ಸಿಜೆಐ ಪ್ರಕರಣ: ಹಿಂದೆ ಸರಿದ ಸಂತ್ರಸ್ತೆ
Team Udayavani, May 1, 2019, 6:00 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಸುಪ್ರೀಂ ಕೋರ್ಟ್ನ ಮಾಜಿ ಉದ್ಯೋಗಿ ಇನ್ನು ಮುಂದೆ ನ್ಯಾಯಾಲಯದ ಆಂತರಿಕ ತನಿಖಾ ಸಮಿತಿ ಎದುರು ಹಾಜರಾಗುವುದಿಲ್ಲ ಎಂದು ಘೋಷಿಸಿದ್ದಾರೆ.
ಮಂಗಳವಾರ ತಮ್ಮ ನಿರ್ಧಾರವನ್ನು ತಿಳಿಸಿದ ಅವರು, ‘ನನಗೆ ಸುಪ್ರೀಂ ಕೋರ್ಟ್ನ ಆಂತರಿಕ ತನಿಖಾ ಸಮಿತಿಯಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಅಲ್ಲದೆ, ವಿಚಾರಣೆ ವೇಳೆ ನಾನೊಬ್ಬಳೇ ಸಮಿತಿ ಮುಂದೆ ಹಾಜರಾಗಬೇಕಾಗುತ್ತದೆ. ನನ್ನ ಪರ ವಕೀಲರಿಗೂ ಒಳಗೆ ಬರಲು ಅವಕಾಶ ಕಲ್ಪಿಸುತ್ತಿಲ್ಲ. ವಿಚಾರಣೆಯ ಆಡಿಯೋ ಅಥವಾ ವೀಡಿಯೋ ರೆಕಾರ್ಡಿಂಗ್ ಕೂಡ ಮಾಡಲಾಗುತ್ತಿಲ್ಲ. ನಾನು ವಿಚಾರಣೆಯಿಂದಲೇ ಹಿಂದೆ ಸರಿಯುತ್ತಿದ್ದೇನೆ’ ಎಂದು ಹೇಳಿದ್ದಾರೆ. ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬೆನ್ನಲ್ಲೇ ನ್ಯಾ| ಎಸ್.ಎ. ಬೋಬ್ಡೆ ನೇತೃತ್ವದಲ್ಲಿ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯೇ ವಿಚಾರಣೆ ನಡೆಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ