ಪೌರತ್ವ, ಬಿಜೆಪಿ ಜತೆ ಹೊಂದಾಣಿಕೆ: ಜೆಡಿಯುನಲ್ಲಿ ಭಿನ್ನಮತ
ಪಕ್ಷಾಧ್ಯಕ್ಷ ನಿತೀಶ್ಗೆ ಬರೆದ ಪತ್ರದಲ್ಲಿ ಪವನ್ ವರ್ಮಾ ಆಕ್ಷೇಪ;ಮನಸ್ಸಿದ್ದರೆ ನಮ್ಮ ಜತೆ ಇರಲಿ; ಇಲ್ಲದಿದ್ದರೆ ಹೋಗಲಿ: ನಿತೀಶ್
Team Udayavani, Jan 23, 2020, 9:46 PM IST
ಪಾಟ್ನಾ: ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿರುವ ವಿಚಾರ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿರುವ ವಿಚಾರ ಜೆಡಿಯುನಲ್ಲಿ ಭಿನ್ನಮತ ಭುಗಿಲೇಳಲು ಕಾರಣವಾಗಿದೆ. ರಾಜ್ಯಸಭೆ ಮಾಜಿ ಸದಸ್ಯ, ಜೆಡಿಯು ಹಿರಿಯ ನಾಯಕ ಪವನ್ ವರ್ಮಾ 2 ದಿನಗಳ ಹಿಂದೆ ಬಿಹಾರ ಸಿಎಂ ನಿತೀಶ್ಗೆ ಪತ್ರ ಬರೆದು ಸಿಎಎ, ಎನ್ಪಿಆರ್, ಎನ್ಆರ್ಸಿಗೆ ಬೆಂಬಲ ನೀಡುವುದರ ಬಗ್ಗೆ ತಾತ್ವಿಕ ನಿಲುವು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದರು. ಜತೆಗೆ ಬಿಜೆಪಿ ಸಮಾಜ ವಿಭಜಿಸುವ ಚಿಂತನೆಯಲ್ಲಿದೆ ಎಂದಿದ್ದರು.
ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್ “ಅವರೊಬ್ಬ ವಿದ್ವಾಂಸ. ಅವರ ಬಗ್ಗೆ ನನಗೆ ವೈಯಕ್ತಿಕ ಗೌರವಗಳಿವೆ. ಆದರೆ ಇಂಥ ಹೇಳಿಕೆಗಳನ್ನು ನೀಡಿರುವುದು ನನಗೆ ದಿಗ್ಭ್ರಮೆ ಮೂಡಿಸಿದೆ’ ಎಂದಿದ್ದಾರೆ. ಅವರು ಪ್ರಸ್ತಾಪ ಮಾಡಿರುವ ಬಗ್ಗೆ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಲ್ಲವೂ ಸ್ಪಷ್ಟವಾಗಿದೆ ಎಂದಿದ್ದಾರೆ.
ಪಕ್ಷದಲ್ಲಿ ಇರಲು ಮನಸ್ಸಿಲ್ಲದಿದ್ದರೆ ಅವರು ಹೊರ ನಡೆಯಬಹುದು ಎಂದು ಸೂಚ್ಯವಾಗಿಯೇ ಹೇಳಿದ್ದಾರೆ. ಪೌರತ್ವ ಕಾಯ್ದೆ ಮತ್ತು ಇತರ ವಿಚಾರಗಳಲ್ಲಿ ನೀಡಿರುವ ಬೆಂಬಲ ಹಿಂಪಡೆಯುವುದಿಲ್ಲ ಎಂದಿದ್ದಾರೆ.
ವರ್ಮಾ ತಿರುಗೇಟು: ಬಿಹಾರ ಸಿಎಂ ಮಾತುಗಳಿಗೆ ತಿರುಗೇಟು ನೀಡಿರುವ ವರ್ಮಾ, ಪಕ್ಷದ ಮತ್ತು ದೇಶದ ಹಿತದೃಷ್ಟಿಯಿಂದ ಮಾತನಾಡುವುದನ್ನು ಮುಂದುವರಿಸುತ್ತೇನೆ ಎಂದಿದ್ದಾರೆ. ತಾವು ಪ್ರಸ್ತಾಪ ಮಾಡಿರುವ ಅಂಶಗಳ ಬಗ್ಗೆ ಉತ್ತರ ಸಿಕ್ಕಿಲ್ಲ. ಅದು ಸಿಕ್ಕಿದ ಬಳಿಕ ಮುಂದಿನ ದಾರಿಯ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ