ಕಿರಿಯರನ್ನು ಗುಲಾಮರಂತೆ ಕಾಣದಿರಿ : ಹಿರಿಯ ವಕೀಲರಿಗೆ ಸಿಜೆಐ ಚಂದ್ರಚೂಡ್ ಸಲಹೆ
Team Udayavani, Nov 21, 2022, 7:15 AM IST
ಹೊಸದಿಲ್ಲಿ : “ಕಿರಿಯ ವಕೀಲರು ಗುಲಾಮರಲ್ಲ. ಉತ್ತಮ ರೀತಿಯಲ್ಲಿ ಜೀವನ ಮಾಡುವಂತಾಗಲು ಅವರಿಗೆ ಉತ್ತಮ ಸಂಬಳ ಕೊಡಬೇಕು’ ಹೀಗೆಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪ್ರತಿಪಾದಿಸಿದ್ದಾರೆ.
ವಕೀಲ ವೃತ್ತಿ ಎನ್ನುವುದು ಕೇವಲ ಹಿರಿಯದ್ದು ಎಂಬ ಭಾವನೆ ಬರುವಂತೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. “ಬೆಂಗಳೂರು, ಕೋಲ್ಕತಾ, ಹೊಸದಿಲ್ಲಿ , ಮುಂಬಯಿಗಳಲ್ಲಿ ಯುವ ವಕೀಲರು ವಾಸಿಸುತ್ತಿದ್ದರೆ, ಅಲ್ಲಿನ ಖರ್ಚುಗಳೆಷ್ಟು? ಅವರು ಊಟೋಪಚಾರ, ಬಾಡಿಗೆ, ಪ್ರಯಾಣಕ್ಕೆ ತಗಲುವ ವೆಚ್ಚ ಹೆಚ್ಚಾಗಿಯೇ ಇದೆ. ಕೆಲವು ಯುವ ವಕೀಲರಿಗೆ ಸೂಕ್ತ ರೀತಿಯಲ್ಲಿ ಸಂಭಾವನೆಯನ್ನೇ ಕೊಡಲಾಗುತ್ತಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಅವರು ಅಭಿಪ್ರಾಯಪಟ್ಟರು.
ದೀರ್ಘ ಕಾಲದಿಂದ ಯುವ ವಕೀಲರನ್ನು ಗುಲಾಮರಂತೆ ಕಾಣಲಾಗುತ್ತಿದೆ. ನಮ್ಮ ಮನೋಭಾವ ಆ ರೀತಿಯೇ ಬೆಳೆದು ಬಂದಿದೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರತಿಪಾದಿಸಿದರು. ನಾವು ಹೀಗೆದ್ದೆವು ಎನ್ನುವಂತಿಲ್ಲ: ನಾವು ನಮ್ಮ ಹಿರಿಯ ವಕೀಲರಿಂದ ಕಷ್ಟಪಟ್ಟು ವಕೀಲಿಕೆಯ ಪಟ್ಟುಗಳನ್ನು ಕಲಿತಿದ್ದೆವು. ಅದನ್ನೇ ನಮ್ಮ ಕಿರಿಯ ವಕೀಲರೂ ಅನುಭವಿಸಬೇಕು ಎಂದು ಈಗ ಹಿರಿಯರಾಗಿರುವವರು ಹೇಳುವುದು ಸೂಕ್ತ ಅಲ್ಲ. ಅದಕ್ಕಾಗಿ ಕಿರಿಯ ವಕೀಲರಿಗೆ ಕಡಿಮೆ ಸಂಬಳ ನೀಡಲಾಗುತ್ತದೆ ಎಂಬ ವಾದ ಒಪ್ಪಲು ಸಾಧ್ಯವಿಲ್ಲ ಎಂದು ಸಿಜೆಐ ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?