆಡ್ ಕಾನ್ಸ್ಟೆಬಲ್.
ರಜೆಗೆ ಸಂಬಂಧಿಸಿ ವಿವಾದದಲ್ಲಿ ತನ್ನ ಸಹನೆ ಕಳೆದುಕೊಂಡ ಜವಾನ ಸಹೋದ್ಯೋಗಿಗಳ ಮೇಲೆ ತನ್ನ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಸುಪರಿಂಟೆಂಡೆಂಟ್ ಸತ್ಯಪ್ರಕಾಶ್ ತಿಳಿಸಿದ್ದಾರೆ.
ಆರೋಪಿ ಜವಾನನ್ನು ಬಂಧಿಸಲಾಗಿದೆ. ಎರಡು ತಿಂಗಳ ಯೋಗ ಕೋರ್ಸ್ ಮುಗಿಸಿ ಕರ್ತವ್ಯಕ್ಕೆ ಮರಳಿದ್ದ ಬಲವೀರ್ಗೆ ರಜೆಗೆ ಸಂಬಂಧಿಸಿದಂತೆ ಕೆಲವೊಂದು ಸಮಸ್ಯೆಗಳಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್