ಮಾನ್ ಮದ್ಯ ಆರೋಪ: ಪರಿಶೀಲನೆಗೆ ಸಿಂಧಿಯಾ ಸಜ್ಜು
Team Udayavani, Sep 21, 2022, 8:10 AM IST
ಹೊಸದಿಲ್ಲಿ: ಮದ್ಯ ಸೇವಿಸಿದ್ದರು ಎಂಬ ಕಾರಣಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ರನ್ನು ಫ್ರಾಂಕ್ಫರ್ಟ್ ಏರ್ಪೋರ್ಟ್ನಲ್ಲಿ ವಿಮಾನದಿಂದ ಕೆಳಗಿಳಿಸಿದರು ಎಂಬ ಶಿರೋಮಣಿ ಅಕಾಲಿ ದಳದ ಆರೋಪ ಕುರಿತಂತೆ ಪರಿಶೀಲಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಮಂಗಳವಾರ ತಿಳಿಸಿದ್ದಾರೆ.
ಸಿಎಂ ಮಾನ್ ಮದ್ಯಪಾನ ಮಾಡಿದ್ದರಿಂದ ಅವರನ್ನು ದಿಲ್ಲಿಗೆ ಹೊರಡುತ್ತಿದ್ದ ವಿಮಾನದಿಂದ ಇಳಿಸಲಾಯಿತು. ಸಿಎಂ ಮಾನ್ ಅವರ ಇಂಥ ನಡವಳಿಕೆಯಿಂದ ಪಂಜಾಬ್ಗ ಅವಮಾನವಾಗಿದೆ ಎಂದು ಸೋಮವಾರ ಅಕಾಲಿ ದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಕಿಡಿಕಾರಿದ್ದರು. ಕಾಂಗ್ರೆಸ್ ಕೂಡ ಈ ಕುರಿತು ತನಿಖೆಗೆ ಆಗ್ರಹಿಸಿತ್ತು. ಇದಕ್ಕೆ ಮಂಗಳವಾರ ಪ್ರತಿಕ್ರಿಯಿಸಿರುವ ಸಚಿವ ಸಿಂಧಿಯಾ, “ಇದು ವಿದೇಶಿ ನೆಲದಲ್ಲಿ ಆಗಿರುವ ಘಟನೆ. ಆದರೆ, ಇದು ಸತ್ಯವೋ, ಸುಳ್ಳೋ ಎಂಬುದನ್ನು ದೃಢಪಡಿಸಿಕೊಳ್ಳಬೇಕು. ಈ ಬಗ್ಗೆ ಪರಿಶೀಲಿಸುತ್ತೇನೆ’ ಎಂದಿದ್ದಾರೆ.
ಇನ್ನು, ಘಟನೆ ಬಗ್ಗೆ ಮಾತನಾಡಿರುವ ಆಪ್ ನಾಯಕ ಕೇಜ್ರಿವಾಲ್, “ಭಗವಂತ್ ಮಾನ್ ಅವರು ಮಾಡುತ್ತಿರುವ ಕೆಲಸದಲ್ಲಿ ಯಾವುದೇ ಲೋಪ ಸಿಗದ ಕಾರಣ, ಅವರ ಮುಖಕ್ಕೆ ಮಸಿ ಬಳಿಯಲು ವಿಪಕ್ಷಗಳು ಇಂಥ ಸುಳ್ಳು ಆರೋಪಗಳನ್ನು ಹಬ್ಬಿಸುತ್ತಿವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ