ಅಸ್ಸಾಂನಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ಉಪವಾಸ ಸತ್ಯಾಗ್ರಹಕ್ಕೆ ಎಎಎಸ್ ಯು ಕರೆ
Team Udayavani, Dec 13, 2019, 11:16 AM IST
ನವದೆಹಲಿ: ಅಸ್ಸಾಂನ ಗುವಾಹಟಿ ಮತ್ತು ದಿಬ್ರುಗಢದಲ್ಲಿ ಅನಿರ್ದಿಷ್ಟಾವಧಿವರೆಗೆ ಜಾರಿಗೊಳಿಸಿದ್ದ ಕರ್ಫ್ಯೂವನ್ನು ಶುಕ್ರವಾರ ಬೆಳಗ್ಗೆ 8ರಿಂದ 1ಗಂಟೆವರೆಗೆ ಸಡಿಸಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆ 2019 ಅನ್ನು ವಿರೋಧಿಸಿ ಅಸ್ಸಾಂನಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಇದೀಗ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಕೆಲಗಂಟೆಗಳ ಕಾಲ ಕರ್ಫ್ಯೂ ಸಡಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮತ್ತೊಂದೆಡೆ ಕೇಂದ್ರದ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಆಲ್ ಇಂಡಿಯಾ ಸ್ಟೂಡೆಂಟ್ಸ್ ಯೂನಿಯನ್ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಿದೆ. ದಿಬ್ರುಗಢದಲ್ಲಿ 24ಗಂಟೆಗಳ ಕಾಲದ ಕರ್ಫ್ಯೂವನ್ನು 48 ಗಂಟೆಗೆ ವಿಸ್ತರಿಸಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ವರದಿ ವಿವರಿಸಿದೆ.
ಅಸ್ಸಾಂನ ಲಾಖಿಂಪುರ್, ಟಿನ್ ಸುಕೀಯಾ, ಧೇಮಾಜಿ, ದಿಬ್ರುಗಢ್, ಚಾರಾಯಿಡೆವೊ, ಸಿವಸಾಗರ್, ಜೋಹ್ರಾತ್, ಗೋಲಾಘಾಟ್, ಕಾಮ್ರಾಪ್ (ಮೆಟ್ರೋ) ಮತ್ತು ಕಾಮ್ರಾಪ್ ಜಿಲ್ಲೆಗಳಲ್ಲಿ 48ಗಂಟೆಗಳ ಕಾಲ ಮೊಬೈಲ್, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್